ನವದೆಹಲಿ, ನವೆಂಬರ್ 13: ದೆಹಲಿಯಲ್ಲಿ ನವೆಂಬರ್ 10 ರಂದು ನಿಗೂಢ ಸ್ಫೋಟ(ಬ್ಲಾಸ್ಟ್)ವೊಂದು ಸಂಭವಿಸಿತ್ತು. ಪರಿಣಾಮ 10ಕ್ಕೂ ಹೆಚ್ಚು ಮಂದಿ ಕಾಣಿಸಿಕೊಂಡಿದ್ದು, 30 ಮಂದಿ ಅಧಿಕ ಮಂದಿ ಇದ್ದಾರೆ. ಸ್ಫೋಟದ ತೀವ್ರತೆ ಎಷ್ಟೆಂದರೆ ಘಟನೆ ನಡೆದ ಸ್ಥಳದಿಂದ ಸುಮಾರು 300 ಮೀಟರ್ ದೂರದಲ್ಲಿರುವ ಅಂಗಡಿಯೊಂದರ ಮೇಲೆ ವ್ಯಕ್ತಿಯೊಬ್ಬರ ತೋಳು ಸೇರಿದೆ.
12 ಸೆಕೆಂಡುಗಳ ವೀಡಿಯೊದಲ್ಲಿ ಕೆಂಪು ಕೋಟೆ ಕಾರಿಡಾರ್ನ ಎದುರಿನ ಲಜಪತ್ ರಾಯ್ ಮಾರುಕಟ್ಟೆಯ ಅಂಗಡಿಯ ಅಂಗಡಿಯಲ್ಲಿ ಕತ್ತರಿಸಿದ ತೋಳು ಇರುವುದನ್ನು ತೋರಿಸಲಾಗಿದೆ. ಕೇವಲ ಅಮೋನಿಯಂ ನೈಟ್ ಅಲ್ಲ ಸ್ಫೋಟದಲ್ಲಿ ಅದಕ್ಕಿಂತ ಹೆಚ್ಚು ಪ್ರಬಲವಾದ ರಾಸಾಯನಿಕಗಳು ಇರಬಹುದು ಎಂದು ಅಂದಾಜಿಸಲಾಗಿದೆ.
ಸ್ಫೋಟದ ಸ್ಥಳದಿಂದ ಎಫ್ಎಸ್ಎಲ್ ತಂಡವು ಎರಡು ಕಾರ್ಟ್ರಿಡ್ಜ್ಗಳು, ಜೀವಂತ ಮದ್ದುಗುಂಡುಗಳು ಮತ್ತು ಸ್ಫೋಟಕಗಳು ಸೇರಿದಂತೆ 40ಕ್ಕೂ ಹೆಚ್ಚು ಮಾದರಿಗಳನ್ನು ಸಂಗ್ರಹಿಸಲಾಗಿದೆ. ಪ್ರಾಥಮಿಕ ವಿಶ್ಲೇಷಣೆಯು ಸ್ಫೋಟಕ ಮಾದರಿಗಳಲ್ಲಿ ಒಂದು ಅಮೋನಿಯಂ ನೈಟ್ರೇಟ್ ಎಂದು ತೋರುತ್ತಿದೆ ಎಂದು ಅಧಿಕಾರಿ ಹೇಳಿದರು.ಎರಡನೇ ಸ್ಫೋಟಕ ಮಾದರಿಯು ಅಮೋನಿಯಂ ನೈಟ್ರೇಟ್ಗಿಂತ ಹೆಚ್ಚು ಶಕ್ತಿಶಾಲಿಯಾಗಿದೆ ಎಂದು ಹೇಳಲಾಗಿದೆ.
ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ವಿಧಿವಿಜ್ಞಾನ ವಿಭಾಗದ ತಜ್ಞರು, ಕೆಲವು ಮೃತರ ಮೇಲೆ ಅಡ್ಡ ಗಾಯದ ಮಾದರಿಯನ್ನು ಗಮನಿಸಲಾಗಿದೆ. ಅಡ್ಡ-ಗಾಯದ ಮಾದರಿ ಎಂದರೆ ಸ್ಫೋಟದ ಪ್ರಭಾವದಿಂದಾಗಿ ಜನರ ಗೋಡೆಗೆ ಅಥವಾ ನೆಲಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದರ್ಥ. ಮೃತರ ಶ್ವಾಸಕೋಶ, ಕಿವಿ ಮತ್ತು ಹೊಟ್ಟೆಗೆ ಹಾನಿಯಾಗಿದೆ ಎಂಬುದು.
ಸುಮಾರು 8 ಭಯೋತ್ಪಾದಕರ ಸರಣಿ ಸ್ಫೋಟ(ಬ್ಲಾಸ್ಟ್)ಗಳನ್ನು ನಡೆಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ತನಿಖಾ ಸಂಸ್ಥೆಗಳು ಗುರುವಾರ ತಿಳಿಸಿವೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಭಯೋತ್ಪಾದಕರು ತಲಾ ಎರಡು ಗುಂಪುಗಳಾಗಿ ನಾಲ್ಕು ನಗರಗಳಿಗೆ ತೆರಳಲು ಯೋಜಿಸಿದ್ದರು, ಅವರು ತಮ್ಮೊಂದಿಗೆ ಬಹು ಐಡಿಗಳನ್ನು ಸಾಗಿಸಬೇಕಿತ್ತು. ಸುಮಾರು 8 ಶಂಕಿತರು ನಾಲ್ಕು ಸ್ಥಳಗಳಲ್ಲಿ ಸರಣಿ ಸ್ಫೋಟ ನಡೆಸಲು ಯೋಜಿಸಿದ್ದರು.
ಮತ್ತಷ್ಟು ಓದಿ: ದೆಹಲಿ ನಿಗೂಢ ಸ್ಫೋಟ: ಡಾ. ಉಮರ್ ಹಾಗೂ ಇತರ ಉಗ್ರರಿಗೆ ಟರ್ಕಿಶ್ ಹ್ಯಾಂಡ್ಲರ್ ‘ಯುಕಾಸಾ’ ಜತೆ ಇತ್ತು
ಅವರು ತಲಾ ಎರಡು ಗುಂಪುಗಳಾಗಿ ನಾಲ್ಕು ನಗರಗಳಿಗೆ ತೆರಳಲು ಯೋಜಿಸಿದ್ದರು. ತನಿಖಾ ಸಂಸ್ಥೆಯ ಮೂಲಗಳು ಎನ್ಐಗೆ ತಿಳಿಸುವಂತೆ ಡಾ. ಮುಜಮ್ಮಿಲ್, ಡಾ. ಅದೀಲ್, ಉಮರ್ ಮತ್ತು ಶಾಹೀನ್ ಜಂಟಿಯಾಗಿ ಸುಮಾರು 20 ಲಕ್ಷ ರೂ. ನಗದನ್ನು ಸಂಗ್ರಹಿಸಿದ್ದು, ದೆಹಲಿ ಸ್ಫೋಟದ ನಂತರ ಅದನ್ನು ಉಮರ್ಗೆ ಹಸ್ತಾಂತರಿಸಲಾಗಿದೆ.
ನಂತರ ಅವರ ಗುರುಗ್ರಾಮ, ನೂಹ್ ಮತ್ತು ಹತ್ತಿರದ ಪ್ರದೇಶಗಳಿಂದ ಐಇಡಿ ತಯಾರಿಕೆಗಾಗಿ ಉದ್ದೇಶಿಸಲಾದ 3 ಲಕ್ಷ ರೂ. ಮೌಲ್ಯದ 20 ಕ್ವಿಂಟಾಲ್ಗೂ ಹೆಚ್ಚು ಎನ್ಪಿಕೆ ರಸಗೊಬ್ಬರವನ್ನು ಖರೀದಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ