ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಶಾಲಾ ಶಿಕ್ಷಕ ಸಂಶುಲ್ ಹಸನ್ ಸಸ್ಪೆಂಡ್ ಮಾಡಿದ ಯೋಗಿ ಸರ್ಕಾರ | School Teacher Suspended After Oppose Singing National Anthem In Uttar Pradesh

ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಶಾಲಾ ಶಿಕ್ಷಕ ಸಂಶುಲ್ ಹಸನ್ ಸಸ್ಪೆಂಡ್ ಮಾಡಿದ ಯೋಗಿ ಸರ್ಕಾರ | School Teacher Suspended After Oppose Singing National Anthem In Uttar Pradesh



ರಾಷ್ಟ್ರಗೀತೆ ಹಾಡಲು ನಿರಾಕರಿಸಿದ ಶಾಲಾ ಶಿಕ್ಷಕ ಸಂಶುಲ್ ಹಸನ್ ಸಸ್ಪೆಂಡ್ ಮಾಡಿದ ಯೋಗಿ ಸರ್ಕಾರ | School Teacher Suspended After Oppose Singing National Anthem In Uttar Pradesh

ರಾಷ್ಟ್ರಗೀತೆ ನಿರಾಕರಿಸಿದ ಪ್ರಾಥಮಿಕ ಶಾಲಾ ಶಿಕ್ಷಕ ಸಂಶುಲ್ ಹಸನ್ ಸಸ್ಪೆಂಡ್ ಮಾಡಿದ ಯೋಗಿ ಸರ್ಕಾರ , ಬೆಳಗ್ಗಿನ ಪ್ರಾರ್ಥನೆ ವೇಳೆ ರಾಷ್ಟ್ರಗೀತಿ ಹಾಡಲು ಶಿಕ್ಷಕ ನಿರಾಕರಿಸಿದ್ದು ಮಾತ್ರವಲ್ಲ, ಅಗೌರವ ತೋರಿದ್ದಾರೆ. ತಕ್ಷಣವೇ ಶಿಕ್ಷಣಾಧಿಕಾರಿ ಅಮಾನತು ಮಾಡಿದ್ದಾರೆ.

ಅಲಿಘಡ (ನ.13) ಉತ್ತರ ಪ್ರದೇಶದಲ್ಲಿ ನಿಮಯ ವಿರುದ್ದವಾಗಿ ನಡೆದುಕೊಂಡರೆ, ದೇಶಕ್ಕೆ ಅಗೌರವ ತೋರಿದರೆ, ರಾಷ್ಟ್ರಗೀತೆ, ರಾಷ್ಟ ದ್ವಜ ಸೇರದಂತೆ ದೇಶಕ್ಕೆ ಅಪಮಾನ ಮಾಡಿದರೆ ರಾಜಾರೋಷವಾಗಿ ಓಡಾಡಲು ಸಾಧ್ಯವಿಲ್ಲ. ತಕ್ಷಣವೇ ಕ್ರಮಗಳಾಗುತ್ತದೆ. ಇದೀಗ ಅಲಿಘಡದ ಶಹಾಪುರ್ ಖುತುಬ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬೆಳಗಿನ ಶಾಲಾ ಪ್ರಾರ್ಥನೆ ವೇಳೆ ರಾಷ್ಟ್ರಗೀತೆ ಹಾಡಲು ನಿರಾಕರಿಸಿದ್ದಾನೆ. ಇಷ್ಟೇ ಅಲ್ಲ ರಾಷ್ಟ್ರಗೀತೆಗೆ ಅವಮಾನ ಮಾಡಿದ್ದಾನೆ. ಇದು ವಿವಾದಕ್ಕೆ ಕಾರಣವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿ ತಕ್ಷಣವೇ ಶಾಲಾ ಶಿಕ್ಷನ ಅಮಾನತು ಮಾಡಿದ್ದಾರೆ.

ಅಸಿಸ್ಟೆಂಟ್ ಟೀಚರ್ ಸಂಶುಲ್ ಹಸನ್ ಸಸ್ಪೆಂಡ್

ಅಲಿಘಡ ಜಿಲ್ಲೆಯ ಶಹಾಪುರ್ ಖುತುಬ್ ಹಿರಿಯ ಪ್ರಾಥಮಿಕ ಶಾಲೆ ಇದೀಗ ವಿವಾದದ ಕೇಂದ್ರವಾಗಿದೆ.ವರಿದಗಳ ಪ್ರಕಾರ ಎಂದಿನಂತೆ ಎಲ್ಲರೂ ಬೆಳಗ್ಗೆ ಶಾಲಾಗೆ ಹಾಜರಾಗಿದ್ದಾರೆ. ಎಲ್ಲಾ ಶಾಲೆಯಂತೆ ಇಲ್ಲೂ ಬೆಳಗ್ಗಿನ ಪ್ರಾರ್ಥನೆ ಇದೆ. ಈ ವೇಳೆ ರಾಷ್ಟ್ರಗೀತೆ ಹಾಡಲಾಗುತ್ತದೆ. ಆದರೆ ಸಂಶುಲ್ ಹಸನ್ ರಾಷ್ಟ್ರಗೀತೆ ಜನಗಣಮನ ಹಾಗೂ ದೇಶಭಕ್ತಿ ಗೀತೆ ವಂದೇ ಮಾತರಂ ಹಾಡಲು ನಿರಾಕರಿಸಿದ್ದಾರೆ. ಈ ಕಾರಣದಿಂದ ಬೆಳಗಿನ ಪ್ರಾರ್ಥನೆಯಲ್ಲೂ ಪಾಲ್ಗೊಳ್ಳಲು ನಿರಾಕರಿಸಿದ್ದಾರೆ. ಇಷ್ಟೇ ಅಲ್ಲ ರಾಷ್ಟ್ರಗೀತೆ ಹಾಗೂ ವಂದೇ ಮಾತರಂ ಹಾಡುವಾಗಲು ಗೌರವ ನೀಡಿಲ್ಲ. ಹೀಗಾಗಿ ವಿವಾದ ಜೋರಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಶಿಕ್ಷಣಾಧಿಕಾರಿ ಕ್ರಮ

ರಾಷ್ಟ್ರಗೀತೆ ಹಾಗೂ ವಂದೇ ಮಾತರಂ ಗೀತೆ ಕುರಿತು ವಿವಾದ ಮಾಹಿತಿ ಆಲಿಘಡ ಮೂಲ ಶಿಕ್ಷಣಧಿಕಾರಿ (BSA) ರಾಕೇಶ್ ಕುಮಾರ್ ಸಿಂಗ್‌ಗೆ ತಲುಪಿದೆ. ಪ್ರಾಥಮಿಕ ತನಿಖೆಯಲ್ಲಿ ಅಗೌರವ ತೋರಿರುವುದು ಸಾಬೀತಾಗಿದೆ. ಇದರ ಬೆನ್ನಲ್ಲೇ ಟೀಚರ್ ಸಂಶುಲ್ ಹಸನ್ ಅಮಾನತು ಮಾಡಿದ್ದಾರೆ. ಶಿಕ್ಷಕ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು, ಆದರೆ ಇಲ್ಲಿ ಶಿಕ್ಷಣ ನಿಯಮ ಉಲ್ಲಂಘಿಸಿದ್ದಾರೆ. ಸುಖಾಸುಮ್ಮನೆ ವಿವಾದ ಸೃಷ್ಟಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ಗೊಂದಲ, ಪೋಷಕರಲ್ಲಿ ಆತಂಕ ಸಷ್ಟಿಸಿದ್ದಾರೆ. ರಾಷ್ಟ್ರಗೀತೆ, ರಾಷ್ಟ್ರಧ್ವಜ, ದೇಶಕ್ಕೆ ಮಾಡುವ ಅಪಮಾನ ಸಣ್ಣ ವಿಚಾರವಲ್ಲ ಎಂದು ಶಿಕ್ಷಣಾಧಿಕಾರಿ ಹೇಳಿದ್ದಾರೆ. ವೃತ್ತಿಪರತೆ, ಶಿಕ್ಷಕರ ಮೌಲ್ಯ ಎಲ್ಲವೂ ಈ ಪ್ರಕರಣದಿಂದ ಕ್ಷೀಣಿಸುತ್ತದೆ. ಇದು ಯಾರಿಗೂ ಮಾದರಿಯಾಗಬಾರದು. ಹೀಗಾಗಿ ಕ್ರಮ ಅಗತ್ಯ ಎಂದಿದ್ದಾರೆ.

ರಾಷ್ಟ್ರಗೀತೆ, ವಂದೇ ಮಾತರಂ ಕಡ್ಡಾಯ

ಉತ್ತರ ಪ್ರದೇಶ ಶಿಕ್ಷಣ ಸಚಿವಾಲಯ, ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಗೀತೆ, ವಂದೇ ಮಾತರಂ ಕಡ್ಡಾಯ ಮಾಡಲಾಗಿದೆ. ಈ ಕುರಿತು ಆದೇಶ ಹೊರಡಿಸಿದ್ದಾರೆ. ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿ ಪ್ರಾರ್ಥನೆಯೊಂದು ಶಾಲೆ ಆರಂಭವಾಗಬೇಕು. ಈ ವೇಳೆ ರಾಷ್ಟ್ರಗೀತೆ ಹಾಗೂ ವಂದೇ ಮಾತರಂ ಹಾಡಲು ಆದೇಶದಲ್ಲಿ ಸೂಚಿಸಲಾಗಿದೆ.



Source link

Leave a Reply

Your email address will not be published. Required fields are marked *