Headlines

ಅಬ್ಬಬ್ಬಾ! ಚಾನೆಲ್​ ವಿರುದ್ಧವೇ ಗುಡುಗಿದ Bigg Boss ಜಾಹ್ನವಿ: ದೊಡ್ಮನೆಯಲ್ಲಿ ಅಂಥದ್ದೇನಾಯ್ತು ನೋಡಿ!

ಅಬ್ಬಬ್ಬಾ! ಚಾನೆಲ್​ ವಿರುದ್ಧವೇ ಗುಡುಗಿದ Bigg Boss ಜಾಹ್ನವಿ: ದೊಡ್ಮನೆಯಲ್ಲಿ ಅಂಥದ್ದೇನಾಯ್ತು ನೋಡಿ!



ಅಬ್ಬಬ್ಬಾ! ಚಾನೆಲ್​ ವಿರುದ್ಧವೇ ಗುಡುಗಿದ Bigg Boss ಜಾಹ್ನವಿ: ದೊಡ್ಮನೆಯಲ್ಲಿ ಅಂಥದ್ದೇನಾಯ್ತು ನೋಡಿ!
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿ ಜಾಹ್ನವಿ, ವಾಹಿನಿಯ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಸ್ಪಂದನಾ ಸೋಮಣ್ಣ ಸೇರಿದಂತೆ ಕೆಲವು ಸ್ಪರ್ಧಿಗಳನ್ನು ವೀಕ್ಷಕರ ವೋಟ್ ಇಲ್ಲದೆ ವಾಹಿನಿಯೇ ಉದ್ದೇಶಪೂರ್ವಕವಾಗಿ ಸೇವ್ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದು, ಈ ಹೇಳಿಕೆಯು ಇದೀಗ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.<img><p>ಬಿಗ್​ಬಾಸ್​ (Bigg Boss) ಮನೆಯಲ್ಲಿ, ಜಾಹ್ನವಿ ಅವರು ಮಾಡಿರುವ ಆರೋಪ ಒಂದು ಇದೀಗ ಸೋಷಿಯಲ್​ ಮೀಡಿಯಾದಲ್ಲಿ ಭಾರಿ ಹವಾ ಸೃಷ್ಟಿಸುತ್ತಿದೆ. ನಿರೂಪಕಿಯಾಗಿ, ನಟಿಯಾಗಿ ಗುರುತಿಸಿಕೊಂಡಿರೋ ಜಾಹ್ನವಿ ಅವರು ತಮ್ಮ ಪರ್ಸನಲ್​ ಲೈಫ್​ನಿಂದ ಭಾರಿ ಹಲ್​ಚಲ್ ಸೃಷ್ಟಿಸಿದವರು. ಪತಿಗೆ ಡಿವೋರ್ಸ್​ ಕೊಟ್ಟಿರುವುದಕ್ಕೆ ಸಂಬಂಧಿಸಿದಂತೆ ಅವರು ನೀಡಿರೋ ಹೇಳಿಕೆ, ಬಳಿಕ ಇವರ ವಿರುದ್ಧ ಪತಿ ಮೀಡಿಯಾಗಳಲ್ಲಿ ಮಾಡಿರುವ ವೈಯಕ್ತಿಯ ನಿಂದನೆ ಎಲ್ಲವೂ ಭಾರಿ ಸುದ್ದಿಯಾಗುತ್ತಲೇ ಇದೀಗ ತಣ್ಣಗಾಗಿದೆ.</p><img><p>ಈ ಸುದ್ದಿ ತಣ್ಣಗಾಗುವ ನಡುವೆಯೇ, ಮತ್ತೊಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ ಜಾಹ್ನವಿ. ಬಿಗ್​ಬಾಸ್​ನಲ್ಲಿ ಅವಕಾಶ ಕೊಟ್ಟಿರೋ ಚಾನೆಲ್​ ವಿರುದ್ಧವೇ ಅವರು ಇದೀಗ ಗಂಭೀರ ಆರೋಪ ಮಾಡಿರುವುದು ವೀಕ್ಷಕರ ಕೆಂಗಣ್ಣಿಗೂ ಗುರಿಯಾಗಿದೆ!</p><img><p>ಅಷ್ಟಕ್ಕೂ ಆಗಿದ್ದು ಏನೆಂದರೆ, ತಮ್ಮ ದೃಷ್ಟಿಯಲ್ಲಿ ಯಾರು ಎಲಿಮಿನೇಟ್​ ಆಗಬೇಕಿತ್ತೋ ಅವರು ಮನೆಯಲ್ಲಿ ಉಳಿದುಕೊಂಡಿದ್ದಾರೆ ಎನ್ನುವುದು ಜಾಹ್ನವಿ ಅವರ ಆರೋಪ. ಅವರನ್ನು ವಾಹಿನಿಯೇ ಸೇವ್​ ಮಾಡುತ್ತಿದೆ ಎಂದು ಮಾತನಾಡಿದ್ದಾರೆ! ಅದರಲ್ಲಿಯೂ ಸ್ಪಂದನಾ ಸೋಮಣ್ಣ, ಸೂರಜ್ ಹಾಗೂ ರಾಶಿಕಾ ಎಲ್ಲರನ್ನೂ ಸೇವ್​ ಮಾಡಲಾಗುತ್ತಿದೆ ಎನ್ನುವುದು ಅವರ ಆರೋಪವಾಗಿದೆ!</p><img><p>ಪ್ರತಿವಾರವೂ ಎಲಿಮಿನೇಷನ್​ ನಡೆಯುತ್ತದೆ. ವೀಕ್ಷಕರು ಹಾಕುವ ವೋಟ್‌ಗಳ ಆಧಾರದ ಮೇಲೆ ಇದು ನಡೆಯುತ್ತದೆ ಎನ್ನುತ್ತದೆ ಬಿಗ್​ಬಾಸ್​. ಎಲಿಮಿನೇಷನ್​ ಪ್ರೊಸೀಜರ್​ ಹೇಗೆ ಇರುತ್ತದೆ ಎನ್ನುವುದು ಅಲ್ಲಿರುವ ಸ್ಪರ್ಧಿಗಳಿಗೂ ಅರ್ಥವಾಗಿರುತ್ತದೆ. ಆದರೆ ತಾವು ಅಂದುಕೊಂಡಿರುವ ಸ್ಪರ್ಧಿಗಳು ಹೊರಕ್ಕೆ ಹೋಗುತ್ತಿಲ್ಲ ಎನ್ನುವುದೇ ಜಾಹ್ನವಿ ಅವರಿಗೆ ಇರುವ ನೋವು. ಅದನ್ನು ವಾಹಿನಿಯ ಮೇಲೆ ಎತ್ತಾಕಿದ್ದಾರೆ!</p><img><p>ಅದರಲ್ಲಿಯೂ ಜಾಹ್ನವಿಯ ಕಣ್ಣು ಇರುವುದು ಸ್ಪಂದನಾ ಅವರ ಮೇಲೆ. ಸ್ಪಂದನಾ ಅವರು ವೀಕ್​ ಸ್ಪರ್ಧಿಯಾಗಿದ್ದರೂ ಚಾನೆಲ್​ ಕಡೆಯವರು ಎನ್ನುವ ಕಾರಣಕ್ಕೆ ಆಕೆಯನ್ನು ಸೇವ್​ ಮಾಡಲಾಗುತ್ತಿದೆ ಎನ್ನುವುದು ಅವರ ಆರೋಪ. ಇದನ್ನು ಅವರ ಮಾತಿನಲ್ಲಿಯೇ ಹೇಳುವುದಾದರೆ, ಅವಳಿಗೆ ಮಾತಾಡೋಕೆ ಬರಲ್ಲ. ಟಾಸ್ಕ್‌ನಲ್ಲೂ ಇಲ್ಲ. ಆದರೂ ಪ್ರತಿಬಾರಿ ಸೇವ್​ ಆಗುತ್ತಿದ್ದಾಳೆ. ಅದಕ್ಕೆ ಕಾರಣ, ಆಕೆ ಚಾನೆಲ್​ ಕಡೆಯವಳು. ಅದಕ್ಕಾಗಿ ಉಳಿಸಿಕೊಳ್ತಿದ್ದಾರೆ ಎಂದಿದ್ದಾರೆ!</p><img><p>ಈ ಸಂದರ್ಭದಲ್ಲಿ ಸೂರಜ್​ ಜಾಹ್ನವಿ ಅವರನ್ನು ಎಚ್ಚರಿಸಿದರು ಕೂಡ. ನಿಮ್ಮ ಹಳ್ಳ ನೀವೇ ತೋಡಿಕೊಳ್ಳಬೇಡಿ ಎಂದರು ಕೂಡ. ಆದರೆ ಜಾಹ್ನವಿ ಗರಂ ಆಗಿದ್ದರು. ಅವರ ಆರೋಪ ಮುಂದುವರೆದಿತ್ತು.</p><img><p>ಇದೀಗ ಈ ವಿಷಯ ಪರ-ವಿರೋಧ ಚರ್ಚೆಗಳಿಗೆ ಕಾರಣವಾಗಿದೆ. ಜಾಹ್ನವಿ ಹೀಗೆಲ್ಲಾ ಹೇಳಬಾರದಿತ್ತು. ಇಲ್ಲಿ ಏನಿದ್ದರೂ ನಡೆಯುವುದು ಜನರ ವೋಟಿಂಗ್​ ಮೇಲೆ ಎಂದು ಹಲವರು ಈಕೆಯ ವಿರುದ್ಧ ಮಾತನಾಡಿದರೆ, ಕನ್ನಡ ಸ್ಪರ್ಧಿಗಳ ವಿಚಾರದಲ್ಲಿ ಪಕ್ಷಪಾತ ಮಾಡುತ್ತಿದೆಯಾ ಎಂದು ಮತ್ತೆ ಕೆಲವರು ಸಂದೇಹವನ್ನೂ ವ್ಯಕ್ತಪಡಿಸುತ್ತಿದ್ದಾರೆ.</p>



Source link

Leave a Reply

Your email address will not be published. Required fields are marked *