ಬೆಂಗಳೂರು, 13: ಮುಧೋಳದಲ್ಲಿ ಕಬ್ಬು ಬೆಳೆಗಾರರ (ಕಬ್ಬು ರೈತರು) ಹೋರಾಟದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ (ಈಶ್ವರ ಖಂಡ್ರೆ), ಬಿಜೆಪಿ ರೈತರಿಗೆ ಪ್ರಚಾರ ನೀಡುತ್ತಿದೆ. ಇದರ ವಿರುದ್ಧ ನಾವು ಹೋರಾಟವನ್ನು ಮಾಡುತ್ತೇವೆ. ಇದು ಖಂಡನೀಯ. ಬಿಜೆಪಿಯವರಿಗೆ ನಿಜವಾಗಿಯೂ ಕಾಳಜಿ ಇದ್ದರೆ ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿ ಎಥೆನಾಲ್ ಹಾಗೂ ಸಕ್ಕರೆ ದರವನ್ನು ಹೆಚ್ಚು ಮಾಡಲಿ. ರಾಜ್ಯ ಸರ್ಕಾರದಿಂದ ಎಲ್ಲ ಹಣವನ್ನು ತೆಗೆದುಕೊಳ್ಳುತ್ತಾರೆ, ಆದರೆ ರಾಜ್ಯಕ್ಕೆ ವಾಪಸ್ ಹಣ ಕೊಡುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಬಿಜೆಪಿಗರು ಬೆಳಗಾವಿಗೆ ಹೋಗಿ ರೈತರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಇಂದು ಸಿಎಂ ಎಲ್ಲರ ಜತೆ ಚರ್ಚಿಸಿ ತೀರ್ಮಾನಿಸಿದ್ದಾರೆ. ಬಿಜೆಪಿಗರು ಬಾಯಿಗೆ ಬಂದಂತೆ ಹೇಳಿಕೆ ನೀಡಿದ್ದಾರೆ. ಪೆಟ್ರೋಲ್ ಗೆ 100 ರೂ. ಇದೆ, ಎಥೆನಾಲ್ಗೂ 100 ರೂ. ಕೊಡಲಿ. ಸಕ್ಕರೆ ಬೆಲೆ ಜಾಸ್ತಿ ಆದರೆ ರೈತರಿಗೆ ಕೊಡಬಹುದು. ಕೇಂದ್ರ ರಫ್ತು ಬೆಲೆ ಜಾಸ್ತಿ ಮಾಡುತ್ತಿಲ್ಲ. ಕೇಂದ್ರ ಸರ್ಕಾರ ರಾಜ್ಯದ ಮೇಲೆ ಗೂಬೆ ಕೂರಿಸೋ ಪ್ರಯತ್ನ ಮಾಡುತ್ತಿದೆ ಎಂದು ಈಶ್ವರ ಖಂಡ್ರೆ ಟೀಕಿಸಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ