Headlines

ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ: ಕಾಂಗ್ರೆಸ್ ನಾಶಕ್ಕೆ ರಾಹುಲ್ ಗಾಂಧಿ ಒಬ್ಬರೇ ಸಾಕು | Bihar Assembly Election Result 2025 Celebrations By Bjp Workers In Kalaburagi

ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ: ಕಾಂಗ್ರೆಸ್ ನಾಶಕ್ಕೆ ರಾಹುಲ್ ಗಾಂಧಿ ಒಬ್ಬರೇ ಸಾಕು | Bihar Assembly Election Result 2025 Celebrations By Bjp Workers In Kalaburagi



ಕಲಬುರಗಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ: ಕಾಂಗ್ರೆಸ್ ನಾಶಕ್ಕೆ ರಾಹುಲ್ ಗಾಂಧಿ ಒಬ್ಬರೇ ಸಾಕು | Bihar Assembly Election Result 2025 Celebrations By Bjp Workers In Kalaburagi

ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಐತಿಹಾಸಿಕ ಗೆಲುವಿನ ಹಿನ್ನೆಲೆಯಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿದೆ. ಮತಗಳ್ಳತನದ ಸುಳ್ಳು ಸುದ್ದಿ ಹರಡಿದ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿಗೆ ಬಿಹಾರದ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಹೇಳಿದ್ದಾರೆ.

ಕಲಬುರಗಿ (ನ.14): ದೇಶಾದ್ಯಂತ ಮತಗಳ್ಳತನ ನಡೆದಿದೆ ಎಂಬ ಸುಳ್ಳು ಸುದ್ದಿ ಹರಡಿಸುವ ಮೂಲಕ ಅಪಪ್ರಚಾರದ ಅಭಿಯಾನ ಕೈಗೊಂಡ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ರಾಹುಲ್ ಗಾಂಧಿಗೆ ಬಿಹಾರ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಹೇಳಿದರು.

ಎನ್‌ಡಿಎ ಮೈತ್ರಿಕೂಟಕ್ಕೆ ಐತಿಹಾಸಿಕ ಗೆಲುವು

ಶುಕ್ರವಾರ ಬಿಹಾರ ಚುನಾವಣೆಯ ಫಲಿತಾಂಶದಲ್ಲಿ ಎನ್ ಡಿ ಎ ಮೈತ್ರಿಕೂಟಕ್ಕೆ ಐತಿಹಾಸಿಕ ಗೆಲುವು ದೊರೆತ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದಿಂದ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿ ಬಳಿಕ ಮಾತನಾಡಿದ ಅವರು, ಬಿಜೆಪಿ ಮತಗಳ್ಳತನ ಮಾಡಿದೆ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ಬಿಹಾರಿನ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸುವ ಮೂಲಕ ಇತಿಹಾಸಕ್ಕೆ ಮುನ್ನುಡಿ ಬರೆದಿದ್ದಾರೆ ಎಂದರು.

ಮೋದಿ ಜನಪ್ರಿಯತೆಗೆ ಸಾಕ್ಷಿ

ಇದೇ ಮೊದಲ ಬಾರಿಗೆ ಬಿಹಾರದಲ್ಲಿ ಎನ್ ಡಿ ಎ ಮೈತ್ರಿಗೆ ೨೦೦ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ದೊರೆತಿದ್ದು ಮೋದಿ ಜನಪ್ರೀಯತೆಗೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಪಕ್ಷವೇ ದೊಡ್ಡ ಕಳ್ಳರ ಪಾರ್ಟಿಯಾಗಿದೆ. ತನ್ನ ತಪ್ಪನ್ನು ಮುಚ್ಚಿ ಹಾಕಲು ಇನ್ನೋಬ್ಬರ ಮೇಲೆ ಗೂಬೆ ಕೂರಿಸುವ ಕೆಲಸ ರಾಹುಲ್ ಗಾಂಧಿ ಮಾಡಿದ್ದರಿಂದ ಬಿಹಾರದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ ಎಂದ ಅವರು,ಕಾಂಗ್ರೆಸ್ ಸರ್ವನಾಶಕ್ಕೆ ರಾಹುಲ್ ಗಾಂಧಿ ಒಬ್ಬರೇ ಸಾಕು ಎಂದು ಹೇಳಿದರು.

ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್ ಮಾತನಾಡ, ಅಮರ್ನಾಥ್ ಪಾಟೀಲ್ ಇದ್ದರು



Source link

Leave a Reply

Your email address will not be published. Required fields are marked *