ಬಳ್ಳಾರಿ, ನವೆಂಬರ್ 17: ತೊಳೆಯುತ್ತಿರುವ ವೇಳೆ ಕಾರೊಂದು ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಅಲ್ಲೀಪುರ ಬಳಿ ತುಂಗಭದ್ರಾ ಜಲಾಶಯದ ಎಚ್ಎಲ್ಸಿ ಕಾಲುವೆಯಲ್ಲಿ ನಡೆದಿದೆ. ಆಕಸ್ಮಿಕವಾಗಿ ಕಾರು ನ್ಯೂಟ್ರಲ್ ಗೇರ್ಗೆ ಹೋದ ಪರಿಣಾಮ, ನಿಯಂತ್ರಣ ಕಳೆದುಕೊಂಡು ಕಾಲುವೆಗೆ ಇಳಿದಿದೆ. ಈ ವೇಳೆ ಕಾಲುವೆಯಲ್ಲಿ ನೀರಿನ ಸೆಳೆತವಿದ್ದ ಕಾರಣ ನೀರಲ್ಲಿ ಕೊಚ್ಚಿ ಹೋಗಿದೆ. ಕಾರು ವಿನಾಯಕ ನಗರದ ನಿವಾಸಿ ಕೊರಚ ಎಂಬುವವರಿಗೆ ಸೇರಿಕೊಂಡಿದ್ದು, ಕಾರು ಕಾಲುವೆಯಲ್ಲಿ ಕೊಚ್ಚಿ ಹೋಗುತ್ತಿರುವ ದೃಶ್ಯಕಂಡು ಸ್ಥಳೀಯರು ಅಚ್ಚರಿಗೊಂಡಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಕಾಲುವೆ ನೀರಿನಲ್ಲಿ ಕಾರು ತೇಲುತ್ತಾ ಕೆಲ ದೂರದವರೆಗೆ ಸಾಗಿದ್ದು ಬಳಿಕ ಮುಳುಗಿದೆ. ಕಾರನ್ನು ನಿಲ್ಲಿಸಲು ಮಾಲಿಕ ಎಷ್ಟು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಸ್ಥಳೀಯರು ಹಾಗೂ ಈಜು ಸಹಾಯದಿಂದ ಕಾಲುವೆಯಿಂದ ಕಾರನ್ನು ಮೇಲಕ್ಕೆತ್ತಲಾಗಿದೆ. ಕಾರು ಕೊಚ್ಚಿ ಹೋಗುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್ ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿದ್ದು, ಸಾಮಾಜಿಕ ಜಾಲತಾಣದ ವಿಡಿಯೋ ವೈರಲ್ ಆಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 3:24 pm, ಸೋಮ, 17 ನವೆಂಬರ್ 25