ವಿಜಯಪುರ, ನವೆಂಬರ್ 17: ಲಿವಿನ್ ರಿಲೇಷನ್ ಶಿಪ್ ನಲ್ಲಿದ್ದ ಮಹಿಳೆಯಿಂದಲೇ ಪ್ರಿಯಕರನ (ಪಾಲುದಾರ) ಕೊಲೆ (ಕೊಲೆ) ನಗರದ ಅಮನ್ ಕಾಲೋನಿಯ ಮನೆಯೊಂದರಲ್ಲಿ ಇಂತಹ ಘಟನೆ ನಡೆದಿದೆ. ಸಮೀರ್ ಅಲಿಯಾಸ್ ಪಿಕೆ ಇನಾಂದಾರ್(26) ಹತ್ಯೆಗೀಡಾದ ಪ್ರಿಯಕರ. ಸಹೋದರ ಅಸ್ಲಂ ಭಾಗವಾನ್ ಸಹಾಯ ಪಡೆದು ತಯ್ಯಾಬಾ ಎಂಬ ಮಹಿಳೆ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಗೋಲಗುಂಬಜ್ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದ್ದು, ಸದ್ಯ ಮಹಿಳೆ ಮತ್ತು ಸಹೋದರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
ನಡೆದದ್ದೇನು?
ಇಂದು ಬೆಳಿಗ್ಗೆ ನಗರದ ಗೋಲಗುಂಬಜ್ ಪೊಲೀಸ್ ಠಾಣೆಗೆ ಮಹಿಳೆ ಆಗಮಿಸಿ ನನ್ನ ಪ್ರಿಯಕರನನ್ನು ಕತ್ತು ಹಿಸುಕಿ ಕೊಲೆ ಮಾಡಿರುವುದಾಗಿ ಹೇಳಿದ್ದು, ಠಾಣೆಯಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಒಬ್ಬ ಕ್ಷಣ ಗಾಬರಿಯಾಗಿದ್ದರು.
ಇದನ್ನೂ ಓದಿ: KBJNL ದಂಡೆ ಕಾಲುವೆಯಲ್ಲಿ ಘೋರ ದುರಂತ: ಒಂದೇ ಕುಟುಂಬದ ಎಡ ಮೂವರು ನಾಪತ್ತೆ
ಕೊಲೆ ಮಾಡುವುದಕ್ಕೆ ನನ್ನ ಸಹೋದರ ಅಸ್ಲಂ ಸಹ ಸಾಥ್ ನೀಡಿದ್ದಾನೆಂದು ಮಹಿಳೆ ಹೇಳಿದ್ದಾರೆ. ಕತ್ತು ಹಿಸುಕಿ ಉಸಿರು ಗಟ್ಟಿಸಿ ಕೊಲೆ ಮಾಡಿರುವ ಗುರುತು ಖಾಕಿ ಪಡೆಗೆ ಗೋಚರಿಸಿತ್ತು. ಸ್ಥಳಕ್ಕೆ ಸುಕೋ ಟೀಂ ಆಗಮಿಸಿ ಪರೀಕ್ಷೆಗಳನ್ನು ನಡೆಸಿತು. ಮನೆಯ ಮಾಲೀಕ ಜಮಾದಾರ್ ನೀಡಿದ ಮಾಹಿತಿ ಪ್ರಕಾರ 5-6 ತಿಂಗಳ ಹಿಂದೆ ತಯ್ಯಾಬಾ ಸಹೋದರಿಗೆ ಬಾಡಿಗೆಗೆ ಮನೆ ನೀಡಿದ್ದರಂತೆ. ಇವರ ಮನೆಗೆ ಸಮೀರ್ ಬಂದು ಹೋಗುತ್ತಿದ್ದನಂತೆ. ಯಾವುದೇ ಗದ್ದಲ ಗಲಾಟೆ ಮಾಡಬೇಕೆಂದು ಸೂಚಿಸಲಾಗಿದೆ. ಯಾರಿಗೂ ಗೊತ್ತಾಗದಂತೆ ಸಮೀರ್ ಇಲ್ಲಿ ಬಂದು ಹೋಗುತ್ತಿದ್ದನಂತೆ. ಬೆಳಿಗ್ಗೆ ಮನೆಗೆ ಬಂದಾಗಲೇ ಕೊಲೆ ವಿಚಾರ ಗೊತ್ತಾಗಿದ್ದು ಎಂದು ಅವರು ಹೇಳಿದ್ದಾರೆ.
ಕಿರುಕುಳಕ್ಕೆ ಬೇಸತ್ತು ಕೊಲೆ
ಮೂಲಗಳ ಪ್ರಕಾರ ಕೊಲೆಯಾಗಿರುವ ಸಮೀರ್ ಅಲಿಯಾಸ್ ಪಿಕೆ ಇನಾಂದಾರ್ ರೌಡಿ ಶೀಟರ್ ಆಗಿದ್ದ. ಗೋಲಗುಂಬಜ್ ಪೊಲೀಸ್ ಠಾಣಾ ಕೊಲೆ ಹಾಗೂ ಕೊಲೆ ಯತ್ನ ಪ್ರಕರಣಗಳಲ್ಲಿ ಆರೋಪಿಯಂತೆ. ಕಳೆದ ನಾಲ್ಕು ವರ್ಷಗಳಿಂದ ಸಮೀರ್, ತಯ್ಯಾಬಾ ಜೊತೆಗೆ ಸಂಬಂಧ ಹೊಂದಿದ್ದ. ಆದರೆ ಕಳೆದ ಒಂದು ವರ್ಷದ ಹಿಂದೆ ಸಮೀರ್ ಮನಸ್ತಾಪ ಮಾಡಿಕೊಂಡಿದ್ದನಂತೆ. ಈ ವಿಚಾರವಾಗಿ ಆತನ ಮೇಲೆ ಹಲ್ಲೆಯೂ ಆಗಿತ್ತಂತೆ. ಕೆಲ ಕಾಲ ದೂರವಿದ್ದ ಇಬ್ಬರು ನಂತರ ಮತ್ತೆ ಒಂದಾಗಿದ್ದರು. ಬಳಿಕ ಸಮೀರ್ ತಯ್ಯಾಬಾಗೆ ಕಿರುಕುಳ ನೀಡುತ್ತಿದ್ದನಂತೆ. ಆತನ ಕಿರುಕುಳದಿಂದ ಬೇಸತ್ತು ಸಮೀರ್ನನ್ನು ಕೊಲೆ ಮಾಡುವ ನಿರ್ಧಾರ ಮಾಡಿದ್ದಾಳೆ.
ಆಕೆಗೆ ಸಹೋದರ ಅಸ್ಲಂ ಸಹಾಯ ಮಾಡಿದ್ದಾನೆ. ನಿನ್ನೆ ರಾತ್ರಿ 8-30 ರ ಸುಮಾರಿಗೆ ಸಮೀರ್ ತಯ್ಯಾಬಾ ಬಳಿ ಬಂದಿದ್ದ. ರಾತ್ರಿ 11 ರಿಂದ 12 ಗಂಟೆ ವೇಳೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ನಂತರ ಸಮೀರ್ ಶವದೊಂದಿಗೆ ಬೆಳಕಾಗೋವರೆಗೂ ಕಾಯ್ದಿದ್ದಾರೆ. ಬೆಳಿಗ್ಗೆ 8 ಗಂಟೆ ನಂತರ ತಯ್ಯಾ ಗೋಲಗುಂಬಜ್ ಪೊಲೀಸ್ ಠಾಣೆಗೆ ತೆರಳಿ ಸಮೀರ್ ಕೊಲೆ ಮಾಡಿರುವ ವಿಚಾರ ತಿಳಿಸಿದ್ದಾಳೆ. ಆಗಲೇ ಹೊರ ಜಗತ್ತಿಗೆ ಸಮೀರ್ ಇನಾಂದದಾರ್ ಕೊಲೆಯಾಗಿರುವ ಮಾಹಿತಿ ಬಹಿರಂಗವಾಗಿದೆ.
ಸ್ಥಳಕ್ಕೆ ಗೋಲಗುಂಬಜ್ ಪೊಲೀಸರು, ಸುಕೋ ಟೀಂ ಆಗಮಿಸಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಕೊಲೆಯಾಗಿರುವ ಸಮೀರ್ ತಂದೆ ನನ್ನ ಮಗನನ್ನು ನಾಲ್ಕು ಜನರು ಸೇರಿ ಕೊಲೆ ಮಾಡಿದ್ದಾರೆ. ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು.
ಇದನ್ನೂ ಓದಿ: ವಿಜಯಪುರ: ಕೃಷಿ ಹೊಂಡಕ್ಕೆ ಬಿದ್ದು 3 ಮಕ್ಕಳು ಸಾವು; ಮುಗಿಲು ಮುಟ್ಟಿದ ಆಕ್ರಂದನ
ಲಿವಿನ್ ರಿಲೇಷನ್ ಶಿಪ್ ನಲ್ಲಿದ್ದ ಸಮೀರ್ ತನ್ನ ಪ್ರೇಯಸಿ ಹಾಗೂ ಆಕೆಯ ಸಹೋದರಿ ಕೈಯಿಂದ ಕೊಲೆಯಾಗುವುದಕ್ಕೆ ಕಿರುಕುಳ ಮಾತ್ರ ಕಾರಣವಾ ಅಥವಾ ಬೇರೆ ಕಾರಣವಿದೆಯಾ? ಎಂದು ತನಿಖೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ಕುಟುಂಬಸ್ಥರಿಗೆ ಸಮೀರ್ ಮೃತದೇಹ ನೀಡಲಾಗುವುದು.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ರಂದು ಪ್ರಕಟಿಸಲಾಗಿದೆ – 3:24 pm, ಸೋಮ, 17 ನವೆಂಬರ್ 25