ನವದೆಹಲಿ, (ನವೆಂಬರ್ 17): ಕರ್ನಾಟಕ ರಾಜ್ಯ ರಾಜಕಾರಣದ ಚರ್ಚೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗರಿಗೆದರಿದೆ. ರಾಜ್ಯ ಸರ್ಕಾರ ಎರಡು ವರ್ಷ ಪೂರೈಸ್ತಿರೋ ಹೊತ್ತಲ್ಲೇ ಕಾಂಗ್ರೆಸ್ ಹೈಕಮಾಂಡ್ ಅಂಗಗಳಲ್ಲಿ ಕೈ ಬೆಳವಣಿಗೆಗಳ ತೀವ್ರ ರೂಪ ತಾಳಿವೆ. ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಜೊತೆಗೆ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಗಳು ನಡೆದಿವೆ. ಹೀಗಾಗಿ ಕಾಂಗ್ರೆಸ್ ನವೆಂಬರ್ ನಲ್ಲಿ ಕ್ರಾಂತಿನಾ ಶಾಂತಿನಾ ಎಂಬ ಕುತೂಹಲ ಮೂಡಿಸಿದೆ. ಇದರ ನಡುವೆ ಸಿಎಂ ಸಿದ್ದರಾಮಯ್ಯ ಇಂದು (ನವೆಂಬರ್ 17) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಇನ್ನು ಮೋದಿಯವರನ್ನು ಭೇಟಿ ಮಾಡಿದ್ಯಾಕೆ ಎನ್ನುವುದನ್ನು ಸಿಎಂ ಸಿದ್ದರಾಮಯ್ಯ ವಿವರಿಸಿದ್ದಾರೆ.