ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. | Guarantee Schemes For Poor No Question Of Change Says Cm Siddaramaiah

ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. | Guarantee Schemes For Poor No Question Of Change Says Cm Siddaramaiah



: ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು : ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ತಮ್ಮ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ಕುರಿತು ಭಾನುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಪ್ರತಿಕ್ರಿಯಿಸಿದ ಅವರು ಗ್ಯಾರಂಟಿ ಯೋಜನೆಗಳು ಬಡವರ್ಗದವರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬುವ ಕಾರ್ಯಕ್ರಮಗಳು. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ರಾಯರಡ್ಡಿ ಅವರ ಹೇಳಿಕೆಯು ಗ್ಯಾರಂಟಿಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ಕೊರತೆಯಾಗಿದೆ ಎನ್ನುವಂತಿದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ಈ ಬಾರಿ ನಾವು ರಾಜ್ಯದ ಎಲ್ಲಾ ಶಾಸಕರ ಕ್ಷೇತ್ರಗಳಲ್ಲಿ ರಸ್ತೆ, ಸೇತುವೆ ನಿರ್ಮಾಣ, ದುರಸ್ತಿ ಸೇರಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸ್ವಲ್ಪ ಹಣ ಕೊಡುತ್ತಿದ್ದೇವೆ. ಕೇವಲ ಕಾಂಗ್ರೆಸ್‌ ಶಾಸಕರಿಗೆ ಮಾತ್ರವಲ್ಲ, ಬಿಜೆಪಿ, ಜೆಡಿಎಸ್‌ ಶಾಸಕರ ಕ್ಷೇತ್ರಗಳಿಗೂ ಅನುದಾನ ನೀಡುತ್ತಿದ್ದೇವೆ ಎಂದರು.

ಕೊಪ್ಪಳದ ಕುಕನೂರಿನ ಲ್ಯಾವಣಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದಲ್ಲಿ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರೆಡ್ಡಿ ಅವರನ್ನು ರೈತರೊಬ್ಬರು ತಮ್ಮ ಹೊಲಕ್ಕೆ ಹೋಗುವ ರಸ್ತೆ ಮಾಡಿಸಿಕೊಡುವಂತೆ ಕೇಳಿದಾಗ, ‘ನಿಂಗೆ ಅಕ್ಕಿ ಬೇಡ. ಇನ್ನೊಂದು ಬೇಡ ಎಂದರೆ ಆ ಹಣದಲ್ಲಿ ರಸ್ತೆ ಅಭಿವೃದ್ಧಿ ಮಾಡೋಣ. ರಸ್ತೆ ಬೇಕು ಅಂದ್ರೆ ಅಕ್ಕಿ ಸೇರಿ ಎಲ್ಲವೂ ಬಂದ್‌ ಆಗುತ್ತವೆ’ ಎಂದು ಹೇಳಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.

ರಾಯರಡ್ಡಿ ಅವರದ್ದು ದುರಹಂಕಾರದ ನುಡಿ, ರಸ್ತೆ ಆಗಬೇಕು ಎಂದರೆ ಅಕ್ಕಿ ಕೇಳಬೇಡಿ ಎಂದು ರಾಯರಡ್ಡಿ ಹೇಳಿದ್ದಾರೆ. ಇದು ದುರಹಂಕಾರದ ಮಾತು. ರಾಜ್ಯದಲ್ಲಿ ಹಣಕಾಸಿನ ಸ್ಥಿತಿ ಹದಗೆಟ್ಟಿರುವುದಕ್ಕೆ ಇದು ಸಾಕ್ಷಿ

.- ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಗ್ಯಾರಂಟಿ ಬಂದ್‌ ಆಗಲ್ಲ:ರಾಯರಡ್ಡಿ ಈಗ ಉಲ್ಟಾ

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಆ ಕುರಿತು ಯಾವುದೇ ಗೊಂದಲ ಬೇಡ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಉಲ್ಟಾ ಹೊಡೆದಿದ್ದಾರೆ.

ಎಲ್ಲರಿಗಿಂತ ಮೊದಲೇ

ತಿಳಿಯುವುದು ಇಲ್ಲೇ!

ರಸ್ತೆ ಬೇಕೆಂದರೆ ಗ್ಯಾರಂಟಿ ಸ್ಕೀಂಗಳನ್ನು ಬಂದ್‌ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದ್ದಾರೆ ಎಂದು ‘ಕನ್ನಡಪ್ರಭ’ ನಿನ್ನೆ ವರದಿ ಮಾಡಿತ್ತು.



Source link

Leave a Reply

Your email address will not be published. Required fields are marked *