ದೆಹಲಿಯ ಕೆಳ ನ್ಯಾಯಾಲಯಗಳು ಹಾಗೂ ಸಿಆರ್​ಪಿಎಫ್ ಶಾಲೆಗಳಿಗೆ ಬೆಂಬ್ ಬೆದರಿಕೆ

ದೆಹಲಿಯ ಕೆಳ ನ್ಯಾಯಾಲಯಗಳು ಹಾಗೂ ಸಿಆರ್​ಪಿಎಫ್ ಶಾಲೆಗಳಿಗೆ ಬೆಂಬ್ ಬೆದರಿಕೆ


ಬಾಂಬ-ಸಾಂದರ್ಭಿಕ ಚಿತ್ರಚಿತ್ರ ಕ್ರೆಡಿಟ್ ಮೂಲ: ಇಂಡಿಯಾ ಟುಡೇ

ನವದೆಹಲಿ, ನವೆಂಬರ್ 18: ದೆಹಲಿಯ ಹಲವು ಕೆಳ ನ್ಯಾಯಾಲಯಗಳು ಮತ್ತು ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ(ಬಾಂಬ್ ಬೆದರಿಕೆ) ಕರೆ ಬಂದಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲಿ ಸ್ಫೋಟ ಸಂಭವಿಸಿದ ಕಾರಣ, ಆತಂಕ ಮತ್ತಷ್ಟು ಹೆಚ್ಚಿದೆ. ಕೂಡಲೇ ವಕೀಲರು ಹಾಗೂ ಸಾರ್ವಜನಿಕರನ್ನು ನ್ಯಾಯಾಲಯದಿಂದ ಹೊರಗೆ ಕಳುಹಿಸಿ ತಪಾಸಣೆ ಕಾರ್ಯವನ್ನು ತೀವ್ರಗೊಳಿಸಿದರು. ಸಾಕೇತ್ ನ್ಯಾಯಾಲಯ, ಪಟಿಯಾಲ ಹೌಸ್ ನ್ಯಾಯಾಲಯ, ತೀಸ್ ಹಜಾರಿ ನ್ಯಾಯಾಲಯ ಮತ್ತು ಇತರ ಹಲವಾರು ಜಿಲ್ಲಾ ನ್ಯಾಯಾಲಯಗಳಲ್ಲಿ ಬಾಂಬ್ ಬೆದರಿಕೆಗಳು ವರದಿಯಾಗಿವೆ.

ಬಾಂಬ್ ನಿಷ್ಕ್ರಿಯ ದಳದ ವ್ಯಾನ್‌ಗಳು, ಶ್ವಾನ ದಳಗಳು ಮತ್ತು ವಿಧ್ವಂಸಕ ವಿರೋಧಿ ಘಟಕಗಳು ಸ್ಥಳಗಳಿಗೆ ತಲುಪಿದಾಗ ಜನರನ್ನು ಸ್ಥಳಾಂತರಿಸುವ ಕಾರ್ಯ ಆರಂಭಿಸಿದರು. ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ತೀವ್ರಗೊಳಿಸಲಾಗಿದೆ, ಮುನ್ನೆಚ್ಚರಿಕೆ ಕ್ರಮವಾಗಿ ಸಿಬ್ಬಂದಿಯನ್ನು ಹೆಚ್ಚಿನ ಎಚ್ಚರಿಕೆಯಲ್ಲಿ ಇರಿಸಲಾಗಿದೆ.

ನಗರದ ಎರಡು ಸಿಆರ್‌ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ದ್ವಾರಕಾದ ಸಿಆರ್‌ಪಿಎಫ್ ಶಾಲೆ ಮತ್ತು ಪ್ರಶಾಂತ್ ವಿಹಾರ್‌ನಲ್ಲಿರುವ ಮತ್ತೊಂದು ಸಿಆರ್‌ಪಿಎಫ್ ಶಾಲೆಗೆ ಎಚ್ಚರಿಕೆ ನೀಡಲಾಯಿತು, ಪೊಲೀಸ್ ತಂಡಗಳು ತ್ವರಿತ ಕ್ರಮ ಕೈಗೊಂಡವು ಕ್ಯಾಂಪಸ್‌ನಲ್ಲಿ ಪರಿಶೀಲನೆ ನಡೆಸಿವೆ.

ಮತ್ತಷ್ಟು ಓದಿ: ಬೆಂಗಳೂರಿನ 40 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ: ಮಕ್ಕಳನ್ನ ಹೊರ ಕಳುಹಿಸಿ ತಪಾಸಣೆ

ನ್ಯಾಯಾಲಯಗಳು ಮತ್ತು ಶಾಲೆಗಳ ಹೊರಗೆ ಹೆಚ್ಚುವರಿ ಪೊಲೀಸ್ ನಿಯೋಜನೆಯನ್ನು ಮಾಡಲಾಗಿದೆ. ಕರೆಗಳು ಒಂದೇ ಮೂಲದಿಂದ ಬಂದಿವೆಯೇ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಕೆಂಪುಕೋಟೆ ಬಳಿ ಕಾರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ತನಿಖೆ ಮುಂದುವರಿದಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಸ್ಫೋಟದಲ್ಲಿ ಭಾಗಿಯಾಗಿರುವ ಭಯೋತ್ಪಾದಕನ ಮತ್ತೊಬ್ಬ ಪ್ರಮುಖ ಸಹಚರನನ್ನು ಬಂಧಿಸಲಾಗಿದೆ.

ನವೆಂಬರ್ 10ರಂದು ದೆಹಲಿಯಲ್ಲಿ ಕಾರು ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ 15 ಮಂದಿ ಪ್ರಾಣ ಕಳೆದುಕೊಂಡಿದ್ದರು. ಬಾಂಬ್ ಸ್ಫೋಟದ ಹಿಂದಿನ ಪಿತೂರಿಯನ್ನು ಬಯಲು ಮಾಡಲು ಎನ್ಐಎ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದೆ. ಭಯೋತ್ಪಾದನಾ ನಿಗ್ರಹ ಸಂಸ್ಥೆಯ ತಂಡಗಳು ಹಲವಾರು ಸುಳಿವುಗಳನ್ನು ಅನುಸರಿಸುತ್ತಿವೆ. ಭಯೋತ್ಪಾದಕ ದಾಳಿಯಲ್ಲಿ ಭಾಗವಹಿಸಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಗುರುತಿಸಲು ದೇಶಾದ್ಯಂತ ಶೋಧ ನಡೆಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *