ಅಲೈ ದೇವರ ವಾಣಿ ‘ಹಾಲುಮತದ ಕೈಯಲ್ಲಿ ಅಧಿಕಾರ ಇದೆ, ಬದಲಾವಣೆ ಸುಲಭವಲ್ಲ..’ | Gadag Alai Devara Vani Halumatha Power Politics Prophecy San

ಅಲೈ ದೇವರ ವಾಣಿ ‘ಹಾಲುಮತದ ಕೈಯಲ್ಲಿ ಅಧಿಕಾರ ಇದೆ, ಬದಲಾವಣೆ ಸುಲಭವಲ್ಲ..’ | Gadag Alai Devara Vani Halumatha Power Politics Prophecy San



ಕೌಜಗೇರಿ ಗ್ರಾಮದಲ್ಲಿ ನಡೆದ ದೈವ ಕಾರ್ಣಿಕದಲ್ಲಿ ಅಲೈ ದೇವರ ವಾಣಿಯ ಮೂಲಕ ರಾಜಕೀಯ ಭವಿಷ್ಯ, ಮಾರಕ ರೋಗದ ಬಗ್ಗೆ ಭವಿಷ್ಯ ನುಡಿದಿದೆ. ಹಾಲುಮತದವರ ಕೈಯಲ್ಲಿ ಅಧಿಕಾರವಿದೆ, ಬದಲಾವಣೆ ಕಷ್ಟ ಎಂದೂ, ಮದ್ದು ಇಲ್ಲದ ರೋಗ ಹರಡಲಿದೆ ಎಂದೂ ಎಚ್ಚರಿಕೆ ನೀಡಿದೆ.

ಗದಗ (ಜು.7): ಹಾಲು ಮತದ ಕೈಯಲ್ಲಿ ಅಧಿಕಾರ ಇದೆ, ಬದಲಾವಣೆ ಅಷ್ಟು ಸುಲಭವಲ್ಲ ಎಂದು ಕೌಜಗೇರಿ ಗ್ರಾಮದ ಮೊಹರಂ ಹಬ್ಬದ ಆಚರಣೆ ವೇಳೆ ಅಲೈ ದೇವರ ವಾಣಿ ನುಡಿದಿದೆ. ಗದಗ ಜಿಲ್ಲೆ ರೋಣ ತಾಲೂಕಿನ ಕೌಜಗೇರಿ ಗ್ರಾಮದಲ್ಲಿ ನಡೆದ ದೈವ ಕಾರ್ಣಿಕದಲ್ಲಿ ಅಲೈ ದೇವರ ವಾಣಿ ನಡಿದಿದೆ. ಹಾಲು ಕೆಟ್ಟರೂ ಹಾಲಮತ ಕೆಡುವುದಿಲ್ಲ. ಹಾಲುಮತದ ಕೈಯಲ್ಲಿ ಅಧಿಕಾರ ಕೊಟ್ಟಿದ್ದೀರಿ. ಅದನ್ನು ಬದಲಿ ಮಾಡುವುದು ಅಷ್ಟು ಸುಲಭವಲ್ಲ. ಬಹಳ‌ ಕಠಿಣ ಐತಿ ಎಂದು ಹೇಳಿದೆ.

ಅವರಾಗಿಯೇ ಒಲ್ಲೆ ಅಂತ ಬಿಟ್ರೆ ಇನ್ನೊಬ್ಬರಿಗೆ ಅಧಿಕಾರ ಹೋಕೈತಿ. ನದಿ ಒಳಗೆ ಈಜು ಬರುವ ಭೂಪ ಬೇಕು. ಅಂದಾಗ ಮಾತ್ರ ಅಧಿಕಾರ ಬದಲಾವಣೆ ಆಗುತ್ತೆ. ಇಲ್ಲಾಂದ್ರೆ ಇಲ್ಲ ಎಂದು ರಾಜ್ಯ ರಾಜಕಾರಣದ ಬಗ್ಗೆ ಭವಿಷ್ಯ ನುಡಿದಿದೆ.

ಮದ್ದು ಇಲ್ಲದ ವ್ಯಾದಿ ಬರುತೈತಿ. ಅದು ಗಾಳಿ ಮುಖಾಂತರ ಹರಡತೈತಿ. ಸಾಕಷ್ಟು ಸಾವು ನೋವುಗಳು ಆಗುತ್ತವೆ. ಅದು ಭೂಮಿ ಮೇಲೆ ಐದು ವರ್ಷ ಇರುತೈತಿ.. ಎಚ್ಚರಿಕೆಯಿಂದ ಇರಬೇಕು.ಸಾಮಾನ್ಯರಿಗೆ ಮಾತ್ರ ರೋಗ ಅಲ್ಲ. ಆಳುವ ದೊರೆಗಳಿಗೂ ಭಯಂಕರ ರೋಗ ಕಾಡುತ್ತೆ. ಎಚ್ಚರಿಕೆ ಹೆಜ್ಜೆ ಇಡಿರಿ. ನಾನು ನಾನು ಅಂತ ಮೆರಿಬ್ಯಾಡ್ರಿ. ವಾಹನ ತಗೊಂಡು ಹೋಗುವರು ತಂದೆ ತಾಯಿ ಬೇಡ ಅಂದ್ರೆ ಬಿಟ್ಟು ಬಿಡ್ರಿ. ದೇವರ ಆಜ್ಞೆ ಮೀರಿದ್ರೆ ಬಲಿಯಾಗ್ತೀರಿ.ಹೋಗಿದ್ದೆ ಖರೆಯಾದ್ರೆ ಹಾದಿಗೊಂದು ಹೆಣ. ಬೀದಿಗೊಂದು ಹೆಣ ಆಕೈತಿ ಎಂದು ಭವಿಷ್ಯ ಹೇಳಿದೆ.

 



Source link

Leave a Reply

Your email address will not be published. Required fields are marked *