ಮಂಡ್ಯ, ನವೆಂಬರ್ 19: ಮಂಡ್ಯ ಜಿಲ್ಲೆಯ ಶಿವನಸಮುದ್ರದ ಬಳಿಯ ಕಾಲುವೆಯಲ್ಲಿ ಕಾಡಾನೆ ಮರಿಯೊಂದು ಬಿದ್ದಿತ್ತು. 3 ದಿನವಾದರೂ ಆನೆಗೆ (ಆನೆ) ಮೇಲೆ ಬರಲು ಸಾಧ್ಯವಾಗದೆ ಅಲ್ಲೇ ಸಿಲುಕಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿ ಆನೆಮರಿಯನ್ನು ಸುರಕ್ಷಿತವಾಗಿ ಹೊರಗೆ ತಂದು, ಅರಣ್ಯಕ್ಕೆ ಬಿಟ್ಟಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿದ್ದ ಕಾಡನೆಗೆ ಚಿಕಿತ್ಸೆ ನೀಡಿ ಅರಣ್ಯಕ್ಕೆ ಬಿಡಲಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ