7.11 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಹೊಸ ತಿರುವು; ತಮಿಳುನಾಡಿನಲ್ಲಿ ತಲೆಮರೆಸಿಕೊಂಡ ಕ್ಸೇವಿಯರ್ ಅಂದರ್
ಬೆಂಗಳೂರು,ನವೆಂಬರ್ 22: ಬೆಂಗಳೂರಿನಲ್ಲಿ ಹಾಡಹಗಲೇ ನಡೆದ 7.11 ಕೋಟಿ ರೂಪಾಯಿ ದರೋಡೆ (ದರೋಡೆ) ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಮುಖ ಆರೋಪಿಯನ್ನು ತಮಿಳುನಾಡಿನಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಕೊಟ್ರೇಶಿ ನೇತೃತ್ವದ ವಿಶೇಷ ತಂಡ ತಮಿಳುನಾಡಿನಲ್ಲಿ ದಾಳಿ ನಡೆಸಿ ಆರೋಪಿಯನ್ನು ಹಿಡಿದು ತಂದಿದ್ದಾರೆ.
ಬನಶಂಕರಿ ಪೊಲೀಸರ ವಿಶೇಷ ಪೊಲೀಸರ ತಂಡ ಕಾರ್ಯಾಚರಣೆ
ಬೆಂಗಳೂರಿನ ಕಾಡುಗೊಂಡನಹಳ್ಳಿ ನಿವಾಸಿಯಾಗಿರುವ ಜೆ.ಕೆ.ವಿಯರ್ ದರೋಡೆಯ ನಂತರ ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದಾರೆ. ಆರೋಪಿಯು ಕುಪ್ಪಂ ಪ್ರದೇಶದ ಹಣದ ಪೆಟ್ಟಿಗೆಯನ್ನು ತೆಗೆದು ನಗದನ್ನು ಚೀಲದಲ್ಲಿ ತುಂಬಿಸಿಕೊಂಡಿಲ್ಲದೇ ದರೋಡೆಗೆ ಬಳಸಿದ್ದ ಇನ್ನೋವಾ ಕಾರನ್ನೂ ಅಲ್ಲಿಯೇ ಬಿಟ್ಟು, ಮತ್ತೊಂದು ವ್ಯಾಗನಾರ್ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದೆ ಎಂದು ಗುರುತಿಸಲಾಗಿದೆ. ಚಿತ್ತೂರಿನ ಕುಪ್ಪಂ ಬಳಿ ಹಣದ ಪೆಟ್ಟಿಗೆಗಳನ್ನು ಸಿದ್ಧಪಡಿಸಿದ್ದು, ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿರುವ ಆರೋಪಿಯನ್ನು ಬನಶಂಕರಿ ಠಾಣೆಯ ಇನ್ಸ್ಪೆಕ್ಟರ್ ಕೊಟ್ರೇಶಿ ನೇತೃತ್ವದ ವಿಶೇಷ ಪೊಲೀಸರ ತಂಡ ಬಂಧಿಸಿದೆ. ಆರೋಪಿಯನ್ನು ಸಿದ್ದಾಪುರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ 7 ಕೋಟಿ ದರೋಡೆ ಕೇಸ್ನ ಮಾಸ್ಟರ್ ಮೈಂಡ್ ಅಲ್ಲ, ಇಬ್ಬರು!: ಒಬ್ಬ ಪೋಲೀಸಪ್ಪನ ಜೊತೆ ಸಿಎಂಎಸ್ ಮಾಜಿ ಉದ್ಯೋಗಿಯೂ ಲಾಕ್
ಕುಪ್ಪಂ ಬಳಿ ದೊರೆತ ಹಣದ ಪೆಟ್ಟಿಗೆಗಳ ದೃಶ್ಯ ಇಲ್ಲಿದೆ
ಇದನ್ನೂ ಬೆಂಗಳೂರು ಓದಿ 7 ಕೋಟಿ ರೂ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಪ್ರಕರಣದ ಕಿಂಗ್ ಪಿನ್ ಪತ್ನಿ
ದರೋಡೆಯಾಗಿದ್ದ 7 ಕೋಟಿ ರೂ.ಗಳಲ್ಲಿ 5 ಕೋಟಿ ವಶ
ನಗರದ ಡೈರಿ ಸರ್ಕಲ್ ಫ್ಲೈಓವರ್ ಮೇಲೆ ಎಟಿಎಂ ವಾಹನದಲ್ಲಿದ್ದ ಬರೋಬ್ಬರಿ 7.11 ಕೋಟಿ ರೂ. ದೋಚಿಕೊಂಡು ಗ್ಯಾಂಗ್ ಇನೋವಾ ಕಾರಿನಲ್ಲಿ ಪರಾರಿಯಾಗಿತ್ತು. ಈ ಸಂಬಂಧ ಕೃತ್ಯಕ್ಕೆ ಬಳಸಲಾಗಿದ್ದ ಇನ್ನೋವಾ ಕಾರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದರು. ದರೋಡೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು 5.30 ಕೋಟಿ ರೂ. ಹಣವನ್ನು ಆಂಧ್ರದಲ್ಲಿ ವಶಪಡಿಸಿಕೊಂಡರು. ಪ್ರಕರಣದ ಪ್ರಮುಖ ಆರೋಪಿಗಳಾದ ಗೋವಿಂದಪುರ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಅಣ್ಣಪ್ಪ ಮತ್ತು ಕಿಂಗ್ಪಿನ್ ರವಿಯ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ವಿಕಾಸ್, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.