ಉಡುಪಿ, ನವೆಂಬರ್ 24: ಉಡುಪಿಯ (ಉಡುಪಿ) ಶ್ರೀ ಕೃಷ್ಣ ಮಠದಲ್ಲಿ ನವೆಂಬರ್ 28 ರಂದು ‘ಲಕ್ಷಕಂಠ ಗೀತಾ ಪಾರಾಯಣ’ ನಡೆಸಲಾಗಿದೆ. ಇದೇ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ಅವರು ಕೂಡ ಭಾಗವಹಿಸುತ್ತಿದ್ದಾರೆ. ಹೀಗಾಗಿ ನವೆಂಬರ್ 28 ರಂದು ಜಿಲ್ಲೆಗೆ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸುವಂತೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಪತ್ರದ ಮೂಲಕ ಉಡುಪಿ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.
ಪತ್ರದಲ್ಲೇನಿದೆ?
ನವೆಂಬರ್ 28 ರ ಶುಕ್ರವಾರದಂದು ನಮ್ಮ ದೇಶದ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿರವರು ಉಡುಪಿಯ ಶ್ರೀ ಕೃಷ್ಣ ಮಠ ಮತ್ತು ಪರ್ಯಾಯ ಪುತ್ತಿಗೆ ಮಠಗಳ ಆಶ್ರಯದಲ್ಲಿ ನಡೆಯುವ ಲಕ್ಷ ಕಂಠಗೀತಾ ಗಾಯನ ಕಾರ್ಯಕ್ರಮಕ್ಕೆ ಆಗಮಿಸಿದ್ದು ಅವರಿಗೆ ತಿಳಿದ ವಿಚಾರವಾಗಿದೆ.
ಇದನ್ನೂ ಓದಿ: ನ.28ರಂದು ಉಡುಪಿಯಲ್ಲಿ ಮೋದಿ ರೋಡ್ ಶೋ ರದ್ದು; ಪ್ರಧಾನಿ ಭೇಟಿಯ ಬಗ್ಗೆ ಇಲ್ಲಿದೆ
ದೇಶದ ಪ್ರಧಾನಿ ಸರಿಸುಮಾರು ಮೂರು ನಂತರ (ಚುನಾವಣಾ ಪ್ರಚಾರದವರು) ಉಡುಪಿಗೆ ಭೇಟಿ ನೀಡುತ್ತಿರುವುದು ಜಿಲ್ಲೆಗೆ ಸಂಭ್ರಮದ ವಿಚಾರವಾಗಿದೆ. ಸದಾರಿ ಕಾರ್ಯಕ್ರಮದಲ್ಲಿ ಜನರು ಭಾಗವಹಿಸುವವರಿಗೆ ಭೇಟಿ ನೀಡುವ ಕಾರ್ಯಕ್ರಮಗಳು ಮತ್ತು ಪ್ರಧಾನಮಂತ್ರಿಗಳ ಶಿಷ್ಟಾಚಾರಕ್ಕೆ ವಾಹನಗಳ ಸಂಚಾರ ಮತ್ತು ಸಾರ್ವಜನಿಕ ಸಂಚಾರದ ಅಂಗೀಕಾರವನ್ನು ನಿರ್ಬಂಧಿಸಲಾಗಿದೆ 28ರ ಶುಕ್ರವಾರದಂದು ತುರ್ತು ಮತ್ತು ಅಗತ್ಯ ಸೇವೆಗಳು, ನವಾಡಿ, ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳು ಸೇರಿದಂತೆ ಜಿಲ್ಲೆಯಾದ್ಯಂತ ಒಂದು ದಿನದ ಸಾರ್ವತ್ರಿಕ ಸ್ಥಳೀಯ ರಜೆ ಘೋಷಿಸುವಂತೆ ಕೋರಲಾಗಿದೆ.
ಭರ್ಜರಿ ತಯಾರಿ
ಈ ಲಕ್ಷ ಕಂಠಗೀತಾ ಪಾರಾಯಣ ಕಾರ್ಯಕ್ರಮ ಪರ್ಯಾಯ ಶ್ರೀ ಪುತ್ತಿಗೆ ಮಠದ ನೇತೃತ್ವದಲ್ಲಿ ನಡೆಯುತ್ತಿದೆ, ಸದ್ಯ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ಜರ್ಮನ್ ತಂತ್ರಜ್ಞಾನದ ಪೆಂಡಾಲ್ ಅಳವಡಿಕೆ ಮಾಡಿದ್ದು, ಸುಮಾರು ಒಂದು ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಭಗವದ್ಗೀತೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ.
ಪ್ರಧಾನಿ ಭೇಟಿಯ ಕಾರ್ಯಕ್ರಮ
ನ.28ರ ಬೆಳಗ್ಗೆ 8 ಗಂಟೆಗೆ ದೆಹಲಿಯಿಂದ ಹೊರಡಲಿರುವ ಪ್ರಧಾನಿ ಮೋದಿ, ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬೆಳಗ್ಗೆ 11.45ಕ್ಕೆ ಸುಮಾರಿಗೆ ಉಡುಪಿ ಆಗಮಿಸಲಿದೆ, ಮಧ್ಯಾಹ್ನ 12 ಗಂಟೆಗೆ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ: ಇದೇ ನ.28ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ವಿಶೇಷತೆ ಏನು ಗೊತ್ತಾ?
ಉಡುಪಿ ಶ್ರೀಕೃಷ್ಣನ ದರ್ಶನ, ಸುವರ್ಣತೀರ್ಥ ಮಂಟಪ, ಕನಕನ ಕಿಂಡಿಗೆ ಸ್ವರ್ಣ ಕವಚ ಲೋಕಾರ್ಪಣೆ ನಡೆಯಲಿದೆ. ಮಧ್ಯಾಹ್ನ 12.15ರಿಂದ 1.15ರವರೆಗೆ ಲಕ್ಷ ಕಂಠ ಗೀತಾಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 1.45ಕ್ಕೆ ಉಡುಪಿಯಿಂದ ಮಂಗಳೂರಿಗೆ ತೆರಳಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.