ಬೆಂಗಳೂರು (ನವೆಂಬರ್ 24): ದಾವಣಗೆರೆ ದಕ್ಷಿಣ ನಿಯೋಜಿತ ಕ್ಷೇತ್ರದ ಕಾಂಗ್ರೆಸ್ ಶಾಸಕರು ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಆರೋಗ್ಯದಲ್ಲಿ ಏಳುಪೇರಾಗಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿರುವ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಅವರ ಪುತ್ರ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ದಾವಣಗೆರೆಯಲ್ಲಿಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ, ಕ್ಷೇತ್ರದ ಜನ ಹಾಗೂ ದೇವರ ಆರ್ಶಿವಾದದಿಂದ ಶಾಮನೂರು ಶಿವಶಂಕರಪ್ಪ ಆರೋಗ್ಯದ ಬಗ್ಗೆ ಈ ಬಗ್ಗೆ ಯಾವುದೇ ತೊಂದರೆ ಕಂಡುಬಂದಿಲ್ಲ, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ. ಇನ್ನೊಂದು ವಾರದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದೆ, ದಾವಣಗೆರೆಗೆ ಬರಲು ಎಂದು ಮಾಹಿತಿ ಒದಗಿಸಲಾಗಿದೆ.