
ವಿಷ್ಣುವರ್ಧನ್ (ವಿಷ್ಣುವರ್ಧನ್) ಅವರು ಕನ್ನಡ ಚಿತ್ರರಂಗ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಅವರು ಇಂದು ಇರುತ್ತಿದ್ದರು ಎಂದು ಅನೇಕರು ಅಂದುಕೊಳ್ಳುತ್ತಾರೆ. ಆದರೆ, ಅವರು ಇಲ್ಲ ಎಂಬ ನೋವು ತುಂಬಾ ಕಾಡುತ್ತಿದೆ. ಅವರ ಅಂತ್ಯಕ್ರಿಯೆ ನಡೆಸಿದ ಜಾಗದ ವಿಚಾರ ಕೂಡ ವಿವಾದಕ್ಕೆ ಕಾರಣವಾಗಿದೆ. ಅವರ ಬಗ್ಗೆ ಒಂದು ಕುತೂಹಲಕಾರಿ ವಿಷಯ ರಿವೀಲ್ ಆಗಿದೆ. ವಿಷ್ಣುವರ್ಧನ್ ಅವರು ಒಂದು ವಿಚಾರಕ್ಕೆ ತುಂಬಾ ಅಪ್ಸೆಟ್ ಆಗುತ್ತಿದ್ದರಂತೆ. ಅದೇನು? ಆ ಬಗ್ಗೆ ಇಲ್ಲಿದೆ ವಿವರ.
ವಿಷ್ಣುವರ್ಧನ್ ಅವರು ಸಿನಿಮಾ ರಂಗದಲ್ಲಿ ಆ್ಯಕ್ಟೀವ್ ಆಗಿದ್ದಾಗ ಹಲವು ಕಡೆ ಸಂದರ್ಶನ ನೀಡಿದ್ದರು. ಈ ವೇಳೆ ಅವರು ತಾವು ಯಾವ ವಿಚಾರಕ್ಕೆ ಹೆಚ್ಚು ಅಪ್ಸೆಟ್ ಆಗಿದ್ದೇವೆ ಎಂದು ಹೇಳಿದ್ದರು. ಅವರಿಗೆ ಏನು ಬೇಕು ಎಂದು ಅನಿಸಿತೋ ಅದು ಆ ಕ್ಷಣಕ್ಕೆ ಸಿಗಬೇಕಂತೆ. ಇಲ್ಲವಾದಲ್ಲಿ ಇದು ಅವರಿಗೆ ತುಂಬಾನೇ ಅಪ್ಸೆಟ್ ಮಾಡುತ್ತಿತ್ತಂತೆ.
‘ನಾನು ಉಡುಪಿಯಿಂದ ಬರುತ್ತಿತ್ತು. ಬರುವಾಗ ಗೋಲಿ ಸೋಡ ಕಂಡಿತು. ನಾನು ನೋಡುವ ಮೊದಲೇ ಅಂಗಡಿಯಿಂದ ತುಂಬಾ ದೂರ ಬಂದು ಬಿಟ್ಟಿದ್ದೆವು. ಹುಡುಕಿದರೂ ಸಿಗಲಿಲ್ಲ. ನನ್ನ ಫ್ರೆಂಡ್ ಗೋಲಿ ಸೋಡಕ್ಕೆ ಯಾಕೆ ಇಷ್ಟೆಲ್ಲ ಅಪ್ಸೆಟ್ ಆಗ್ತೀರಾ ಎಂದು ಕೇಳಿದ. ಆತ ಶಾಪ್ನೇ ಖರೀದಿ ಮಾಡಿದೆ. ‘ಎಷ್ಟು ಕುಡೀತೀರೋ ಕುಡೀರಿ’ ಎಂದಿದ್ದರು’ ಎಂದಿದ್ದರು ವಿಷ್ಣುವರ್ಧನ್.
Instagram ನಲ್ಲಿ ಈ ಪೋಸ್ಟ್ ಅನ್ನು ವೀಕ್ಷಿಸಿ
‘ನನಗೆ ಬೇಕು ಎಂದರೆ ಬೇಕು. ಬೇಕು ಎಂದರೆ ಅದು ಎರಡು ನಿಮಿಷದಲ್ಲೇ ಬರಬೇಕು. ಅದೇ ಯಾವುದೇ ವಿಷಯ ಇರಲಿ. ಇದು ಸಣ್ಣ ವಿಷಯವೇ ಇರಬಹುದು. ಆದರೆ, ನಾನು ತುಂಬಾನೇ ಅಪ್ಸೆಟ್ ಆಗ್ತೀನಿ’ ಎಂದು ವಿಷ್ಣುವರ್ಧನ್ ಹೇಳಿದ್ದರು. ಈ ವಿಡಿಯೋನ ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ನಿಂತು ಹೋಗಿದ್ದ ವಿಷ್ಣುವರ್ಧನ್ ಸಿನಿಮಾನ ರಿಲೀಸ್ ಮಾಡಲು ಮುಂದಾದ ಕಮಲ್ ಹಾಸನ್
ವಿಷ್ಣುವರ್ಧನ್ ಅವರು ನಿಧನ ಹೊಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಇಲ್ಲ ಎಂಬ ನೋವು ಕಾಡುತ್ತಿದೆ. ಅವರ ಅಂತ್ಯಕ್ರಿಯೆ ಅಭಿಮಾನ್ ಸ್ಟುಡಿಯೋದಲ್ಲಿ ಮಾಡಲಾಗಿದೆ. ಈ ಜಾಗ ವಿವಾದದ ಕೇಂದ್ರ ಬಿಂದು ಆಗಿದೆ. ಈ ಭಾಗದಲ್ಲಿ 10 ಗುಂಟೆ ಜಾಗ ಕೊಡಬೇಕು ಎಂಬುದು ಅಭಿಮಾನಿಗಳ ಕೋರಿಕೆ. ಆದರೆ, ಇದಕ್ಕೆ ಅಭಿಮಾನ್ ಸ್ಟುಡಿಯೋದವರು ಒಪ್ಪುತ್ತಿಲ್ಲ. ಇದರ ವಿವಾದ ಇಂದು ನಾಳೆ ಪೂರ್ಣಗೊಳ್ಳುವುದಲ್ಲ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.