Headlines

‘ಅಪರಿಚಿತೆ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ಡಿವಿ ಸದಾನಂದ ಗೌಡ

‘ಅಪರಿಚಿತೆ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ಡಿವಿ ಸದಾನಂದ ಗೌಡ


ಗೀತಪ್ರಿಯ (ಗೀತಪ್ರಿಯ) ಸುರೇಶ್ ಕುಮಾರ್ ಅವರು ಈ ಮೊದಲು ‘ತಾಯವ್ವ’ ಸಿನಿಮಾದಲ್ಲಿ ನಟಿಸಿದ್ದರು. ಈಗ ಅವರ ಹೊಸ ಸಿನಿಮಾ ಬಿಡುಗಡೆಗೆ ಸನಿಹವಾಗುತ್ತಿದೆ. ಹೊಸ ಸಿನಿಮಾಗೆ ‘ಅಪರಿಚಿತ’ (ಅಪರಿಚಿತೆ) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚಿಗೆ ಈ ಸಿನಿಮಾದ ಟ್ರೇಲರ್ ಬಿಡುಗಡೆ. ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ (ಡಿ.ವಿ.ಸದಾನಂದಗೌಡ) ಅವರು ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಟಿ ತಾರಾ ಅನುರಾಧ ಕೂಡ ಮುಖ್ಯ ಅತಿಥಿಗಳಾಗಿ. ತಾರಾ ಅವರು ಈ ಸಿನಿಮಾದ ಹಾಡನ್ನು ರಿಲೀಸ್ ಮಾಡಿದರು.

ಈ ವೇಳೆ ಮಾತನಾಡಿದ ಸದಾನಂದ ಗೌಡ ಅವರು, ‘ಒಂದೊಳ್ಳೆ ಉದ್ದೇಶವಿಟ್ಟುಕೊಂಡು ಗೀತಪ್ರಿಯ ಈ ಸಿನಿಮಾ ಮಾಡಿದ್ದಾರೆ. ನಾವು ಸಮಾಜಕ್ಕೆ ಏನಾದರೂ ಉತ್ತಮ ಸಂದೇಶ ಕೊಡಬೇಕಾದರೆ ಅದನ್ನು ಸುಲಭವಾಗಿ ತಲುಪಿಸುವ ಮಾರ್ಗ ಸಿನಿಮಾ. ಅಂತಹ ಸಿನಿಮಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿರುವ ಗೀತಪ್ರಿಯ ಸುರೇಶ್ ಕುಮಾರ್ ಮತ್ತು ತಂಡಕ್ಕೆ ಶುಭವಾಗಲಿ’ ಎಂದರು.

ಗೀತಪ್ರಿಯ ಅವರು ಕೂಡ ವೇದಿಕೆಯಲ್ಲಿದ್ದಾರೆ. ‘1985ರಲ್ಲಿ ನಾನು ಮತ್ತು ನನ್ನ ಪತಿ ಸೇರಿ ಶಿಕ್ಷಣ ಸಂಸ್ಥೆ ಆರಂಭಿಸಿದ್ದೆವು. 10 ಜನರಿಂದ ಶುರುವಾದ ಈ ಸಂಸ್ಥೆಯಲ್ಲಿ ಈಗ 10 ಸಾವಿರ ಜನ ವ್ಯಾಸಂಗ ಮಾಡುತ್ತಿದ್ದಾರೆ. ನನ್ನ ಪತಿ ಸುರೇಶ್ ಕುಮಾರ್ ಅವರೇ ‘ಅಪರಿಚಿತ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ನಾನು ಈ ಸಿನಿಮಾದಲ್ಲಿ ಜವಾಬ್ದಾರಿಯುತ ಶಿಕ್ಷಕಿಯ ಪಾತ್ರ ಮಾಡಿದ್ದೇನೆ’ ಎಂದು ಗೀತಪ್ರಿಯ ಹೇಳಿದ್ದಾರೆ.

‘ನಿರ್ದೇಶಕ ವಿಶ್ವನಾಥ್ ಕಥೆ ಹೇಳಿದಾಗ ಸಮಾಜಕ್ಕೆ ಏನಾದರೂ ಉತ್ತಮ ಸಂದೇಶ ನೀಡುವ ಕಥೆ ಇದ್ದರೆ ಮಾತ್ರ ನಟನೆ ಮಾಡಿದ್ದೇನೆ ಎಂದು ತಿಳಿಸಿದ್ದೆ. ಇದು ಅಂಥದ್ದೇ ಕಥೆ. ರಾಮನಗರದಲ್ಲಿ ಚಿತ್ರೀಕರಣ ಮಾಡಲಾಗಿದೆ. ಕ್ರಿಸ್ ಮಾಸ್ ವೇಳೆಗೆ ಸಿನಿಮಾ ಬಿಡುಗಡೆ ಆಗಲಿದೆ’ ಎಂದು ಹೇಳಿದ ಗೀತಪ್ರಿಯ ಅವರು ಟ್ರೇಲರ್ ಬಿಡುಗಡೆ ಮಾಡಿದ ಗಣ್ಯರಿಗೆ ಧನ್ಯವಾದ ಪ್ರಕಟಿಸಿದರು.

ಇದನ್ನೂ ಓದಿ: 25 ದಿನ ಪೂರೈಸಿದ ‘ತಾಯವ್ವ’ ಸಿನಿಮಾಗೆ ಚಂದನವನದ ಗಣ್ಯರ ಅಭಿನಂದನೆ

ನಿರ್ದೇಶಕ ವಿಶ್ವನಾಥ್ ಅವರು ಮಾತನಾಡಿ, ‘ಇದು ನೈಜ ಕಥೆ ಆಧಾರಿತ ಸಿನಿಮಾ. ಅಲ್ಲಿಗೆ ಶೂಟಿಂಗ್ ಮುಗಿದಿದೆ. ಸೆನ್ಸಾರ್‌ಗೆ ಕಳಿಸಲಾಗಿದೆ. ಗೀತಪ್ರಿಯ, ಸಿಂಧೂ ಲೋಕನಾಥ್, ಆರ್ಜೆ ನಿಖಿತಾ, ಹಿರಿಯ ನಟ ಶ್ರೀನಾಥ್ ಮತ್ತು ಅವರ ಪುತ್ರ ರೋಹಿತ್ ಕೂಡ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ. ‘ಒಳ್ಳೆಯ ಸಿನಿಮಾದಲ್ಲಿ ನಟಿಸಿರುವ ಖುಷಿಯಿದೆ’ ಎಂದು ಶ್ರೀನಾಥ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *