Headlines

ನಾವು ಭಯೋತ್ಪಾದನೆಗೆ ಹೆದರುವುದಿಲ್ಲ, ಬಗ್ಗುವುದೂ ಇಲ್ಲ; ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ

ನಾವು ಭಯೋತ್ಪಾದನೆಗೆ ಹೆದರುವುದಿಲ್ಲ, ಬಗ್ಗುವುದೂ ಇಲ್ಲ; ಕುರುಕ್ಷೇತ್ರದಲ್ಲಿ ಪ್ರಧಾನಿ ಮೋದಿ


ಕುರುಕ್ಷೇತ್ರ, ನವೆಂಬರ್ 25: ಪ್ರಧಾನಿ ನರೇಂದ್ರ ಮೋದಿ (ಪ್ರಧಾನಿ ನರೇಂದ್ರ ಮೋದಿಇಂದು (ನವೆಂಬರ್ 25) ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ. ಈ ಸಂದರ್ಭದಲ್ಲಿ ಅವರು ಜ್ಯೋತಿಸರ್ ಅನುಭವ ಕೇಂದ್ರ ಮತ್ತು ಪಾಂಚಜನ್ಯ ಶಂಖ ಸ್ಮಾರಕವನ್ನು ಉದ್ಘಾಟಿಸಿದರು. ಅವರು ಗುರು ತೇಜ್ ಬಹದ್ದೂರ್ ಅವರಿಗೆ ಸಮರ್ಪಿತವಾದ ಪುಸ್ತಕವನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಅವರು ವಿಶೇಷ ನಾಣ್ಯವನ್ನು ಸಹ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, “ನಾವು ಯಾರಿಗೂ ಬೆದರಿಕೆ ಹಾಕುವುದಿಲ್ಲ. ನಾವು ಹೆದರುವುದಿಲ್ಲ. ಭಯೋತ್ಪಾದನೆಗೆ ನಾವೆಂದೂ ತಲೆಬಾಗುವುದಿಲ್ಲ. ಇದು ನಮ್ಮ ಗುರುಗಳು ನೀಡುವ ಮಂತ್ರ. ನಾವು ಶಾಂತಿಯನ್ನು ಬಯಸುತ್ತೇವೆ, ಆದರೆ ನಮ್ಮ ಭದ್ರತೆಯ ವಿಷಯದಲ್ಲಿ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಆಪರೇಷನ್ ಸಿಂಧೂರ್ ಇದಕ್ಕೆ ಒಂದು ಉತ್ತಮ ಉದಾಹರಣೆಯಾಗಿದೆ. ಇಡೀ ಜಗತ್ತು ಇದನ್ನು ನೋಡಿದೆ. ನವ ಭಾರತ ಹೆದರುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *