ಆ ಪುತ್ತಿಗೆ ಸ್ವಾಮೀಜಿಯವರ ಸನ್ಯಾಸ ಜೀವನದ 50 ನೇ ವರ್ಷದಿಂದ ಆರು ವರ್ಷದ ನಂತರ ಕನಕನ ಕಿಂಡಿಗೆ ಸ್ವರ್ಣ ಲೇಪನ ಮಾಡಲಾಗಿತ್ತು, ಮೋದಿಯೇ ಉದ್ಘಾಟನೆ ಮಾಡಿದರು. ಚಿನ್ನ ಲೇಪಿತ ಕನಕನ ಕಿಂಡಿ ಮೂಲಕ ಮುಖ್ಯಪ್ರಾಣ ದೇವರು, ಗರುಡ ದೇವರ ದರ್ಶನ ಪಡೆದು ಭಕ್ತಿ ಸಮರ್ಪಿಸಿದರು. ರೋಡ್ ಶೋ ವೇಳೆ, ವಿದ್ಯಾರ್ಥಿ ಪರೀಕ್ಷಿತ್ ಆಚಾರ್ ಎಂಬವರು ವಿಶೇಷ ರೀತಿಯಲ್ಲಿ ಮೋದಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ. ಪರೀಕ್ಷಿತ್ ಅವರು ಕೈಯಾರೆ ಪ್ರಧಾನಿ ಮೋದಿ ಮತ್ತು ಅವರ ತಾಯಿಯವರ ಸುಂದರ ಭಾವಚಿತ್ರವನ್ನು ರಚಿಸಿ ತಂದಿದ್ದು, ಗಮನ ಸೆಳೆಯಿತು.