ಬೆಂಗಳೂರು, ನ.28: ಬೆಂಗಳೂರಿನ ಕನಕಪುರ ಮುಖ್ಯ ರಸ್ತೆ ಅಪಾರ್ಟ್ಮೆಂಟ್ನಲ್ಲಿ ವಾಸಿಸುತ್ತಿದ್ದ ಎಂಟು ವರ್ಷದ ಬಾಲಕನೊಬ್ಬ ತೀವ್ರ ಅತಿಸಾರದಿಂದ (ಬೆಂಗಳೂರು ನೀರಿನ ಮಾಲಿನ್ಯ) ಆಸ್ಪತ್ರೆಗೆ ದಾಖಲಾದ ಮೂರು ದಿನಗಳ ನಂತರ ಅಂದರೆ ಗುರುವಾರ ಮೃತಪಟ್ಟಿದ್ದಾನೆ. ಇದೀಗ ಈ ಬಾಲಕನ ಸಾವು ಜನರಿಗೆ ಆತಂಕ ಹೆಚ್ಚಿಸಿದೆ. ಈ ಅಪಾರ್ಟ್ಮೆಂಟ್ನಲ್ಲಿ ವಾಸಿಸುವ ಅನೇಕ ಜನ ಒಂದು ತಿಂಗಳಿಗೂ ಹೆಚ್ಚು ಕಾಲ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದೀಗ ಅಪಾರ್ಟ್ಮೆಂಟ್ಗೆ ಕಲುಷಿತ ನೀರು ಪೂರೈಕೆ ಆಗುತ್ತಿರಬಹುದು ಎಂದು ಹೇಳಿದ್ದಾರೆ. ಬಾಲಕನ ಸಾವಿಗೆ ನೀರಿನ ಗುಣಮಟ್ಟದ ಸಮಸ್ಯೆಗಳೇ ಕಾರಣ ಎಂದು ಅಲ್ಲಿನ ನಿವಾಸಿಗಳು ಹೇಳಿದ್ದಾರೆ. ಇನ್ನು ಬಾಲಕನ ಸಾವಿಗೆ ಕಾರಣ ಏನು ಎಂಬುದು ಇಲ್ಲಿಯವರೆಗೂ ಇಲ್ಲ. ಬಿಬಿಎಂಪಿ ಅಧಿಕಾರಿಗಳು ಹೇಳಿರುವ ಪ್ರಕಾರ, ಬಾಲಕನಿಗೆ ಇತರ ಆರೋಗ್ಯ ಸಮಸ್ಯೆಗಳಿವೆ ಎಂದು ಹೇಳಿದ್ದಾರೆ.
ಮೈಗೇಟ್ನಲ್ಲಿರುವ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಂದೇಶ ಕಳುಹಿಸಲಾಗಿದೆ “ಬೆಂಗಳೂರು ದಕ್ಷಿಣದ ಬಿಬಿಎಂಪಿ ಆರೋಗ್ಯ ಡಾ.
ಆದರೆ, ಹಲವಾರು ಕುಟುಂಬಗಳು ಕಳೆದ ಕೆಲವು ವಾರಗಳಿಂದ ಅತಿಸಾರ ಮತ್ತು ವಾಂತಿ ಮಾಡಿರುವುದು ವರದಿಯಾಗಿದೆ. ಒಬ್ಬ ನಿವಾಸಿ ಇಡೀ ದಿನ ಅತಿಸಾರದಿಂದ ಬಳಲುತ್ತಿದ್ದ ಗುರುವಾರ ಮುಂಜಾನೆ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ವರದಿಯಾಗಿದೆ. ಈ ಸಾವಿನ ಬಗ್ಗೆ ತನಿಖೆ ನಡೆಸಲು ತಂಡವನ್ನು ಕಳುಹಿಸಲಾಗಿದೆ ಎಂದು ದಕ್ಷಿಣ ನಗರ ನಿಗಮದ ಆಯುಕ್ತ ರಮೇಶ್ ಕೆ.ಎನ್ ಹೇಳಿದ್ದಾರೆ. ಕಳೆದ ಒಂದು ತಿಂಗಳಿನಿಂದ ಹಲವಾರು ಬಾರಿ ವೈದ್ಯಕೀಯ ಶಿಬಿರ ಕೂಡ ಈ ಸ್ಥಳದಲ್ಲಿ ನಡೆಯಿತು. ಇದೀಗ ಈ ಘಟನೆಯ ನಂತರ ನಿವಾಸಿಗಳಿಗೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹೇಳಲಾಗಿದೆ.
ಇದನ್ನೂ ಓದಿ: ಬೆಂಗಳೂರಿನ ರಸ್ತೆ ಗುಂಡಿಯಿಂದ ಕೈ-ಕಾಲು ಮುರಿದುಕೊಂಡ ಬೈಕ್ ಸವಾರ, 6 ಲಕ್ಷ ರೂ. ಆಸ್ಪತ್ರೆ ಬಿಲ್
ಅಪಾರ್ಟ್ಮೆಂಟ್ ಅಸೋಸಿಯೇಷನ್ನ ಕಾರ್ಯದರ್ಶಿ ಈ ಬಗ್ಗೆ ಮಾತನಾಡಿದ್ದಾರೆ. “ವಾತಾವರಣದಲ್ಲಿ ಯಾವುದೇ ಮಾಲಿನ್ಯದ ಸಮಸ್ಯೆ ಕಂಡುಬಂದಿಲ್ಲ. ಆದರೆ ನಿಗಮದ ಆರೋಗ್ಯ ತಂಡದ ಸದಸ್ಯ ಅಪಾರ್ಟ್ಮೆಂಟ್ ಅಪಾರ್ಟ್ಮೆಂಟ್ನಲ್ಲಿನ ನೀರಿನ ಪರೀಕ್ಷೆ. ಈ ಪರೀಕ್ಷೆ ವೇಳೆ ಮಾಲಿನ್ಯ ಕಂಡುಬಂದಿದೆ. ಈ ಗುರುವಾರ ನಾಗರಿಕ ಅಧಿಕಾರಿಗಳು ಬಿಡಬ್ಲ್ಯೂಎಸ್ಎಸ್ಬಿ ಪ್ರತಿನಿಧಿಗಳು, ಅಪಾರ್ಟ್ಮೆಂಟ್ ಅಸೋಸಿಯೇಷನ್ ಮತ್ತು ನಿವಾಸಿಗಳೊಂದಿಗೆ ಸಭೆ ನಡೆಸಿದರು.
ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ