ಚಿತ್ರದುರ್ಗದಲ್ಲಿ ಮಸೀದಿ ಕಟ್ಟಡ ನಿರ್ಮಾಣ ವಿವಾದ: ಸಿಡಿದೆದ್ದ ಹಿಂದೂ ಸಂಘಟನೆಗಳು, ಮುಸ್ಲಿಮರ ವಾದವೇನು?​​

ಚಿತ್ರದುರ್ಗದಲ್ಲಿ ಮಸೀದಿ ಕಟ್ಟಡ ನಿರ್ಮಾಣ ವಿವಾದ: ಸಿಡಿದೆದ್ದ ಹಿಂದೂ ಸಂಘಟನೆಗಳು, ಮುಸ್ಲಿಮರ ವಾದವೇನು?​​


ಚಿತ್ರದುರ್ಗ, ನವೆಂಬರ್ 28: ಕೋಟೆನಾಡು ಚಿತ್ರದುರ್ಗದಲ್ಲಿ (ಚಿತ್ರದುರ್ಗ) ಕಟ್ಟಡ ನಿರ್ಮಾಣವೊಂದು ವಿವಾದಕ್ಕೀಡಾಗಿದೆ. ಅನಧಿಕೃತವಾಗಿ ಕಟ್ಟಡ ನಿರ್ಮಾಣ ಎಂದು ಗಂಭೀರ ಆರೋಪ ಕೇಳಿಬಂದಿದೆ. ಆದರೆ ನಿಯಮಾನುಸಾರ ನಿರ್ಮಿಸಲಾಗಿದೆ ಎಂದು ಮುಸ್ಲಿಂ ಸಮುದಾಯದ ಜನರ ವಾದವಾಗಿದೆ. ಹೀಗಾಗಿ ಸ್ಥಳೀಯರು ಹಾಗೂ ಹಿಂದೂ ಸಂಘಟನೆ ಸಾರ್ವಜನಿಕ ಕಟ್ಟಡ ತಡೆಗೋಡೆ ನಗರಸಭೆ ಮತ್ತು ಸಾರ್ವಜನಿಕರಿಗೆ ದೂರು. ಈ ಬಗ್ಗೆ ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ (ಪ್ರಮೋದ್ ಮುತಾಲಿಕ್)ಕೂಡ ಕಿಡಿಕಾರಿದ್ದಾರೆ.

ಕೋಟೆನಾಡು ಚಿತ್ರದುರ್ಗ ನಗರದ ಸಾದಿಕ್ ನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 35ನೇ ವಾರ್ಡ್‌ನಲ್ಲಿ ಸುಮಾರು 500 ಹಿಂದೂ ಸಮುದಾಯದ ಮನೆಗಳಿವೆ, 30 ಮನೆಗಳು ಮಾತ್ರ ಮುಸ್ಲಿಂ ಸಮುದಾಯಕ್ಕೆ ಸೇರಿದ ಮನೆಗಳಿವೆ. ಒಂದು ಮಸೀದಿಯೊಂದು ಇದೆ. ಆದರೂ ಮುಖ್ಯರಸ್ತೆ ಬದಿಯಲ್ಲಿ ಅನಧಿಕೃತವಾಗಿ ಮತ್ತೊಂದು ಕಟ್ಟಡವಿದೆ ಎಂಬುದು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಅಧಿಕೃತವಾಗಿಯೇ ನಿರ್ಮಾಣ ಮಾಡಲಾಗುತ್ತಿದೆ ಎಂದು ಸ್ಥಳೀಯ ಮುಸ್ಲಿಂ ಮುಖಂಡ ಅಬ್ದುಲ್ ಅವರು ಹೇಳುತ್ತಾರೆ.

ಇದನ್ನೂ ಓದಿ: ಆಧುನಿಕ ಪ್ರಪಂಚದಿಂದ ಬಲು ದೂರು ಉಳಿದ ಗ್ರಾಮ: ಈ ಹಳ್ಳಿಗೆ ಮೊಬೈಲ್ ಸಿಗ್ನಲ್, ಇಂಟರ್ನೆಟ್ ಇಲ್ಲ

ಇನ್ನು ಈ ಬಗ್ಗೆ ಸ್ಥಳೀಯರು ನಗರಸಭೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಅನೇಕ ಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶ್ರೀಕೃಷ್ಣ ಬಡಾವಣೆ ಎಂದು ಸಾದಿಕ್ ನಗರ ಎಂದು ಬಿಂಬಿಸಲಾಗಿದೆ. ಗೂಂಡಾಗಿರಿ ಮೂಲಕ ಅನಧಿಕೃತವಾಗಿ ನಿರ್ಮಿಸಿಕೊಂಡು ಹಿಂದೂ ಹಬ್ಬ-ಉತ್ಸವಗಳಿಗೆ ಕಡಿವಾಣ ಹಾಕುವ ಕೆಲಸ ನಡೆಯುತ್ತಿದೆ.

ಪ್ರಮೋದ್ ಮುತಾಲಿಕ್ ಕಿಡಿ

ಕಾಂಗ್ರೆಸ್ ನವರಿಗೆ ವೋಟ್ ಬ್ಯಾಂಕ್ ಪ್ರೀತಿ ಇದ್ದರೆ ನಿಮ್ಮ ಮನೆಯಲ್ಲಿ ಮಸೀದಿ ಕಟ್ಟಿಕೊಳ್ಳಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸುದ್ದಿಗೋಷ್ಠಿ ನಡೆಸಿ ಕಿಡಿಕಾರಿದ್ದಾರೆ. ಇನ್ನು ನಗರಸಭೆ ಪೌರಾಯುಕ್ತೆ ಲಕ್ಷ್ಮೀ ಮಾತನಾಡಿ, ಈ ಹಿಂದಿನ ಪೌರಾಯುಕ್ತರು ಸಾರ್ವಜನಿಕ ಪ್ರಕಟಣೆ ನೀಡಿದ್ದರು. ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ. ಈ ಬಗ್ಗೆ ಪರಿಶೀಲಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗದ ಗೂಡಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ; ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ಬೀದಿಗೆಸೆದು ಸ್ಥಳೀಯರ ಆಕ್ರೋಶ

ಒಟ್ಟಾರೆಯಾಗಿ ಚಿತ್ರದುರ್ಗ ನಗರದ ಸಾದಿಕ್ ನಗರ ಬಡಾವಣೆಯಲ್ಲಿ ಕಳೆದೊಂದು ತಿಂಗಳಿಂದ ಮಸೀದಿ ಕಟ್ಟಡ ನಿರ್ಮಾಣ ವಿವಾದ ಭುಗಿಲೆದ್ದಿದೆ. ಇಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಚಿತ್ರದುರ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಎಚ್ಚರಿಕೆ ನೀಡಿದರು. ಹೀಗಾಗಿ ಸರ್ಕಾರ ಮತ್ತು ನಗರಸಭೆ ಅಧಿಕಾರಿಗಳು ಯಾವ ರೀತಿ ಕ್ರಮಕೈಗೊಳ್ಳಲಿದ್ದಾರೆಂದು ಕಾದು ನೋಡಬೇಕಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *