ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಜಂಟಿ ಪತ್ರಿಕಾಗೋಷ್ಠಿ
ಬೆಂಗಳೂರು, ನವೆಂಬರ್ 29: ಕರ್ನಾಟಕ ಕಾಂಗ್ರೆಸ್ ನಲ್ಲಿ (ಕಾಂಗ್ರೆಸ್) ಇದ್ದಿದ್ದ ಅಧಿಕಾರ ಹಂಚಿಕೆ ಗೊಂದಲಗಳಿಗೆ ತೆರೆ ಎಳೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ (ಸಿದ್ದರಾಮಯ್ಯ) ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (ಡಿಕೆ ಶಿವಕುಮಾರ್) ಶನಿವಾರ ಬ್ರೇಕ್ಫಾಸ್ಟ್ ಮೀಟಿಂಗ್ ಇದೆ. ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಭೆ. ಆ ಬಳಿಕ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಉಭಯ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಆದರೆ, ಈ ಪತ್ರಿಕಾಗೋಷ್ಠಿಯಲ್ಲಿ, ಮಾಧ್ಯಮ ಪ್ರತಿನಿಧಿಗಳ ಕೆಲವು ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದೆ ಅನುಮಾನಗಳನ್ನು ಹಾಗೆಯೇ ಉಳಿಸಿಹೋಗಿದ್ದಾರೆ.
ಮಾಧ್ಯಮ, ಪ್ರತಿಪಕ್ಷಗಳ ಮೇಲೆ ಗೂಬೆ ಕೂರಿಸಿದ ಸಿಎಂ
ಅಧಿಕಾರ ಹಂಚಿಕೆ ಕುರಿತ ಗೊಂದಲ ಸೃಷ್ಟಿಯಾಗಲು ಪ್ರತಿಪಕ್ಷಗಳು ಹಾಗೂ ಮಾಧ್ಯಮಗಳೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಜೊತೆಗೆ, ತಮ್ಮ ಹಾಗೂ ಡಿಕೆ ಶಿವಕುಮಾರ್ ಮಧ್ಯೆ ಈ ಹಿಂದೆಯೂ ಯಾವುದೇ ಗೊಂದಲವಿಲ್ಲ, ಇನ್ನೂ ಇಲ್ಲ, ಮುಂದೆಯೂ ಇರುವುದಿಲ್ಲ. ಆದರೆ, ಅದಕ್ಕೂ ಮುನ್ನ ಅವರೇ, ಗೊಂದಲ ತಿಳಿಗೊಳಿಸುವುದಕ್ಕಾಗಿ ಹೈಕಮಾಂಡ್ ಸೂಚನೆಯು ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದೆ. ಹೈಕಮಾಂಡ್ ಏನು ಹೇಳುತ್ತದೋ ಅದರಂತೆ ನಡೆದುಕೊಳ್ಳುತ್ತೇವೆ ಎಂಬುದು ಗಮನಾರ್ಹ!
ಕೊಟ್ಟ ಮಾತು, ಎಕ್ಸ್ ಸಮರದ ಬಗ್ಗೆ ಹೇಳಿದ್ದೇನು?
ಅಧಿಕಾರ ಹಂಚಿಕೆ ಚರ್ಚೆಗಳ ನಡುವೆ, ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಡಿಕೆ ಶಿವಕುಮಾರ್ ಎಕ್ಸ್ನಲ್ಲಿ ಸಂದೇಶ ಪೋಸ್ಟ್ ಮಾಡಿದ್ದು ಬಹಳ ಚರ್ಚೆಗೆ ಗ್ರಾಸವಾಗಿತ್ತು. ಇದರ ನಂತರ ಸಿದ್ದರಾಮಯ್ಯ ಕೂಡ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿ, ಕರ್ನಾಟಕದ ಜನತೆಗೆ ನಾವು ಕೊಟ್ಟ ಮಾತು ಕೇವಲ ಘೋಷಣೆ ಅಲ್ಲ, ಜನತೆಗೆ ನಾವು ಕೊಟ್ಟ ಮಾತೇ ನಮಗೆ ಜಗತ್ತು ಎಂದು ಉಲ್ಲೇಖಿಸಿದ್ದರು. ಈ ವಿಚಾರವಾಗಿ ಪ್ರಶ್ನೆ ಕೇಳಲು ಮಾಧ್ಯಮ ಪ್ರತಿನಿಧಿಗಳು ಮುಂದಾದಾಗ, ನಾವು ಹೇಳಿದ್ದನ್ನು ಮೊದಲು ಕೇಳಿ. ನಿಮ್ಮ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಆಗುವುದಿಲ್ಲ. ಏನಿದ್ದರೂ ಹೈಕಮಾಂಡ್ ಹೇಳಿದಂತೆ ಮುಂದುವರಿಯುತ್ತೇವೆ.
ನಾಯಕತ್ವ ಬದಲಾವಣೆಯ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ?
ಎರಡೂವರೆ ವರ್ಷದ ನಂತರ ನಾಯಕತ್ವ ಬದಲಾವಣೆ ಮಾಡುವ ಬಗ್ಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಹೊತ್ತಿನಲ್ಲಿ ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿತ್ತೇ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ ಸಮರ್ಪಕ ಉತ್ತರ ನೀಡಿಲ್ಲ. ಏನಿದ್ದರೂ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇವೆ ಎಂದಷ್ಟೇ ಹೇಳಿದರು. ಇದರೊಂದಿಗೆ, ಅಧಿಕಾರ ಹಂಚಿಕೆ ಚರ್ಚೆ ನಡೆದಿತ್ತು ಎಂಬುದು ಪ್ರಶ್ನೆಯಾಗಿಯೇ ಉಳಿಯಿತು.
ಇದನ್ನೂ ಓದಿ: ಡಿಕೆ ಶಿವಕುಮಾರ್ ಬ್ರೇಕ್ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಈ ಮಧ್ಯೆ, ‘ಅಧಿಕಾರ ಹಂಚಿಕೆ ಗೊಂದಲ ಶುರುವಾಗಿದ್ದೇ ಸಿಎಂ ಹಾಗೂ ಡಿಸಿಎಂ ನಡುವೆ. ನಮಗೇನು ಸಂಬಂಧ ಇದೆ’ ಎಂದು ಪತ್ರಕರ್ತ ಪ್ರಶ್ನಿಸಿದಾಗ, ಸಿಎಂ ನೀಡಿದ ಉತ್ತರ ಕೂಡ ಉಭಯ ನಾಯಕರ ಗೊಂದಲದಲ್ಲಿದ್ದು ನಿಜ ಎಂಬಂತಿತ್ತು. ನಾನು ಮತ್ತು ಡಿಕೆ ಶಿವಕುಮಾರ್ ಸೆಟಲ್ಮೆಂಟ್ ಮಾಡಿಕೊಳ್ಳುವುದೇ ಪರಿಹಾರ ಅಲ್ವಾ? ಹೈಕಮಾಂಡ್ ಹೇಳಿದಂತೆ ಸೆಟಲ್ ಮಾಡಿಕೊಳ್ಳುವುದೇ ಒಂದು ಸೆಟಲ್ ಮೆಂಟ್ ಎಂದರು. ಅಂದರೆ ಆರಂಭದಲ್ಲಿ ಇಬ್ಬರ ನಡುವೆ ಗೊಂದಲವೇ ಇರಲಿಲ್ಲ, ಈಗ ಸಿಎಂ ಸೆಟಲ್ ಮೆಂಟ್ ಮಾಡಿಕೊಂಡಿದ್ದೇವೆ. ಇದು ಕೂಡ ಅನುಮಾನಕ್ಕೆ ಕಾರಣವಾಯಿತು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ