ಬೆಂಗಳೂರು, ನವೆಂಬರ್ 29: ‘ಕೊಟ್ಟ ಮಾತು’ ಹಾಗೂ ಎರಡೂವರೆ ವರ್ಷದ ಅಧಿಕಾರ ಹಂಚಿಕೆ ಒಪ್ಪಂದದ ಕುರಿತ ಪ್ರಶ್ನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರ ಪ್ರಶ್ನೆಗೆ ಸಿಟ್ಟಿನಿಂದಲೇ ಉತ್ತರಿಸಿದ ಅವರು, ಏನು ಕೊಟ್ಟ ಮಾತು? ಹೈಕಮಾಂಡ್ ಹೇಳಿದ್ದನ್ನು ಕೇಳಿದ ಮೇಲೆ ಕೊಟ್ಟ ಮಾತಿನಂತೆ ಎಂಬ ಪ್ರಶ್ನೆ ಎಲ್ಲಿ ಬಂರು ಎಂದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಜೋರಾಗಿ ನಗದಿರುವುದು ಗಮನ ಸೆಳೆಯಿತು. ”ನಾವು ಒಟ್ಟಾಗಿ ಹೋಗುತ್ತೇವೆ. ನನಗೂ ಮತ್ತು ಡಿ.ಕೆ. ಶಿವಕುಮಾರ್ ಅವರಿಗೂ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ” ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ