Headlines

Ind vs SA 2nd ODI: ದಕ್ಷಿಣ ಆಫ್ರಿಕಾ ಎದುರಿನ ಎರಡನೇ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ! | India Vs South Africa 2nd Odi Team India Predicted Xi Kvn

Ind vs SA 2nd ODI: ದಕ್ಷಿಣ ಆಫ್ರಿಕಾ ಎದುರಿನ ಎರಡನೇ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ! | India Vs South Africa 2nd Odi Team India Predicted Xi Kvn



Ind vs SA 2nd ODI: ದಕ್ಷಿಣ ಆಫ್ರಿಕಾ ಎದುರಿನ ಎರಡನೇ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಹೀಗಿದೆ! | India Vs South Africa 2nd Odi Team India Predicted Xi Kvn

ರಾಯ್‌ಪುರದಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳಲು ಟೀಂ ಇಂಡಿಯಾ ಸಜ್ಜಾಗಿದೆ. ತಂಡದ ಬ್ಯಾಟಿಂಗ್ ರೋಹಿತ್ ಮತ್ತು ಕೊಹ್ಲಿ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ಬೌಲಿಂಗ್ ವಿಭಾಗದ ಕಳಪೆ ಪ್ರದರ್ಶನವು ತಂಡಕ್ಕೆ ದೊಡ್ಡ ಚಿಂತೆಯಾಗಿದೆ.

ರಾಯ್ಪುರ: ಭಾರತ – ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯ ಡಿಸೆಂಬರ್ 03ರ ಬುಧವಾರದಂದು ರಾಯ್‌ಪುರದಲ್ಲಿ ನಡೆಯಲಿದೆ. ಈ ಪಂದ್ಯವನ್ನು ಗೆದ್ದು ಸರಣಿ ವಶಪಡಿಸಿಕೊಳ್ಳುವುದು ಟೀಂ ಇಂಡಿಯಾದ ಗುರಿಯಾಗಿದೆ. ಬ್ಯಾಟಿಂಗ್‌ನಲ್ಲಿ ತಂಡವು ರೋಹಿತ್ ಮತ್ತು ಕೊಹ್ಲಿ ಜೋಡಿಯ ಮೇಲೆ ಹೆಚ್ಚು ಅವಲಂಬಿತವಾಗಿದೆ. ಈ ಇಬ್ಬರನ್ನು ಬಿಟ್ಟರೆ ಬೇರೆ ಯಾರಿಗೂ ಎದುರಾಳಿಗಳ ಮೇಲೆ ಒತ್ತಡ ಹೇರಲು ಸಾಧ್ಯವಾಗಲಿಲ್ಲ ಎಂಬುದು ಸತ್ಯ.

ರೋಹಿತ್ ಶರ್ಮಾ ಔಟಾದ ನಂತರ ಸ್ಕೋರಿಂಗ್ ವೇಗ ಕಡಿಮೆಯಾಗಿದ್ದನ್ನು ರಾಂಚಿಯಲ್ಲಿ ನೋಡಿದ್ದೇವೆ. ಯಶಸ್ವಿ ಜೈಸ್ವಾಲ್ ಮತ್ತು ಋತುರಾಜ್ ಗಾಯಕ್ವಾಡ್ ಅವರಂತಹ ಯುವ ಆಟಗಾರರು ರನ್ ಗಳಿಸಿದರೆ ಮಾತ್ರ ತಂಡದ ಬ್ಯಾಟಿಂಗ್ ಬಲಗೊಳ್ಳುತ್ತದೆ. ನಾಯಕ ಕೆ ಎಲ್ ರಾಹುಲ್ ಇದ್ದರೂ, ವಾಷಿಂಗ್ಟನ್ ಸುಂದರ್ ಅವರನ್ನು ಬೇಗನೆ ಕಳುಹಿಸಿದ ಪ್ರಯೋಗಕ್ಕೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿವೆ. ಬ್ಯಾಟಿಂಗ್‌ಗಿಂತ ಬೌಲಿಂಗ್‌ನಲ್ಲಿ ತಂಡಕ್ಕೆ ಹೆಚ್ಚು ಚಿಂತೆಗಳಿವೆ. ಕುಲ್ದೀಪ್ ಯಾದವ್ ಅವರ ಗೇಮ್ ಚೇಂಜಿಂಗ್ ಪ್ರದರ್ಶನವೇ ಮೊದಲ ಪಂದ್ಯದಲ್ಲಿ ಭಾರತಕ್ಕೆ ಬಲ ನೀಡಿತು. ವಾಷಿಂಗ್ಟನ್ ಸುಂದರ್ ಅವರ ಪ್ರದರ್ಶನ ಕಳಪೆಯಾಗಿದ್ದರೂ, ಎರಡನೇ ಏಕದಿನ ಪಂದ್ಯದಲ್ಲಿ ತಂಡದಲ್ಲಿ ಬದಲಾವಣೆಯಾಗುವ ಸಾಧ್ಯತೆ ಕಡಿಮೆ.

ಸಿಕ್ಕ ಅವಕಾಶ ಬಳಸಿಕೊಳ್ತಾರಾ ಪ್ರಸಿದ್ದ್ ಕೃಷ್ಣ

ಎರಡನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಕೆ ಎಲ್ ರಾಹುಲ್ ಹೊರತುಪಡಿಸಿ ಉಳಿದ ಬ್ಯಾಟರ್‌ಗಳು ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳಬೇಕಿದೆ. ಕಳೆದ ಪಂದ್ಯದಲ್ಲಿ ವೇಗಿ ಪ್ರಸಿದ್ದ್ ಕೃಷ್ಣ ಎದುರಾಳಿ ಬ್ಯಾಟರ್‌ಗಳ ಮೇಲೆ ಒತ್ತಡ ಹೇರಲು ವಿಫಲವಾಗಿದ್ದರು. ಎರಡನೇ ಪಂದ್ಯದಲ್ಲಿ ಪ್ರಸಿದ್ದ್ ಯಾವ ರೀತಿ ಪ್ರದರ್ಶನ ತೋರಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

11 ರನ್‌ಗಳಿಗೆ ಮೂರು ವಿಕೆಟ್‌ಗಳು ಬಿದ್ದರೂ ದಕ್ಷಿಣ ಆಫ್ರಿಕಾ 332 ರನ್ ಗಳಿಸಿದ್ದು ಭಾರತ ತಂಡಕ್ಕೆ ಚಿಂತೆಯ ವಿಷಯವಾಗಿದೆ. ರನ್ ಬಿಟ್ಟುಕೊಡುವುದರಲ್ಲಿ ಯಾರೂ ಹಿಂದೆ ಬಿದ್ದಿಲ್ಲ. ರಾಯ್‌ಪುರದಲ್ಲಿ ಈ ಹಿಂದೆ ನಡೆದ ಎರಡು ಪಂದ್ಯಗಳಲ್ಲೂ ಗೆದ್ದ ಆತ್ಮವಿಶ್ವಾಸದೊಂದಿಗೆ ಟೀಂ ಇಂಡಿಯಾ ನಾಳೆ ಕಣಕ್ಕಿಳಿಯಲಿದೆ. ಆದರೆ, ಕಿವೀಸ್ ವಿರುದ್ಧದ ಏಕದಿನ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯಗಳನ್ನು ಭಾರತ ಗೆದ್ದಿದ್ದು ಬೌಲಿಂಗ್ ಬಲದಿಂದ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಗೆಲುವಿಗೆ ಭಾರತಕ್ಕೆ ಬೌಲಿಂಗ್ ವಿಭಾಗವೇ ದೊಡ್ಡ ಚಿಂತೆಯಾಗಿದೆ.

ಭಾರತದ ಸಂಭಾವ್ಯ ತಂಡ:

ಯಶಸ್ವಿ ಜೈಸ್ವಾಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರುತುರಾಜ್ ಗಾಯಕ್ವಾಡ್, ವಾಷಿಂಗ್ಟನ್ ಸುಂದರ್, ಕೆಎಲ್ ರಾಹುಲ್ (ನಾಯಕ / ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ಪ್ರಸಿದ್ಧ್ ಕೃಷ್ಣ.



Source link

Leave a Reply

Your email address will not be published. Required fields are marked *