Bengaluru: ಆಕೆಗೆ ಗಂಡನಿಲ್ಲ, ಈತನಿಗೆ ಹೆಂಡತಿ ಬೇಕಿಲ್ಲ; ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿ ನಡೆದೇ ಹೋಯ್ತು ದುರಂತ! | Bengaluru Man Kills Live In Relationship Partner Then He Also Died Sat

Bengaluru: ಆಕೆಗೆ ಗಂಡನಿಲ್ಲ, ಈತನಿಗೆ ಹೆಂಡತಿ ಬೇಕಿಲ್ಲ; ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿ ನಡೆದೇ ಹೋಯ್ತು ದುರಂತ! | Bengaluru Man Kills Live In Relationship Partner Then He Also Died Sat


15

ಆಕೆಗೆ ಗಂಡನಿಲ್ಲ, ಈತನಿಗೆ ಹೆಂಡ್ತಿ ಬೇಕಿಲ್ಲ

Image Credit : Asianet News

ಆಕೆಗೆ ಗಂಡನಿಲ್ಲ, ಈತನಿಗೆ ಹೆಂಡ್ತಿ ಬೇಕಿಲ್ಲ

ಬೆಂಗಳೂರಿನ ಇಂದಿರಾ ಪ್ರಿಯದರ್ಶಿನಿ ನಗರದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಆಕೆಯ ಲಿವ್-ಇನ್ ಸಂಬಂಧದಲ್ಲಿದ್ದ ವ್ಯಕ್ತಿಯು ತಾನೂ ಆತ್ಮಹ*ತ್ಯೆಗೆ ಶರಣಾಗಿದ್ದಾನೆ. ಮಹಿಳೆಯ ನಡತೆಯ ಬಗ್ಗೆ ಅನುಮಾನಗೊಂಡು ಇಬ್ಬರ ನಡುವೆ ನಡೆದ ಜಗಳವೇ ಈ ದಾರುಣ ಅಂತ್ಯಕ್ಕೆ ಕಾರಣ ಎನ್ನಲಾಗಿದೆ.

ಕೊಲೆಯಾದ ಮಹಿಳೆಯನ್ನು ಲಲಿತಾ (49) ಎಂದು ಗುರುತಿಸಲಾಗಿದೆ. ಆಕೆಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಲಕ್ಷ್ಮಿನಾರಾಯಣ (51) ಎಂದು ಗುರುತಿಸಲಾಗಿದೆ.

25

ಸಂಬಂಧ ಮತ್ತು ಜಗಳದ ಹಿನ್ನೆಲೆ

Image Credit : Asianet News

ಸಂಬಂಧ ಮತ್ತು ಜಗಳದ ಹಿನ್ನೆಲೆ

ಈ ಘಟನೆ ನಡೆದ ನಂತರ ಲಕ್ಷ್ಮಿನಾರಾಯಣ ಮತ್ತು ಲಲಿತಾ ನಡುವಿನ ಸಂಬಂಧದ ಕುರಿತು ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಲಕ್ಷ್ಮಿನಾರಾಯಣ ತನ್ನ ಮೊದಲ ಪತ್ನಿಯನ್ನು ತೊರೆದು ಲಲಿತಾಳೊಂದಿಗೆ ವಾಸಿಸುತ್ತಿದ್ದನು.ಲಲಿತಾಳ ಪತಿ ನಿಧನರಾದ ಬಳಿಕ, ಆಕೆ ಲಕ್ಷ್ಮಿನಾರಾಯಣನೊಂದಿಗೆ ಜೀವನ ಸಾಗಿಸುತ್ತಿದ್ದಳು. ಇಬ್ಬರೂ ಒಟ್ಟಿಗೆ ವಾಸಿಸುತ್ತಿದ್ದರೂ, ಇತ್ತೀಚಿನ ದಿನಗಳಲ್ಲಿ ಲಕ್ಷ್ಮಿನಾರಾಯಣನು ಲಲಿತಾಳ ನಡತೆಯ ಬಗ್ಗೆ ಪದೇ ಪದೇ ಸಂಶಯ ವ್ಯಕ್ತಪಡಿಸಿ ಜಗಳವಾಡುತ್ತಿದ್ದನು. ಈ ಜಗಳಗಳು ನಿರಂತರವಾಗಿ ಹೆಚ್ಚಾಗಿದ್ದವು.

35

ವೇಲ್‌ನಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ

Image Credit : Asianet News

ವೇಲ್‌ನಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ

ಭಾನುವಾರ ರಾತ್ರಿ (ಡಿ.01) ಇಬ್ಬರ ನಡುವೆ ಮತ್ತೊಮ್ಮೆ ಜಗಳ ತಾರಕಕ್ಕೇರಿತ್ತು. ಕೋಪದಿಂದ ಲಕ್ಷ್ಮಿನಾರಾಯಣ, ಲಲಿತಾಳ ಕುತ್ತಿಗೆಯನ್ನು ವೇಲ್‌ನಿಂದ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಆಕೆ ಸಾವನ್ನಪ್ಪಿದ್ದನ್ನು ಖಚಿತಪಡಿಸಿಕೊಂಡ ನಂತರ, ಲಕ್ಷ್ಮಿನಾರಾಯಣನು ಮನೆಯೊಳಗೆ ತಾನೂ ಸಹ ಆತ್ಮಹ*ತ್ಯೆಗೆ ಶರಣಾಗಿದ್ದಾನೆ.

45

ಬಾಗಿಲು ತೆರೆಯದ ಜೋಡಿ

Image Credit : Asianet News

ಬಾಗಿಲು ತೆರೆಯದ ಜೋಡಿ

ಸೋಮವಾರ (ಡಿ.02) ಬೆಳಗ್ಗೆಯಾದರೂ ಮನೆಯ ಬಾಗಿಲು ತೆಗೆದಿರುವುದನ್ನು ಗಮನಿಸಿದ ನೆರೆಹೊರೆಯವರಿಗೆ ಅನುಮಾನ ಬಂದಿದೆ. ಅವರು ಮನೆ ಒಳಗೆ ಹೋಗಿ ನೋಡಿದಾಗ, ಲಲಿತಾ ಕೊಲೆಯಾಗಿರುವುದು ಮತ್ತು ಲಕ್ಷ್ಮಿನಾರಾಯಣ ಆತ್ಮಹ*ತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

55

ರಾಜಗೋಪಾಲನಗರ ಠಾಣೆಯ ಪೊಲೀಸರು ಭೇಟಿ

Image Credit : Asianet News

ರಾಜಗೋಪಾಲನಗರ ಠಾಣೆಯ ಪೊಲೀಸರು ಭೇಟಿ

ಸ್ಥಳಕ್ಕೆ ತಕ್ಷಣವೇ ರಾಜಗೋಪಾಲನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅನೈತಿಕ ಸಂಬಂಧ, ಅನುಮಾನ ಮತ್ತು ಮನಸ್ತಾಪಗಳು ಒಂದು ಸುಂದರ ಕುಟುಂಬದ ಈ ದಾರುಣ ಅಂತ್ಯಕ್ಕೆ ಕಾರಣವಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ



Source link

Leave a Reply

Your email address will not be published. Required fields are marked *