ನಟ ರಣವೀರ್ ಸಿಂಗ್ (ರಣವೀರ್ ಸಿಂಗ್) ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರು ನೀಡಿದ ಹೇಳಿಕೆ. ‘ದೈವವನ್ನು ದೆವ್ವ’ ಎಂದು ಕರೆದಿದ್ದರು. ದೈವವನ್ನು ಅನುಕರಿಸಲು ಹೋಗಿ ಟೀಕೆಗೆ ಗುರಿಯಾಗಿದ್ದರು. ಇದರ ಸಂಬಂಧ ಅವರ ವಿರುದ್ಧ ನಾನಾ ಕಡೆ ದೂರು ದಾಖಲಾಗಿದೆ. ಈಗ ಬೆಂಗಳೂರಿನಲ್ಲೂ ಅವರ ಮೇಲೆ ದೂರು ನೀಡಲಾಗಿದೆ. ಸಿನಿಮಾ ರಿಲೀಸ್ ಗೂ ಮೊದಲೇ ಅವರು ಸಾಕಷ್ಟು ಸಂಕಷ್ಟ ಎದುರಿಸುತ್ತಿದ್ದಾರೆ.
ಇತ್ತಿಚೆಗೆ ಗೋವಾದದಲ್ಲಿ ಅಂತಾರಾಷ್ಟ್ರೀಯ ಸಿನಿಮಾೋತ್ಸವ ನಡೆಯಿತು. ಈ ವೇಳೆ ರಣವೀರ್ ಸಿಂಗ್ ಅವರು ದೈವದ ಅವಹೇಳನ ಮಾಡಿದ್ದಾರೆ. ಉಳ್ಳಾಳ್ತಿ ದೈವವನ್ನು ‘ಫೀಮೇಲ್ ಗೋಸ್ಟ್’ ಅಂದರೆ ‘ಹೆಣ್ಣು ದೆವ್ವ’ ಎಂದು ಸಂಬೋಧಿಸಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರು ಕ್ಷಮೆ ಕೂಡಿದ್ದಾರೆ. ಆದಾಗ್ಯೂ ಅವರ ವಿರುದ್ಧ ದೂರು ದಾಖಲಾಗಿದೆ. ಕ್ಷಮೆ ಒಪ್ಪಲು ಸಾಧ್ಯವಿಲ್ಲ ಎಂಬ ಮಾತು ಕೇಳಿ ಬಂದಿದೆ.
ಈ ಹೇಳಿಕೆ ಸಂಬಂಧ ವಕೀಲ ಪ್ರಶಾಂತ್ ಮೇಟಲ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ರಣವೀರ್ ಸಿಂಗ್ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವಂತೆ ಪ್ರಶಾಂತ್ ಕಾಣಿಸಿಕೊಂಡಿದ್ದಾರೆ.
‘ರಣವೀರ್ ಸದ್ಯ ಕ್ಷಮೇ ಕೇಳಿದ್ದಾರೆ. ಆದರೆ, ಅದನ್ನು ಒಪ್ಪಲು ಸಾಧ್ಯವಿಲ್ಲ. ರಣವೀರ್ ದಂಡನಾರ್ಹ ಅಪರಾಧ ಮಾಡಿದ್ದು ಅವರಿಗೆ ಕಾನೂನು ರೀತಿ ಶಿಕ್ಷೆ ಆಗಬೇಕು’ ಎಂಬುದು ಪ್ರಶಾಂತ್ ಅವರ ವಾದ.
ಇದನ್ನೂ ಓದಿ: ದೈವಕ್ಕೆ ಅವಮಾನ ಮಾಡಿದ ಆರೋಪ; ಬೇಷರತ್ ಕ್ಷಮೆ ಕೇಳಿದ ರಣವೀರ್ ಸಿಂಗ್
ರಣವೀರ್ ಸಿಂಗ್ ನಟನೆಯ ‘ಧುರಂಧರ ಸಿನಿಮಾ ಈ ವಾರ (ಡಿಸೆಂಬರ್ 5) ರಿಲೀಸ್ ಆಗುತ್ತಿದೆ. ಚಿತ್ರಕ್ಕೆ ಮೊದಲೇ ಹೈಪ್ ಸೃಷ್ಟಿ ಆಗುತ್ತಿಲ್ಲ. ಈ ಮಧ್ಯದಲ್ಲಿ ಈ ರೀತಿಯ ವಿವಾದಗಳು ಸಿನಿಮಾ ಬಿಸ್ನೆಸ್ ಗೆ ಮತ್ತಷ್ಟು ಹೊಡೆತ ಕೊಡುತ್ತಿದೆ. ಸಿನಿಮಾದ ಅವಧಿ 3 ಗಂಟೆ 36 ನಿಮಿಷ ಇದೆ. ಇಷ್ಟು ದೀರ್ಘ ಸಿನಿಮಾ ನೋಡೋದು ಹೇಗೆ ಎಂಬುದು ವೀಕ್ಷಕರ ಪ್ರಶ್ನೆಯಾಗಿದೆ. ಸಿನಿಮಾಗೆ ನೆಗೆಟಿವ್ ವಿಮರ್ಶೆ ಸಿಕ್ಕರೆ ನಿರ್ಮಾಪಕರು ದೊಡ್ಡ ನಷ್ಟ ಅನುಭವಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.