ಬೆಂಗಳೂರು , ಡಿ.4: ದೆಹಲಿ ಬ್ಲಾಸ್ಟ್ (ದೆಹಲಿ ಬ್ಲಾಸ್ಟ್) ನಂತರ ಎನ್ಐಎ ಚುರುಕಿನ ಕಾರ್ಯಚರಣೆ ನಡೆಸುತ್ತಿದೆ. ಇದೀಗ ಈ ಬ್ಲಾಸ್ಟ್ಗೂ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ಮೊಬೈಲ್ ಬಳಕೆ ಮಾಡಿರುವದಕ್ಕೂ ಸಂಬಂಧ ಇದೆಯಾ ಎಂಬ ಅನುಮಾನ ಮೂಡಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲು ಮತ್ತೆ ಎನ್ ಐಎ ಜೈಲಿಗೆ ಭೇಟಿ ನೀಡಲಾಗಿದೆ. ಎನ್ಐಎ ದೇಶದ ಹಲವು ಕಡೆ ದಾಳಿಯನ್ನು ನಡೆಸಿ, ಹಲವು ದಾಖಲೆಗಳನ್ನು ವಶಪಡಿಸಿಕೊಂಡ ತನಿಖೆಯನ್ನು ನಡೆಸುತ್ತಿದೆ. ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರರು ಹಾಗೂ ರೌಡಿಶೀಟರ್ಗಳು ಮೊಬೈಲ್ ಬಳಸುತ್ತಿದ್ದವು ಎಂಬ ವಿಡಿಯೋ ವೈರಲ್ ಆಗಿದೆ. ಈ ವಿಚಾರ ಕರ್ನಾಟಕ ಸರ್ಕಾರಕ್ಕೂ ತಲೆನೋವಾಗಿತ್ತು. ಜುಹಾದ್ ಹಮೀದ್ ಶಕೀಲ್ ಮನ್ನಾ ಕೈಯಲ್ಲಿ ಮೊಬೈಲ್ ಇರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಐಎ ಅಧಿಕಾರಿಗಳು ಬೆಂಗಳೂರು ಜೈಲಿಗೆ ಭೇಟಿ ನೀಡಿ ತನಿಖೆ ನಡೆಸಿದ್ದರು. ಈ ತನಿಖೆಯ ಸ್ವಲ್ಪ ಸಮಯದ ನಂತರ ದೆಹಲಿಯಲ್ಲಿ ಕಾರು ಬ್ಲಾಸ್ಟ್ ಆಗಿದೆ. ಇದೀಗ ಬೆಂಗಳೂರು ಜೈಲಿನಲ್ಲಿರುವ ಉಗ್ರನಿಗೂ ದೆಹಲಿ ಬ್ಲಾಸ್ಟ್ ಕೂಡ ಇರಬಹುದು ಎಂಬ ಅನುಮಾನ ಶುರುವಾಗಿದೆ. ಈ ಬ್ಲಾಸ್ಟ್ ಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾಗೂ ಲಿಂಕ್ ಇದೆಯಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಈ ಕಾರಣಕ್ಕೆ ಎನ್ಐಎ ಇದೀಗ ಮತ್ತೊಮ್ಮೆ ಜೈ ಭೇಟಿ ನೀಡಿದೆ.
ಎನ್ಐಎ ತಂಡ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ ಜುಹಾದ್ ಹಮೀದ್ ಶಕೀಲ್ ಮನ್ನಾ ವಿಚಾರಣೆಯನ್ನು ಕೂಡ ಎನ್ಐಎ ಅಧಿಕಾರಿಗಳು ಅಧಿಕಾರಿಗಳು. ಅಧಿಕಾರಿಗಳು ಹಲವು ಮಾಹಿತಿಗಳನ್ನು ಹಾಗೂ ದಾಖಲೆಗಳನ್ನು ಕೋರಿದ್ದಾರೆ, ಜೈಲಿನಲ್ಲಿದ್ದುಕೊಂಡು ಯಾರನ್ನೆಲ್ಲ ಸಂಪರ್ಕಿಸಿದ್ದಾರೆ ಎಂಬ ಮಾಹಿತಿಯನ್ನು ಒದಗಿಸಿದ್ದಾರೆ. ಜೊತೆಗೆ ದೆಹಲಿ ಬ್ಲಾಸ್ಟ್ ಬಗ್ಗೆಯೂ ಅಧಿಕಾರಿಗಳು ಜುಹಾದ್ ಹಮೀದ್ ಶಕೀಲ್ ಮನ್ನಾ ಬಳಿ ಕೇಳಿದ್ದಾರೆ.
ಲಷ್ಕರ್ ಉಗ್ರ ಮೊಬೈಲ್ ಬಳಸುತ್ತಿರುವ ವಿಡಿಯೋ:
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ವಿಐಪಿ ಸೌಲಭ್ಯಗಳು ಸಿಗುತ್ತಿದೆ ಎಂಬ ಆರೋಪ ಕೂಡ ಬಂದಿತ್ತು. ಇದೇ ಉಗ್ರ ಜುಹಾದ್ ಹಮೀದ್ ಶಕೀಲ್ ಮನ್ನಾ ಮೊಬೈಲ್ ಬಳಸಿರುವ ಬೆನ್ನಲ್ಲೇ ವೈರಲ್ ಆಗುತ್ತಿದೆ. ಈತ ಯುವಕರನ್ನು ಐಸಿಸ್ ಉಗ್ರ ಸಂಘಟನೆಗೆ ನೇಮಿಸಲಾಗಿದೆ ಎಂಬ ಆರೋಪವಿದೆ. ಇನ್ನು ಜೈಲಿನಲ್ಲಿ ನಡೆಯುತ್ತಿರುವ ಇಂತಹ ಕೃತ್ಯಗಳ ಬಗ್ಗೆ 35 ವರ್ಷಗಳ ಕಾಲ ಬೆಂಗಳೂರಿನಲ್ಲಿ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಎಸ್.ಕೆ. ಉಮೇಶ್ ಅವರು ಟಿವಿ9 ಜೊತೆಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು, ಹಿಂದೆ ಕೂಡ ಜೈಲುಗಳಲ್ಲಿ ಇಂತಹ ಅಕ್ರಮಗಳು ನಡೆಯುತ್ತಿದ್ದವು. ಆದರೆ, ಜೈಲಿನೊಳಗೆ ಮೊಬೈಲ್ ಬಳಕೆ ಮತ್ತು ಇತರ ವಿಐಪಿ ಸೌಲಭ್ಯಗಳು ದೇಶದ ದೃಷ್ಟಿಯಿಂದ ಅಭದ್ರತೆಯನ್ನು ಸೃಷ್ಟಿಸುತ್ತವೆ ಎಂದು ಹೇಳಿದರು.
ಇದನ್ನೂ ಓದಿ: ಪರಪ್ಪನ ಅಗ್ರಹಾರದ ಬ್ಯಾರಕ್ಗಳ ಮೇಲೆ ರೇಡ್: ದಾಳಿಗೂ ಮುನ್ನವೇ ಮಾಹಿತಿ ಲೀಕ್?
ದೆಹಲಿ ಬ್ಲಾಸ್ಟ್ ಬಗ್ಗೆ ತನಿಖೆ:
ದೆಹಲಿಯ ಕೆಂಪುಕೋಟೆ ಸಮೀಪದ ಪ್ರಮುಖ ರಸ್ತೆಯಲ್ಲಿ ನಡೆದ ಐ20 ಕಾರ್ ಸ್ಫೋಟಕ್ಕೆ ಸಂಬಂಧಿಸಿದಂತೆ ಐಎ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೂಡ ಒಂದು, ದೆಹಲಿ ಬ್ಲಾ ನಂತರ ದೇಶದ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಪ್ರತಿಯೊಂದು ವಿಚಾರದಲ್ಲೂ ಕೂಡ ಎಚ್ಚರಿಕೆಯ ಹೆಜ್ಜೆಯನ್ನು ಇಡಲಾಗುತ್ತಿದೆ. ಈ ಬ್ಲಾಸ್ಟ್ ನಿಂದ 13 ಜನರು ಸಾವನ್ನಪ್ಪಿದರು. ಮೂವತ್ತಕ್ಕೂ ಹೆಚ್ಚು ಮಂದಿ ಇದ್ದರು. ಪ್ರಕರಣದ ಹಿಂದಿರುವ ಎಲ್ಲಾ ಆಯಾಮಗಳನ್ನು ತನಿಖೆ ನಡೆಸಲಾಗುತ್ತಿದೆ. ಇದೊಂದು ಭಯೋತ್ಪಾದಕ ದಾಳಿ ಎಂದು ಹೇಳಲಾಗಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರದೀಪ್ ಚಿಕ್ಕಾಡಿ
ರಂದು ಪ್ರಕಟಿಸಲಾಗಿದೆ – 8:40 am, ಗುರು, 4 ಡಿಸೆಂಬರ್ 25