BBK 12: ಕಿಚ್ಚ ಸುದೀಪ್‌ ಇದ್ರೂ ಕ್ಯಾರೆ ಎನ್ನಲಿಲ್ಲ. ಅಸಭ್ಯ ಎಂದು ಕಿತ್ತಾಡ್ಕೊಂಡ ರಜತ್‌, ಧ್ರುವಂತ್! | Bigg Boss Kannada Season 12 Rajath Dhruvanth Fight Infront Of Kiccha Sudeep

BBK 12: ಕಿಚ್ಚ ಸುದೀಪ್‌ ಇದ್ರೂ ಕ್ಯಾರೆ ಎನ್ನಲಿಲ್ಲ. ಅಸಭ್ಯ ಎಂದು ಕಿತ್ತಾಡ್ಕೊಂಡ ರಜತ್‌, ಧ್ರುವಂತ್! | Bigg Boss Kannada Season 12 Rajath Dhruvanth Fight Infront Of Kiccha Sudeep


15

ಮನೆ ಬಿಟ್ಟು ಹೋಗಬೇಕು ಎನ್ನೋದು ಯಾಕೆ?

Image Credit : colors kannada facebook

ಮನೆ ಬಿಟ್ಟು ಹೋಗಬೇಕು ಎನ್ನೋದು ಯಾಕೆ?

ಮನೆ ಬಿಟ್ಟು ಹೋಗುವಂಥದ್ದು ಏನಾಯ್ತು ಎಂದು ವೀಕ್ಷಕರು ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಧ್ರುವಂತ್‌ ಅವರು ಉತ್ತರ ನೀಡಿದ್ದಾರೆ.

“ನಿರಂತರವಾಗಿ ಕೆಲವೊಂದಿಷ್ಟು ಆರೋಪಗಳನ್ನು ಮಾಡಲಾಯ್ತು, ಅದರಲ್ಲಿರುವ ಡ್ಯಾಮೇಜ್‌ ನನಗೆ ಬೇಕಾ?” ಎಂದು ಧ್ರುವಂತ್‌ ಅವರು ಹೇಳಿದ್ದಾರೆ.

25

 ಅಸಭ್ಯವಾಗಿ ವರ್ತಿಸುತ್ತಾರಾ?

Image Credit : colors kannada facebook

ಅಸಭ್ಯವಾಗಿ ವರ್ತಿಸುತ್ತಾರಾ?

ಆಗ ರಜತ್‌ ಅವರು, “ಧ್ರುವಂತ್‌ ಅವರೇ ಡ್ಯಾಮೇಜ್ ಮಾಡಿಕೊಳ್ಳುತ್ತಿದ್ದಾರೆ. ಅಸಭ್ಯವಾಗಿ ಮಾತನಾಡೋದು, ಅಸಭ್ಯವಾಗಿ ವರ್ತಿಸೋದು ಮಾಡುತ್ತಿದ್ದಾನೆ” ಎಂದಿದ್ದಾರೆ. ಈ ಜಗಳ ಮತ್ತೆ ಮುಂದುವರೆದಿದೆ. ಕೊನೆಯಲ್ಲಿ ಏನಾಗಲಿದೆ ಎಂದು ಕಾದು ನೋಡಬೇಕಿದೆ.

35

ಇದು ತಪ್ಪು ಹೇಳಿಕೆ

Image Credit : colors kannada facebook

ಇದು ತಪ್ಪು ಹೇಳಿಕೆ

ಧ್ರುವಂತ್‌, “ಇದು ತಪ್ಪು ಹೇಳಿಕೆ” ಎಂದಿದ್ದಾರೆ. ಆಗ ರಜತ್‌ ಅವರು, “ನಾನು ಮಾತನಾಡುವಾಗ ತಡೆದುಕೋ” ಎಂದಿದ್ದಾರೆ. ಆಗ ಧ್ರುವಂತ್‌, “ನೀನು ಇದನ್ನೆಲ್ಲ ನನ್ನ ಹತ್ರ ಮಾತಾಡಬೇಡ. ಎಷ್ಟರಲ್ಲಿ ಇರಬೇಕೋ ಅಷ್ಟು ಇರು” ಎಂದು ಹೇಳಿದ್ದಾರೆ.

45

ಜಗಳ ಆಡಿಕೊಂಡ ರಜತ್‌, ಧ್ರುವಂತ್‌

Image Credit : colors kannada facebook

ಜಗಳ ಆಡಿಕೊಂಡ ರಜತ್‌, ಧ್ರುವಂತ್‌

ಕಿಚ್ಚ ಸುದೀಪ್‌ ಮುಂದೆ ಧ್ರುವಂತ್‌, ರಜತ್‌ ಅವರು ಜಗಳ ಆಡಿಕೊಂಡಿದ್ದಾರೆ. ಇಷ್ಟುದಿನಗಳ ಕಾಲ ವೀಕ್‌ ಡೇಸ್‌ಗಳಲ್ಲಿ ಕೂಗಾಡಿಕೊಂಡು, ಜಗಳ ಆಡುತ್ತಿದ್ದವರು, ಈಗ ಕಿಚ್ಚ ಸುದೀಪ್‌ ಮುಂದೆ ಕೂಗಾಡಿದ್ದಾರೆ. ಆಗ ಸುದೀಪ್‌ ಏನು ಹೇಳಲಿದ್ದಾರೆ ಎಂದು ಕಾದು ನೋಡಬೇಕಿದೆ.

55

ಧ್ರುವಂತ್‌ ವರ್ತನೆ ಬಗ್ಗೆ ಸುದೀಪ್‌ ಏನಂದ್ರು?

Image Credit : colors kannada facebook

ಧ್ರುವಂತ್‌ ವರ್ತನೆ ಬಗ್ಗೆ ಸುದೀಪ್‌ ಏನಂದ್ರು?

ಧ್ರುವಂತ್‌ ಅವರು ಗಿಲ್ಲಿ ನಟ, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇವರ ಜೊತೆ ಅವರ ಜಗಳ ಆಗಿದೆ. ರಕ್ಷಿತಾ ಮುಖವಾಡ ಹಾಕಿಕೊಂಡಿದ್ದಾಳೆ, ವಯಸ್ಸಿಗೆ ತಕ್ಕಂತೆ ಮಾತನಾಡೋದಿಲ್ಲ, ವರ್ತಿಸೋದಿಲ್ಲ ಎಂದಿದ್ದರು. ಇನ್ನು ಜಗಳ ಆಡುವಾಗ ವಿಚಿತ್ರವಾಗಿ ಡ್ಯಾನ್ಸ್‌ ಕೂಡ ಮಾಡಿದ್ದರು. ಇವೆಲ್ಲವೂ ಟ್ರೋಲ್‌ ಆಗಿತ್ತು.

ಕಿಚ್ಚ ಸುದೀಪ್‌ ಏನು ಹೇಳ್ತಾರೆ? ಎಪಿಸೋಡ್‌ ನೋಡಬೇಕಿದೆ

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

Padmashree Bhat

ಪದ್ಮಶ್ರೀ ಭಟ್. ವಿಜಯವಾಣಿ, ಒನ್ ಇಂಡಿಯಾ, ವಿಜಯ ಕರ್ನಾಟಕ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಒಟ್ಟು ಎಂಟು ವರ್ಷಗಳಿಗೂ ಅಧಿಕ ವೃತ್ತಿಜೀವನದ ಅನುಭವವಿದೆ.‌ ಸಿನಿಮಾ, ಟಿವಿ ಕ್ಷೇತ್ರದಲ್ಲಿ ಆಸಕ್ತಿ ಇದ್ದು, ಈಗಾಗಲೇ ಸಾಕಷ್ಟು ಸುಪ್ರಸಿದ್ಧ ತಾರೆಯರ, ಸಾಧಕರ ಸಂದರ್ಶನ ಮಾಡಿರುವೆ. ಅಷ್ಟೇ ಅಲ್ಲದೆ ಬ್ಯೂಟಿ, ಆರೋಗ್ಯ, ಧಾರ್ಮಿಕ ವಿಷಯಗಳನ್ನು ಬರೆಯೋದು ನಂಗಿಷ್ಟ. ಪುಸ್ತಕ ಓದುವುದು, ಇನ್ನುಳಿದಂತೆ ಇತರರ ಸಂದರ್ಶನ ಕೇಳೋದು, ಪ್ರವಾಸ ನನ್ನ ಹವ್ಯಾಸಗಳಲ್ಲೊಂದು. ಉತ್ತರ ಕನ್ನಡದ ಸಿರಸಿಯವಳು.



Source link

Leave a Reply

Your email address will not be published. Required fields are marked *