Headlines

ಬಾಬರಿ ಮಸೀದಿಗೆ ಶಿಲಾನ್ಯಾಸ ಮಾಡಿದ ಟಿಎಂಸಿ ಶಾಸಕ; ಮತ್ತೆ ಭುಗಿಲೆದ್ದ ಹೊಸ ವಿವಾದ

ಬಾಬರಿ ಮಸೀದಿಗೆ ಶಿಲಾನ್ಯಾಸ ಮಾಡಿದ ಟಿಎಂಸಿ ಶಾಸಕ; ಮತ್ತೆ ಭುಗಿಲೆದ್ದ ಹೊಸ ವಿವಾದ


ಮುರ್ಷಿದಾಬಾದ್, ಡಿಸೆಂಬರ್ 6: ಅಯೋಧ್ಯೆಯಲ್ಲಿ ರಾಮ ಮಂದಿರದ (ರಾಮ ಮಂದಿರ) ನಿರ್ಮಾಣ ಬೆನ್ನಲ್ಲೇ ಇದೀಗ ಬಾಬರಿ ಮಸೀದಿಗೆ ಶಿಲಾನ್ಯಾಸ ನೆರವೇರಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರದಲ್ಲಿ ಅಯೋಧ್ಯೆಯ ಬಾಬರಿ ಮಸೀದಿ ಮಾದರಿಯಲ್ಲಿ ಮಸೀದಿಯೊಂದಕ್ಕೆ ಶಿಲಾನ್ಯಾಸ ಮಾಡಲಾಗಿದೆ. ಅಮಾನತುಗೊಂಡ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ಇಂದು ಬಿಗಿ ಭದ್ರತೆಯ ನಡುವೆ ಬಾಬರಿ ಮಸೀದಿಗೆ ಶಿಲಾನ್ಯಾಸ ನೆರವೇರಿಸಿದರು.

ಈ ಘಟನೆಯಿಂದ ಪಶ್ಚಿಮ ಬಂಗಾಳದ ಕೋಮು ಸೂಕ್ಷ್ಮ ಪ್ರದೇಶವಾದ ಮುರ್ಷಿದಾಬಾದ್‌ನಲ್ಲಿ ಇಂದು ಉದ್ವಿಗ್ನತೆ ಉಂಟಾಗಿದೆ. ಇಂದು ಬೆಳಿಗ್ಗೆಯಿಂದ ಸಾವಿರಾರು ಸೇರಿದ್ದ ಸ್ಥಳದಲ್ಲಿ “ನಾರಾ-ಎ-ತಕ್ಬೀರ್, ಅಲ್ಲಾಹು ಅಕ್ಬರ್” ಎಂಬ ಘೋಷಣೆಗಳು ಮೊಳಗುತ್ತಿರುವ ಜನರ ಕಬೀರ್ ವೇದಿಕೆಯ ಮೇಲೆ ಧರ್ಮಗುರುಗಳ ಜೊತೆಗೆ ರಿಬ್ಬನ್ ಕತ್ತರಿಸುವ ಮೂಲಕ ಶಿಲಾನ್ಯಾಸ ಮಾಡಲಾಗಿದೆ.

ಇದನ್ನೂ ಓದಿ: ರಾಮ ಮಂದಿರ ಧ್ವಜಾರೋಹಣ 2025: ರಾಮ ಮಂದಿರದ ಧ್ವಜಾರೋಹಣಕ್ಕೆ ಈ ದಿನವನ್ನೇ ಆಯ್ಕೆ ಮಾಡಿದ್ದು ಏಕೆ ಗೊತ್ತಾ?

ಈ ಶಿಲಾನ್ಯಾಸ ಸಮಾರಂಭವು ಭಾರೀ ಭದ್ರತಾ ವ್ಯವಸ್ಥೆಯಲ್ಲಿ ನಡೆಯಿತು. ಕೋಮುವಾದಿ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ವಾರದ ಆರಂಭದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಿಂದ ಅಮಾನತುಗೊಂಡಿದ್ದ ಕಬೀರ್ ಈ ತಿಂಗಳ ಆರಂಭದಲ್ಲಿ ಬಾಬರಿ ಮಸೀದಿಯ ಶಂಕುಸ್ಥಾಪನೆ ಸಮಾರಂಭವನ್ನು ಘೋಷಿಸಿದರು. ಇದು ರಾಜಕೀಯ ಟೀಕೆಗೆ ಕಾರಣವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *