ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನಾ ತಮ್ಮ ವಿವಾಹದ ಕುರಿತಾಗಿ ಕೇಳಿ ಬಂದ ಊಹಾಪೋಹಗಳ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಪಾಲಾಶ್ ಮುಚ್ಚಲ್ಗಿನ ಮದುವೆಯನ್ನು ಕ್ಯಾನ್ಸಲ್ ಮಾಡಿರುವುದು, ಈ ವಿಷಯವನ್ನು ಇಲ್ಲಿಗೆ ನಿಲ್ಲಿಸಲು ನಾನು ಬಯಸುತ್ತೇನೆ. ಇದರೊಂದಿಗೆ ಸ್ಮೃತಿ ಮಂಧಾನ ಹಾಗೂ ಪಾಲಾಶ್ ಮುಚ್ಚಲ್ ನಡುವಣ ಮದುವೆ ಮುರಿದು ಬಿದ್ದಿರುವುದು ಖಚಿತವಾಗಿದೆ.
ಈ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್ ಹಂಚಿಕೊಂಡಿರುವ ಸ್ಮೃತಿ ಮಂಧಾನ, “ಕಳೆದ ಕೆಲವು ವಾರಗಳಿಂದ ನನ್ನ ಜೀವನದ ಬಗ್ಗೆ ಸಾಕಷ್ಟು ಊಹಾಪೋಹಗಳು ಹಬ್ಬಿವೆ. ಈ ಸಮಯದಲ್ಲಿ ನಾನು ಮಾತನಾಡುತ್ತೇನೆ ಎಂದು ಭಾವಿಸುತ್ತೇನೆ. ನಾನು ತುಂಬಾ ಖಾಸಗಿ ವ್ಯಕ್ತಿ, ಮತ್ತು ನಾನು ಅದನ್ನು ಇಡಲು ಬಯಸುತ್ತೇನೆ. ವಿನಂತಿಸುತ್ತೇನೆ.”
“ನಮ್ಮೆಲ್ಲರನ್ನೂ ಒಂದು ಉದ್ದೇಶವು ಮುನ್ನಡೆಸುತ್ತದೆ ಎಂದು ಭಾವಿಸುತ್ತೇನೆ. ನನಗೆ, ಅದು ಯಾವಾಗಲೂ ನನ್ನ ದೇಶವನ್ನು ಪ್ರತಿನಿಧಿಸುತ್ತೇನೆ. ನಾನು ಭಾರತಕ್ಕಾಗಿ ನಿರಂತರವಾಗಿ ಆಡುವುದನ್ನು ಮತ್ತು ಟ್ರೋಫಿಗಳನ್ನು ಗೆಲ್ಲುವುದನ್ನು ಮುಂದುವರಿಸಲು ಆಶಿಸುತ್ತೇನೆ. ಅದುವೇ ನನ್ನ ಗಮನಕ್ಕೆ ಬಂದಿದೆ. ನಿಮ್ಮ ಬೆಂಬಲಕ್ಕೆ ಧನ್ಯವಾದಗಳು. ಮುಂದುವರಿಯುವ ಸಮಯ ಇದು” ಎಂದು ಸ್ಮೃತಿ ಇನ್ಸ್ಟಾಗ್ರಾಮ್ ಪೋಸ್ಟ್ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: IND vs SA: ಟಿ20 ಸರಣಿಗೆ ಟೀಮ್ ಇಂಡಿಯಾದ 8 ಆಟಗಾರರು ಅಲಭ್ಯ
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸ್ಮೃತಿ ಮಂಧಾನ ಹಾಗೂ ಪಾಲಾಶ್ ಮುಚ್ಚಲ್ ಅವರ ಮದುವೆ ನವೆಂಬರ್ 23 ರಂದು ನಡೆಯಬೇಕಿತ್ತು. ಆದರೆ ಸ್ಮೃತಿ ಅವರ ತಂದೆ ಶ್ರೀನಿವಾಸ್ ಧಾನ ಅವರ ಹಠಾತ್ ಅನಾರೋಗ್ಯದಿಂದಾಗಿ ಸಮಾರಂಭವನ್ನು ನಿಲ್ಲಿಸಲಾಯಿತು. ಅವರ ಹೃದಯಾಘಾತದ ಲಕ್ಷಣಗಳಿಂದ ತಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಮದುವೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಆದರೆ ಇದೀಗ ಪಾಲಾಶ್ ಮುಚ್ಚಲ್ ಜೊತೆಗಿನ ವಿವಾಹವನ್ನು ರದ್ದುಗೊಳಿಸಲಾಗಿದೆ ಸ್ಮೃತಿ ಮಂಧಾನ.