ಎಂಇಎಸ್​​, ಶಿವಸೇನೆ ಪುಂಡಾಟ: ಕರ್ನಾಟಕ- ಮಹಾರಾಷ್ಟ್ರ ನಡುವೆ ಬಸ್​​ ಸಂಚಾರ ಸ್ಥಗಿತ

ಎಂಇಎಸ್​​, ಶಿವಸೇನೆ ಪುಂಡಾಟ: ಕರ್ನಾಟಕ- ಮಹಾರಾಷ್ಟ್ರ ನಡುವೆ ಬಸ್​​ ಸಂಚಾರ ಸ್ಥಗಿತ


ಬೆಳಗಾವಿ, ಡಿಸೆಂಬರ್ 08: ಕುಂದಾನಗರಿ ಬೆಳಗಾವಿಯಲ್ಲಿ ಇಂದಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವೇ ಎಂಐಎಸ್ ಮತ್ತು ಶಿವಸೇನೆ ನಾಯಕರು ಬಾಲ ಬಿಚ್ಚಿದ್ದಾರೆ. ಕರ್ನಾಟಕಇದ್ದರೂ ಕನ್ನಡ ವಿರೋಧಿ ಘೋಷಣೆ ಕೂಗಿ ಅಧಿವೇಶನಕ್ಕೆ ವಿರುದ್ಧವಾಗಿ ಮಹಾಮೇಳ ನಡೆಸಲು ವಿಫಲ ಯತ್ನ ನಡೆದಿದೆ. ಪರಿಣಾಮವಾಗಿ ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ವ್ಯಾಕ್ಸಿನ್ ಡಿಪೋದಲ್ಲಿ ಸೇರಲು ಉದ್ದೇಶಿಸಿರುವ ಎಂಐಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಪ್ಲ್ಯಾನ್‌ಗೆ ಬೆಳಗಾವಿ ಬ್ರೇಕ್ ಹಾಕಿದ್ದಾರೆ. ಒಬ್ಬೊಬ್ಬರೇ ವ್ಯಾಕ್ಸಿನ್ ಡಿಪೋದ ಬಳಿ ಬರ್ತಾಯಿದ್ದಂತೆ ಆತನನ್ನು ಕೂಡಲೇ ವಶಕ್ಕೆ ಪಡೆದಿದ್ದಾರೆ. ನಡುವೆಯೂ ಪುಂಡ ಕೆಲ ನಾಡದ್ರೋಹಿ ಘೋಷಣೆ ಕೂಗಿದ್ರೆ, ಇನ್ನು ಕೆಲವರು ರಸ್ತೆ ಮೇಲೆ ಕುಳಿತು ಹೈಡ್ರಾಮಾ ಚಿಹ್ನೆ. ಆದರೆ, ಇದ್ಯಾವುದಕ್ಕೂ ಸೊಪ್ಪು ಹಾಕದ ಪೊಲೀಸರು ಪುಂಡರನ್ನು ವಶಕ್ಕೆ ಪಡೆದಿದ್ದಾರೆ. ಇತ್ತ ವಿಷಯ ತಿಳಿದ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದು, ವ್ಯಾಕ್ಸಿನ್ ಡಿಪೋಗೆ ನುಗ್ಗಲು ಯತ್ನಿಸಿದ್ದಾರೆ. ಪೊಲೀಸರು ಮಾರ್ಗ ಮಧ್ಯೆಯೇ ಇವರನ್ನು ತಡೆದ ಪರಿಣಾಮ, ವಾಗ್ವಾದ ಕೂಡ ನಡೆದಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ನಾಡದ್ರೋಹಿ ಘೋಷಣೆ ಕೂಗಿದ ಎಂಐಎಸ್ ಪೊಲೀಸ್ ವಶಕ್ಕೆ

ಇನ್ನು ಬೆಳಗಾವಿಯಲ್ಲಿ ಎಂಐಎಸ್ ಮಹಾಮೇಳಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಕ್ಕೆ ಶಿವಸೇನೆ ಉದ್ದವ್ ಠಾಕ್ರೆ ಬಣದ ಕಾರ್ಯಕರ್ತರು ಕೊಲ್ಲಾಪುರದಲ್ಲಿ ರಾಜ್ಯದ ಸರ್ಕಾರಿ ಬಸ್ ಗಳನ್ನು ತಡೆದು, ಅವರ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿರುವ ಸ್ಟಿಕ್ಕರ್ ವಿರುದ್ಧ ಗೂಂಡಾ ವರ್ತನೆ ತೋರಿದ್ದಾರೆ. ವಿಜಯ್ ದೇವಣೆ ನೇತೃತ್ವದಲ್ಲಿ ಈ ರೀತಿ ಪುಂಡಾಟ ನಡೆದದ್ದೇ, ಅಥಣಿಯಲ್ಲಿ ಮಹಾರಾಷ್ಟ್ರದ ಬಸ್‌ಗಳನ್ನು ತಡೆದು ಕರವೇ ಕಾರ್ಯಕರ್ತರು ಕಿಡಿ ಕಾರಿದ್ದಾರೆ. ಬಸ್‌ಗಳ ಮೇಲೆ ಬಿಳಿ ಬಣ್ಣದಲ್ಲಿ ಜೈ ಕರ್ನಾಟಕ ಎಂದು ಬರೆಯುವ ಮೂಲಕ ತಿರುಗೇಟು ಕೊಟ್ಟಿದ್ದಾರೆ.

ಬಸ್ ಸಂಚಾರ ಸ್ಥಗಿತ

ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗಳನ್ನು ತಡೆಯುವ ಕೆಲಸ ಆಗ್ತಿದ್ದಂತೆ ಮುಂಜಾಗ್ರತಾ ಕ್ರಮವಾಗಿ ಮಹಾರಾಷ್ಟ್ರಕ್ಕೆ ರಾಜ್ಯದಿಂದ ತೆರಳುವ ಎಲ್ಲ ಸರ್ಕಾರಿ ಬಸ್‌ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೊಲ್ಲಾಪುರ, ಪುಣೆ, ಮುಂಬಯಿ ಸೇರಿದಂತೆ ಹಲವೆಡೆ ಸಂಚರಿಸಬೇಕಿದ್ದ ರಾಜ್ಯದ ಬಸ್‌ಗಳ ಸಂಚಾರ ರದ್ದಾಗಿದೆ. ಅತ್ತ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸಬೇಕಿದ್ದ ಸರ್ಕಾರಿ ಬಸ್ಸುಗಳ ಸಂಚಾರಕ್ಕೂ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರ ಪರದಾಟ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *