ಬೆಂಗಳೂರು, (ಡಿಸೆಂಬರ್ 08): ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ (ಯೋಗೀಶ್ಗೌಡ ಗೌಡ ಕೊಲೆ ಪ್ರಕರಣ) ಕೊಲೆ ಪ್ರಕರಣಕ್ಕೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ (ವಿನಯ್ ಕುಲಕರ್ಣಿ) ಜಾಮೀನು ಅರ್ಜಿ ವಜಾಗೊಂಡಿದೆ. ಇಂದು (ಡಿಸೆಂಬರ್ 08) ಜನಪ್ರತಿನಿಧಿಗಳ ಕೋರ್ಟ್, ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಿ ಆದೇಶ ಹೊರಡಿಸಿದೆ. ಈ ಸಂಪುಟ ಪುನಾರಚನೆ ವೇಳೆ ಸಚಿವರಾಗಬೇಕೆಂಬ ವಿನಯ್ ಕುಲಕರ್ಣಿ ಕನಸು ನುಚ್ಚುನೂರಾಗಿದೆ.
ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದೇಕೆ?
ಯೋಗೇಶ್ ಗೌಡ ಹತ್ಯೆ ಪ್ರಕರಣದ 16ನೇ ಆರೋಪಿ ಚಂದ್ರಶೇಖರ ಇಂಡಿ ಅಲಿಯಾಸ್ ಚಂದು ಮಾಮಗೆ ನ್ಯಾಯಾಲಯ ಜಾಮೀನು ನೀಡಿದೆ. ಆದರೆ, 15ನೇ ಆರೋಪಿಯಾಗಿರುವ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಅರ್ಜಿಯನ್ನು ತಿರಸ್ಕಾರ ಮಾಡಲಾಗಿದೆ. ಪ್ರಮುಖವಾಗಿ ಸಾಕ್ಷಿಗಳ ಮೇಲೆ ಒತ್ತಡ ಹಾಕಿದ್ದ ಆರೋಪದ ಮೇಲೆ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
ಇದನ್ನೂ ನೋಡಿ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿದ ಹಿನ್ನಲೆಯಲ್ಲಿ ಜಾಮೀನು ಕೋರಿ ವಿನಯ್ ಕುಲಕರ್ಣಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಕುರಿತು ಕೋರ್ಟ್ ವಾದ ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿತ್ತು.ಇನ್ನೊಂದೆಡೆ ವಿನಯ್ ಕುಲಕರ್ಣಿ ಸಹ ಈ ಮತ್ತೆ ಜಾಮೀನು ಸಿಗುತ್ತೆ. ಈ ಬಾರಿ ಸಂಪುಟ ಪುನಾರಚನೆ ವೇಳೆ ಸಚಿವರಾಗಬೇಕೆಂಬ ಕನಸು ಕಂಡಿದ್ದರು. ಆದರೆ, ಕೋರ್ಟ್ ವಿನಯ್ ಕುಲಕರ್ಣಿ ಕನಸಿಗೆ ತಣ್ಣೀರೆರಚಿದೆ.
ಏನಿದು ಕೇಸ್?
ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ಗೌಡ ಅವರನ್ನು 2016ರ ಜೂನ್ 15ರಂದು ದುಷ್ಕರ್ಮಿಗಳ ಹತ್ಯೆ ಮಾಡಲಾಗಿದೆ. ಪ್ರಕರಣದ ತನಿಖೆಯನ್ನು ಸ್ಥಳೀಯ ಪೊಲೀಸರ ಬಳಿಕ ಕೈಗೆತ್ತಿಕೊಂಡು ಶಾಸಕ ವಿನಯ್ ಕುಲಕರ್ಣಿ ಅವರನ್ನು ಆರೋಪಿಯನ್ನಾಗಿ ಪರಿಗಣಿಸಿ ಬಂಧಿಸಿದ್ದರು. ಬಳಿಕ ವಿನಯ್ ಕುಲಕರ್ಣಿ ಜಾಮೀನಿನ ಮೇಲೆ ಜೈಲಿನಿಂದ ಆಚೆಬಂದಿದ್ದರು. ಆದರೆ, ನಾಶ ಯತ್ನ ಸಾಕ್ಷಿಂದು ಸಾಕ್ಷ್ಯ ಸಮೇತ ಸಾಕ್ಷಿ ಮೊರೆ ಹೋಗಿತ್ತು. ಇದನ್ನು ಪರಿಗಣಿಸಿದ ವಿನಯ್ ಕರ್ಣಿಗೆ ನೀಡಲಾಗಿದ್ದ ಜಾಮೀನು ರದ್ದುಪಡಿಸಿತ್ತು. ಬಳಿಕ ವಿಧಿ ಇಲ್ಲದೇ ವಿನಯ್ ಕುಲಕರ್ಣಿ 2025ರ ಜೂನ್ 13ರಂದು ಮತ್ತೆ ಪರಪ್ಪನ ಅಗ್ರಹಾರ ಜೈಲು ಸೇರಬೇಕಾಯ್ತು.