NWKRTCಗೆ ಬಾರದ 940 ಕೋಟಿ ಶಕ್ತಿ ಯೋಜನೆ ಹಣ: ಸಂಕಷ್ಟದಲ್ಲಿ ನಿಗಮ

NWKRTCಗೆ ಬಾರದ 940 ಕೋಟಿ ಶಕ್ತಿ ಯೋಜನೆ ಹಣ: ಸಂಕಷ್ಟದಲ್ಲಿ ನಿಗಮ


ಹುಬ್ಬಳ್ಳಿ, ಡಿಸೆಂಬರ್ 09: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ‘ಶಕ್ತಿ’ ಯೋಜನೆ ಕೂಡ ಒಂದು. ರಾಜ್ಯದ ಮಹಿಳೆಯರಿಗೆ ಸರ್ಕಾರಿ ಸಾಮಾನ್ಯ ಬಸ್ಸುಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಈ ಯೋಜನೆಯ ಪ್ರಯೋಜನವನ್ನು ಸಾಕಷ್ಟು ಜನ ಪ್ರತಿನಿತ್ಯ ಪಡೆಯುತ್ತಿದೆ. ಕಚೇರಿಗಳಿಗೆ ಹೋಗುವ ಮಹಿಳೆಯರ ಜೊತೆಗೆ ದೇಗುಲ, ಪ್ರವಾಸಿ ತಾಣಗಳಲ್ಲಿ ಮುಖ ಮಾಡುತ್ತಿರುವ ಮಹಿಳೆಯರ ಸಂಖ್ಯೆಯೂ ಈ ಯೋಜನೆ ಜಾರಿ ಬಳಿಕ ಹೆಚ್ಚಿದೆ. ಆದರೆ ಇದೆ ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳು ತೊಂದರೆ ಅನುಭವಿಸುತ್ತಿವೆ.

ಈ ಯೋಜನೆಯಡಿ ತಮ್ಮ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಟಿಕೆಟ್ ಹಣದ ಪ್ರತಿ ತಿಂಗಳ ನಿಗಮಗಳು ಸರ್ಕಾರಕ್ಕೆ ಕಳುಹಿಸಬೇಕಾಗಿದ್ದು, ಅದರ ಆಧಾರದಲ್ಲಿ ಸರ್ಕಾರವೂ ಹಣ ಮರುಪಾವತಿ ಮಾಡಬೇಕಿಲ್ಲ. ಆದರೆ ಸರ್ಕಾರ ಮಾತ್ರ ಆ ಕೆಲಸವನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಹೀಗಾಗಿ ನಿಗಮಗಳು ಅರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಹುಬ್ಬಳ್ಳಿಯಲ್ಲಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ಸರ್ಕಾರ ಬರೋಬ್ಬರಿ 940 ಕೋಟಿ ರೂಪಾಯಿ ಹಣವನ್ನು ಬಾಕಿ ಉಳಿಸಿಕೊಂಡಿರೋದು ಇದಕ್ಕೆ ಜ್ವಲಂತ ನಿದರ್ಶನ.

ಇದನ್ನೂ ಓದಿ: ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಗೊಂಡ ರಾಜ್ಯ ಸರ್ಕಾರದ ಶಕ್ತಿ ಯೋಜನೆ

ಪ್ರತಿ ತಿಂಗಳು 130 ಕೋಟಿ ರೂಪಾಯಿಗಳಿಗೆ ಹೆಚ್ಚು ಟಿಕೆಟ್ ಹಣ ಮರುಪಾವತಿಗಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸರ್ಕಾರದ ಮೊರೆ ಹೋಗುತ್ತಿದೆ. ಆದರೆ, ಆ ಸರ್ಕಾರದಿಂದ ಮರುಪಾವತಿ ಆಗ್ತಿರೋದು 100-110 ಕೋಟಿ ರೂಪಾಯಿಗಳು ಮಾತ್ರ. ಅಂದರೆ ಸುಮಾರು ಶೇಕಡಾ 85ರಷ್ಟು ಹಣವನ್ನು ಮಾತ್ರ ಸರ್ಕಾರ ನಿಗಮಕ್ಕೆ ಮರುಪಾವತಿ ಮಾಡುತ್ತಿದೆ. ಹೀಗಾಗಿ ಬಾಕಿ ಉಳಿದ ಹಣ ಹಂತ ಹಂತವಾಗಿ ಏರಿಕೆ ಕಂಡು ಅದರ ಮೊತ್ತ 940 ಕೋಟಿ ರೂ.ಗೆ ತಲುಪಿದೆ.

ಸಿಬ್ಬಂದಿ ಪಿಎಫ್ ಹಣ ಕಟ್ಟಲೂ ಪರದಾಟ

ತನ್ನ ಸಿಬ್ಬಂದಿಯ ಪಿಎಫ್ ಹಣ ಕಟ್ಟಲೂ ಪರದಾಡಿದ್ದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, 646 ಕೋಟಿ ರೂ. ಹಣವನ್ನು ಸಾಲಮಾಡಿ ತುಂಬಿದೆ. ಇನ್ನು ಆರ್ಥಿಕ ಸಮಸ್ಯೆಯ ಕಾರಣಕ್ಕೆ ನಿವೃತ್ತ ಸಿಬ್ಬಂದಿಯ ಸುಮಾರು 45 ಕೋಟಿ ರೂ. ಗ್ರಾಚ್ಯುಟಿ ಹಣವನ್ನೂ ಬಾಕಿ ಉಳಿಸಿಕೊಂಡಿದೆ. ಸದ್ಯ ಸರ್ಕಾರ ಮರುಪಾವತಿ ಮಾಡುತ್ತಿರುವ ಹಣ ಸಿಬ್ಬಂದಿ ವೇತನಕ್ಕೆ ಸರಿಯಾಗ್ತಿದ್ದು, ಉಳಿದ ಅಭಿವೃದ್ಧಿ ಕೆಲಸಗಳಿಗೆ ನಿಗಮದ ಬಳಿ ಹಣ ಇಲ್ಲ ಎನ್ನುವ ಸ್ಥಿತಿ ಎದುರಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 5:46 pm, ಮಂಗಳವಾರ, 9 ಡಿಸೆಂಬರ್ 25



Source link

Leave a Reply

Your email address will not be published. Required fields are marked *