15

Image Credit : Colors And Laxmi hebbalkar FB
ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ದೂರು
ಕನ್ನಡ ಬಿಗ್ಬಾಸ್ ಸೀಸನ್ 12 ಆರಂಭವಾಗಿ 11 ವಾರ ಪೂರೈಸಿದೆ. ಈಗಾಗಗಲೇ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಬಿಗ್ಬಾಸ್ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದೆ. ಇದೀಗ ಶಶಿ ಎಂಬವರು ಎಕ್ಸ್ ಖಾತೆ ಮೂಲಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ದೂರು ನೀಡಿದ್ದಾರೆ. ಇದೀಗ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ಶುರುವಾಗಿವೆ.
25
Image Credit : Jiohotstar
ಶಶಿ ಪೋಸ್ಟ್
ಆಕೆ (ಕಾವ್ಯಾ ಶೈವ) ಮೊದಲ ವಾರ ಜೋಡಿ ಟಾಸ್ಕ್ ಬಿಚ್ಚಿದಾಗಲೇ ಅರಿತುಕೊಳ್ಳಬೇಕಿತ್ತು. ಗಿಲ್ಲಿಯನ್ನು ಸ್ವಲ್ಪ ದೂರ ಇಡಬೇಕಿತ್ತು. ಅದು ಬಿಟ್ಟು ನಾಯಿ ಬಾಲ ನೇರ ಮಾಡುತ್ತೀನಿ ಅಂತ ಹಠಕ್ಕೆ ಬಿದ್ದಿದ್ದು ತಪ್ಪು. ಈಗ ಗಿಲ್ಲಿ ನಟನಿಂದ ಈ ರೀತಿಯ ಹಾಡು ಕೇಳಬೇಕಿದೆ. ಅವಳದು ದೊಡ್ಡ ತಪ್ಪಿದೆ. ಈಗಲೂ ಎಚ್ಚೆತ್ತುಕೊಂಡು ಗಿಲ್ಲಿನ ಉಗಿದು ಉಪ್ಪಿನಕಾಯಿ ಹಾಕದಿದ್ದರೆ ಅಷ್ಟೆ.
ಮತ್ತೊಮ್ಮೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗಮನಿಸಬೇಕು. ಹೆಣ್ಣು ಮಕ್ಕಳನ್ನು ಹಾಸ್ಯಾಸ್ಪದ ರೀತಿಯಲ್ಲಿ, ಕೀಳು double meaning ಹಾಡು ಹೇಳಿ ಚೆಡಿಸುತ್ತಿದ್ದಾರೆ ಗಿಲ್ಲಿ ನಟರಾಜ್. ಮಹಿಳಾ ಆಯೋಗಕ್ಕೆ ದೂರು ದಾಖಲಿಸಿ, ಪೊಲೀಸ್ ಎಫ್ಐಆರ್ ಮಾಡಿ ಬಿಗ್ ಬಾಸ್ ಶೋ ನಿಲ್ಲಿಸಲು ಹೇಳಿ ಎಂದು ಶಶಿ ಮನವಿ ಮಾಡಿಕೊಂಡಿದ್ದಾರೆ.
ಮತ್ತೊಮ್ಮೆ @laxmi_hebbalkar ರವರು ಗಮನಿಸಬೇಕು. ಹೆಣ್ಣು ಮಕ್ಕಳನ್ನು ಹಾಸ್ಯಾಸ್ಪದ ರೀತಿಯಲ್ಲಿ, ಕೀಳು double meaning ಹಾಡು ಹೇಳಿ ಚೆಡಿಸುತ್ತಿದ್ದಾರೆ ಗಿಲ್ಲಿ ನಟರಾಜ್.
ಮಹಿಳಾ ಆಯೋಗಕ್ಕೆ ದೂರು ದಾಖಲಿಸಿ, ಪೊಲೀಸ್ ಎಫ್ಐಆರ್ ಮಾಡಿ ಬಿಗ್ ಬಾಸ್ ಶೋ ನಿಲ್ಲಿಸಲು ಹೇಳಿ.#BBK12
— ಶಶಿ । ಅಶ್ವಮೇಧ (@Advaith09) December 9, 2025
35
Image Credit : Colors Kannada
ಯಾಕೆ ಈ ದೂರು?
ಲಕ್ಷುರಿ ಫುಡ್ಗಾಗಿ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಅವರಿಗೆ ಬಿಗ್ಬಾಸ್ ಮನೆಯಲ್ಲಿರುವ ವಿಲನ್ ಸೀಕ್ರೆಟ್ ಟಾಸ್ಕ್ ನೀಡಿದ್ದಾರೆ. ಈ ಟಾಸ್ಕ್ ಪ್ರಕಾರ, ಇಬ್ಬರು ಜೊತೆಯಾಗಿ ಕಾವ್ಯಾ ಅವರನ್ನು ಅಳಿಸಬೇಕು. ಈ ಟಾಸ್ಕ್ಗೆ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಒಪ್ಪಿಕೊಂಡಿದ್ದಾರೆ. ಈ ಪ್ರಕಾರ, ಗಿಲ್ಲಿ ನಟ ಕೊಂಕು ಮಾತುಗಳಿಂದ ಕಾವ್ಯಾ ಕಣ್ಣೀರು ಹಾಕುವಂತೆ ಮಾಡಿದ್ದಾರೆ.
45
Image Credit : Jio Hot Star
ಗಿಲ್ಲಿ ನಟ ಮತ್ತು ಕಾವ್ಯಾ ಶೈವ
55
Image Credit : colors kannada
ಕಣ್ಣೀರು ಹಾಕಿದ ಕಾವ್ಯಾ
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.