ಬೆಂಗಳೂರು, ಡಿಸೆಂಬರ್ 11: ಬೆಂಗಳೂರು (ಬೆಂಗಳೂರು) ಇನ್ನೂ ಹೊಸ ವರ್ಷವನ್ನು (ಹೊಸ ವರ್ಷ) ಭರ್ಜರಿಯಾಗಿ ಸ್ವಾಗತಿಸಲು ಯುವಕ, ಯುವತಿಯರು ಪ್ಲ್ಯಾನ್ ಮಾಡಿಕೊಳ್ಳುತ್ತಿದ್ದಾರೆ. ಆದರೆ, ಡಿಸೆಂಬರ್ 31 ರ ರಾತ್ರಿ ನ್ಯೂಇಯರ್ ಕಿಕ್ಕೇರಿಸದಂತೆ ಸರ್ಕಾರ ಚಿಂತನೆ ನಡೆಸುತ್ತಿದೆ. ಹಾಗೂ ಜಿಬಿಎ ಅಧಿಕಾರಿಗಳು ಪೊಲೀಸ್ ಸರಣಿ ಸಭೆ ನಡೆಸಿದ್ದಾರೆ. ಈ ವೇಳೆ ಎಂಜಿ ರೋಡ್ನಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಾರಿ ಹೊಸ ವರ್ಷಾಚರಣೆಗೆ ಜನ ಸೇರುವ ನಿರೀಕ್ಷೆಯಿದ್ದು, ಚಿನ್ನಸ್ವಾಮಿ ಕಾಲ್ತುಳಿತದ ನಂತರ ಸರ್ಕಾರದಿಂದಲೂ ಮಾರ್ಗಸೂಚಿ ಬಿಡುಗಡೆಯಾಗಿದೆ. ಸಾವಿರಾರು ಜನ ಸೇರುವ ಕಾರ್ಯಕ್ರಮಗಳಿಗೆ ಅನ್ವಯವಾಗುವಂತೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಬ್ರಿಗೇಡ್ ವ್ಯಾಪಾರಿಗಳ ಅಸೋಸಿಯೇಶನ್ ಸೆಕ್ರೆಟರಿ, ನಾವು ಇಲ್ಲಿ ಯಾವುದೇ ಕಾರ್ಯಕ್ರಮದ ಕೇವಲ ಲೈಟಿಂಗ್ಸ್ ವ್ಯವಸ್ಥೆ ಮಾತ್ರ ನಡೆಯಲಿದೆ.
ಕಾರ್ಯಕ್ರಮಗಳಲ್ಲಿ ಏನಾದರೂ ಅನಾಹುತ ಸಂಭವಿಸಿದೆ ಆಯೋಜಕರೇ ಹೊಣೆ ಎಂಬ ನಿಶ್ಚಯವಿದೆ, ಹೊಸ ವರ್ಷಾಚರಣೆ ವೇಳೆ ಏನಾದರೂ ಅನಾಹುತ ಸಂಭವಿಸಿದರೆ ಯಾರನ್ನು ಹೊಣೆ ಮಾಡುವುದು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಸರ್ಕಾರ ಪೊಲೀಸರ ಮೇಲೆಯೇ ಕ್ರಮ ತೆಗೆದುಕೊಂಡರೇ ಎಂಬ ಆತಂಕ ಪೊಲೀಸರದ್ದಾಗಿದೆ.
ದೆಹಲಿ ಸ್ಫೋಟದ ನಂತರ ಹೈ ಅಲರ್ಟ್ ಆಗಿರುವ ಪೊಲೀಸರು
ಭದ್ರತಾ ದೃಷ್ಟಿಯಿಂದಲೂ ಹೈಅಲರ್ಟ್ ಆಗಿದ್ದಾರೆ. ದೆಹಲಿ ಸ್ಫೋಟದ ನಂತರ ದೇಶಾದ್ಯಂತ ಕಟ್ಟೆಚ್ಚರವಹಿಸಲಾಗಿದೆ. ಹೀಗಾಗಿ ಅಧಿಕಾರಿಗಳು ಹೊಸ ವರ್ಷಾಚರಣೆಯ ಸಾಧಕ ಬಾಧಕಗಳ ಬಗ್ಗೆ ಸರ್ಕಾರಕ್ಕೆ ವರದಿ ನೀಡಲಿದ್ದಾರೆ. ಸರ್ಕಾರದ ತೀರ್ಮಾನದ ನಂತರವೇ ಎಂಜಿ ರೋಡ್ ಸೆಲೆಬ್ರೇಶನ್ ಬಗ್ಗೆ ನಿರ್ಧಾರ ತೆಗೆದುಕೊಳ್ಳದಿದ್ದರೆ. ಈ ಬಗ್ಗೆ ಮಾತನಾಡಿದ ಬೆಂಗಳೂರಿಗರು, ಅನುಮತಿ ನೀಡಿದರೆ ಚೆನ್ನಾಗಿರುತ್ತದೆ.
ಇದನ್ನೂ ಓದಿ: ಈ ವರ್ಷ ಭಾರೀ ಗಮನ ಸೆಳೆದ ಭಾರತದ ಪ್ರಮುಖ ದೇವಾಲಯಗಳಿವು
ಒಟ್ಟಿನಲ್ಲಿ, ಹೊಸ ವರ್ಷವನ್ನು ಭರ್ಜರಿಯಾಗಿ ಸ್ವಾತಗ ಮಾಡೋಣ ಅಂದುಕೊಂಡಿದ್ದ ಯುವಕ, ಯುವತಿಯರಿಗೆ ಅನುಮತಿ ಸಿಗೋದು ಅನುಮಾನ ಎಂಬ ನೋವು ಸುದ್ದಿ ಮಾಡಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ