ಬೆಳಗಾವಿ, (ಡಿಸೆಂಬರ್ 11): ಸಿಎಂ-ಡಿಸಿಎಂ ನಡುವೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆದರೂ ಸಹ ಕಾಂಗ್ರೆಸ್ ಮನೆಯಲ್ಲಿ ಕ್ರಾಂತಿಯ ಕಿಚ್ಚು ಮಾತ್ರ ಆರಿಲ್ಲ. ಎಲ್ಲವೂ ಸಿಎಂ ಆಯ್ತು ಎನ್ನುವಾಗಲೇ ಮತ್ತೆ ಪುತ್ರ ಯತೀಂದ್ರ ಪವರ್ ಶೇರಿಂಗ್ ವಿಚಾರವಾಗಿ ಮಾತನಾಡಿದ್ದಾರೆ. ನಾಯಕತ್ವದಲ್ಲಿ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಕೂಡ ಸ್ಪಷ್ಟವಾಗಿ ಹೇಳಿದೆ ಅಂತಾ ಯತೀಂದ್ರ ಪುನರುಚ್ಛರಿಸಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಸಂಚಲನ ಸೃಷ್ಟಿಸಿದ್ದು, ಡಿಕೆ ಶಿವಕುಮಾರ್ ಆಪ್ತ ಬಣದ ಕಣ್ಣು ಕೆಂಪಾಗಿಸಿದೆ.
ಇನ್ನು ಇದೇ ವಿಚಾರವಾಗಿ ಸಿಎಂ ಬಣದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ಸಿದ್ದರಾಮಯ್ಯ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ. 2028ರವರೆಗೂ ಸಿದ್ದರಾಮಯ್ಯನವರು ಸಿಎಂ ಆಗಿರಬೇಕು. ಇದು ನನ್ನ ವೈಯಕ್ತಿಕ ಹೇಳಿಕೆ. ಸಿದ್ದರಾಮಯ್ಯ ಬದಲಾಯಿಸಲು ಯಾರಿಗೆ ಗಟ್ಸ್ ಇದೆ? ಆ ಗಟ್ಸ್ ಇರುವುದು ಪಕ್ಷದ ಹೈಕಮಾಂಡ್ ಗೆ ಮಾತ್ರ ಎಂದು ಗುಡುಗಿದ್ದಾರೆ. ಈ ಮೂಲಕ ಪರೋಕ್ಷವಾಗಿ ಡಿಕೆಶಿ ಬಣಕ್ಕೆ ಟಾಂಗ್ ಕೊಟ್ಟಿದ್ದಾರೆ. ಇದು ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿ ನೀರು.