Headlines

ಕಲಬುರಗಿಯಲ್ಲಿ 2 ಸರ್ಕಾರಿ ಬಸ್, ಜೀಪ್ ಮಧ್ಯೆ ಸರಣಿ ಅಪಘಾತ: ಮೂವರು ಸಾವು

ಕಲಬುರಗಿಯಲ್ಲಿ 2 ಸರ್ಕಾರಿ ಬಸ್, ಜೀಪ್ ಮಧ್ಯೆ ಸರಣಿ ಅಪಘಾತ: ಮೂವರು ಸಾವು


ಕಲಬುರಗಿ, ಡಿಸೆಂಬರ್ 11: ಎರಡು ಕೆಎಸ್ ಆರ್ ಟಿಸಿ ಬಸ್ ಮತ್ತು ಜೀಪ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ (ಸರಣಿ ಅಪಘಾತ) ಗಂಡ ಹೆಂಡತಿ ಸೇರಿ ಸಾವನ್ನಪ್ಪಿರುವಂತಹ (ಸಾವು) ಕಲಬುರಗಿಯ ಸಂಚಾರಿ ಠಾಣೆ 1ರ ಘಟನೆ ನಡೆದಿದೆ. ಸುಲೋಚನಾ(70), ಚಂದ್ರಕಾಂತ್ (82) ಮತ್ತು ಚಾಲಕ ಮಿಟ್ಟೆಸಾಬ್(35) ಮೃತರು. ಇನ್ನು ಅಪಘಾತದಲ್ಲಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ. ಕಲಬುರಗಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ಇನ್ನು ಮೃತರು ಅಫಜಲಪುರ ತಾಲೂಕಿನ ತೆಲ್ಲೂಣಗಿ ಗ್ರಾಮದ ನಿವಾಸಿಗಳು. ದಂಪತಿ ತಮ್ಮ ಗ್ರಾಮದಿಂದ ಕಲಬುರಗಿಗೆ ಜೀಪ್‌ನಲ್ಲಿ ತೆರಳುತ್ತಾರೆ. ಅತಿವೇಗದ ಚಾಲನೆಯಿಂದ ಎದುರಿಗೆ ಬರುತ್ತಿದ್ದ ಬಸ್‌ಗೆ ಜೀಪ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ದಂಪತಿ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ಕಲಬುರಗಿ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಕೂಡಿ ವಿಚಾರಿಸಿದ್ದಾರೆ.

ಕುಖ್ಯಾತ ಮನೆಗಳ್ಳನ ಬಂಧನ

ಕನ್ಯಾಕುಮಾರಿಗೆ ಕಳ್ಳತನಕ್ಕೆ ಹೊರಟ್ಟಿದ್ದ ಕುಖ್ಯಾತ ಮನೆಗಳ್ಳನನ್ನು ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡ ಮೂಲದ ನವೀನ್ ಜೋಶಿ(49) ಬಂಧಿತ ಕಳ್ಳ. ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದೇವನಹಳ್ಳಿ: ಲಾಲಗೊಂಡನಹಳ್ಳಿ ಗೇಟ್ ಬಳಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು

ಪುಣೆಯಿಂದ ಕನ್ಯಾಕುಮಾರಿಗೆ ಟಿಕೆಟ್ ಇಲ್ಲದೇ ನವೀನ್ ಪ್ರಯಾಣ ಬೆಳಸಿದ್ದ. ಟಿಕೆಟ್ ಇಲ್ಲದ ಹಿನ್ನಲೆ ಕಲಬುರಗಿಯಲ್ಲಿ ಆತನನ್ನ ಟಿಸಿ ತಡೆದಿದ್ದರು. ಹೀಗಾಗಿ ಕಲಬುರಗಿ ನಗರದ ಗಾಬರೇ ಲೇಔಟ್ ನಲ್ಲಿ ಕಳ್ಳತನ ಮಾಡಿದ್ದ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಸರಣಿ ಅಪಘಾತಕ್ಕೆ ವೃದ್ದ ಬಲಿ; ಆಟೋ ಛಿದ್ರ ಛಿದ್ರ

ನಿವೃತ್ತ ಆರ್ ಎಫ್ ಓ ಈರಣ್ಣ ಎಂಬುವವರ ಮನೆಯಿಂದ ಬರೋಬ್ಬರಿ 400 ಗ್ರಾಂ ಚಿನ್ನ ಕಳ್ಳತನ ಮಾಡಿದ್ದ. ಅದರಲ್ಲಿ 230 ರೋಲ್ಡ್ ಗೋಲ್ಡ್, 167 ಗ್ರಾಂ ಅಸಲಿ ಸೇರಿದಂತೆ ಒಟ್ಟು 20.40 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ. ಒಂದೇ ದಿನದಲ್ಲಿ ಕಳ್ಳತನ ಮಾಡಿ ನವೀನ್ ಪರಾರಿ ಆಗಿದ್ದ. ಸಿಸಿಟಿವಿ ಆಧಾರದ ಮೇಲೆ ಆತನನ್ನು ಬಂಧಿಸಿದ್ದಾರೆ.

ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಸಾವು

ಗೊನೆ ಕೊಯ್ಯುವಾಗ ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವಂತಹ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬೂದಿಗುಂಡಿ ಗ್ರಾಮದಲ್ಲಿ ನಡೆದಿದೆ. ಮಂಜು (35) ಮೃತ ದುರ್ದೈವಿ. ಹಳುವಳ್ಳಿ ಗ್ರಾಮದ ಅಡಿಕೆ ತೋಟಕ್ಕೆ ಹೋಗಿದ್ದ ಮಂಜು, ಈ ವೇಳೆ ಮರ ಹತ್ತಿ ಕೊಯ್ಯುವಾಗ ಆಯಾ ತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಂದು ಪ್ರಕಟಿಸಲಾಗಿದೆ – 5:21 pm, ಗುರು, 11 ಡಿಸೆಂಬರ್ 25



Source link

Leave a Reply

Your email address will not be published. Required fields are marked *