ಬೆಂಗಳೂರು ವಿಶ್ವದ ಅತ್ಯುತ್ತಮ ನಗರ, ಆದರೆ ಒಂದು ನ್ಯೂನತೆ ಇದೆ ಎಂದ ಜಪಾನ್ ಉದ್ಯಮಿ

ಬೆಂಗಳೂರು ವಿಶ್ವದ ಅತ್ಯುತ್ತಮ ನಗರ, ಆದರೆ ಒಂದು ನ್ಯೂನತೆ ಇದೆ ಎಂದ ಜಪಾನ್ ಉದ್ಯಮಿ


ಬೆಂಗಳೂರು, ಡಿ.12: ಜಪಾನಿನ ಉದ್ಯಮಿ ಬೆಂಗಳೂರನ್ನು ಹಾಡಿಹೊಗಳಿದ್ದಾರೆ. ಬಿಯಾಂಡ್ ನೆಕ್ಸ್ಟ್ ವೆಂಚರ್ಸ್‌ನ ಸಿಐಒ ಮತ್ತು ಸಹ-ಸಂಸ್ಥಾಪಕ ಜಪಾನಿನ ಉದ್ಯಮಿ ತ್ಸುಯೋಶಿ ಇಟೊ ( ತ್ಸುಯೋಶಿ ಇಟೊ) ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಭಾರೀ ವೈರಲ್ ಆಗಿದೆ. ನಗರದ ಟ್ರಾಫಿಕ್ ಬಗ್ಗೆಯೂ ಪ್ರಮಾಣಿಕವಾಗಿ ಹೇಳಿದ್ದಾರೆ. ಲಿಂಕ್ಡ್‌ಇನ್ಲಿ ಈ ಪೋಸ್ಟ್ ಅನ್ನು ಹಂಚಿಕೊಂಡಿದ್ದು, ಬೆಂಗಳೂರು ಎಲ್ಲದರಲ್ಲೂ ಸೂಪರ್ ಆಗಿದೆ. ಆದರೆ ಈ ಬಗ್ಗೆ ಮಾತ್ರ ಅಸಮಾಧಾನವಿದೆ ಎಂದು ಪೋಸ್ಟ್‌ನಲ್ಲಿ ಹೇಳಲಾಗಿದೆ. ಇವರ ಈ ಪೋಸ್ಟ್ ನೆಟ್ಟಿಗರ ಗಮನಸೆಳೆದಿದೆ. ಈ ಪೋಸ್ಟ್‌ನಲ್ಲಿ ಜಪಾನಿನ ವಾತಾವರಣಕ್ಕೂ ಬೆಂಗಳೂರಿನ ವಾತಾವರಣಕ್ಕೂ ಹೋಲಿಕೆ ಇದೆ.

ಅವರು ತಮ್ಮ ಪೋಸ್ಟ್‌ನಲ್ಲಿ ಬೆಂಗಳೂರಿನ ವಿಶ್ವದ ಅತ್ಯುತ್ತಮ ನಗರ ಎಂದು ಹೇಳಿದ್ದಾರೆ. ಅಲ್ಲಿ ವಾಸಿಸಿದ ನಂತರವೇ ಮೋದಿ ಸ್ಪಷ್ಟವಾಗುತ್ತದೆ. ದೇಶದ ಹವಾಮಾನ ತುಂಬಾ ಕೂಲ್ ಮತ್ತು ಸುಂದರ. ವರ್ಷಪೂರ್ತಿ ಸೌಮ್ಯವಾದ ತಾಪಮಾನ ಮತ್ತು ಶುಷ್ಕ, ಗಾಳಿಯ ಸ್ಥಳ ಎಂದು ಹೇಳಿದರು. ಇವರು ಜಪಾನಿನ ವೃತ್ತಿಪರರನ್ನು ಭಾರತಕ್ಕೆ ಬರುವಂತೆ ಹೇಳುವ ಪೋಸ್ಟ್‌ಗಳನ್ನು ಆಗಾಗ ಹಂಚಿಕೊಳ್ಳುತ್ತಾರೆ. ಬೆಂಗಳೂರು “ಸಾಗರವಿಲ್ಲದ ಹವಾಯಿ ದ್ವೀಪ” ಎಂದು ಹೇಳಿದ್ದಾರೆ. ಆದರೆ ಜಪಾನ್ ರೆಸಾರ್ಟ್ ತರಹದ ಹವಾಮಾನ ಹೊಂದಿದೆ ಎಂದು ಬೆಂಗಳೂರು ಮತ್ತು ಜಪಾನ್ ನ ಹವಾಮಾನವನ್ನು ಹೊಲಿಕೆ ಮಾಡಿದೆ.

ವೈರಲ್ ಪೋಸ್ಟ್ ಇಲ್ಲಿದೆ ನೋಡಿ:

ಆದರೆ ಬೆಂಗಳೂರಿನಲ್ಲಿ ಒಂದು ನ್ಯೂನತೆ ಇದೆ, ಅದುವೇ ವಾಹನ ದಟ್ಟಣೆ, ಬೆಂಗಳೂರಿನಲ್ಲಿ ಟ್ರಾಫಿಕ್ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು, ಈಗ ಆ ಒಂದು ವಿಚಾರದಲ್ಲಿ ಅಸಮಾಧಾನವಿದೆ. ಇಷ್ಟು ದೊಡ್ಡ ಹಾಗೂ ಸುಂದರ ವಾಹನ ದಟ್ಟಣೆ ಆಗಬಾರದು ಎಂದು ಹೇಳಿದ್ದಾರೆ. ಅವರು ಬೆಂಗಳೂರಿಗೆ ಬಂದ ನಂತರ ಸ್ಥಳೀಯ ಜೀವನವನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಲು ಮಾರುತಿ ಸುಜುಕಿಯನ್ನು ಖರೀದಿಸಿ ಬೆಂಗಳೂರಿನ ನಗರಗಳಿಗೆ ಸೇರಿಸಿದ್ದಾರೆ. ಟ್ರಾಫಿಕ್, ರಸ್ತೆಗಳು, ವಾಹನ ಸಂಚಾರ ವ್ಯವಸ್ಥೆ, ಕರ್ಕಶ ಹಾರ್ನ್‌ಗಳಿಂದ ಬೆಂಗಳೂರಿನ ಸೌಂದರ್ಯವನ್ನು ಹಾಳು ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಯುಮಾಲಿನ್ಯ ಉಲ್ಬಣ: ಇಂದು ಮತ್ತೆ ಗಾಳಿಮಟ್ಟ ಕುಸಿತ

ಇವುಗಳು ನಾನು ಜಪಾನ್‌ನಲ್ಲಿ ಯಾವಾಗಲೂ ಅನುಭವಿಸುವ ವಿಷಯಗಳು, ಮತ್ತು ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಬೆಂಗಳೂರಿನಲ್ಲಿ ಹೊಸ ಹೊಸ ವಿಚಾರಗಳು ಮತ್ತು ಕೌಶಲ್ಯಗಳನ್ನು ಹೆಚ್ಚು ಒತ್ತು ನೀಡಲಾಗಿದೆ. ಇಟೊ ಭಾರತದಲ್ಲಿನ ತನ್ನ ಜೀವನವು ಇನ್ನೂ ಮನರಂಜನೆಯಿಂದ ಕೂಡಿದೆ ಎಂದು ಹೇಳಿದರು. ಇನ್ನು ಇವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಈ ಪೋಸ್ಟ್ ನೋಡಿ ಅನೇಕರು ಈ ಬಗ್ಗೆ ತುಂಬಾ ಆಸಕ್ತಿಯ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಒಂದು ಒಳ್ಳೆಯ ಮಾತು ಕೇಳಿ ತುಂಬಾ ಖುಷಿಯಾಗಿದೆ ಎಂದು ಒಬ್ಬರು ಹೇಳಿದ್ದಾರೆ. ಇತ್ತೀಚೆಗೆ, ಬಹಳಷ್ಟು ನಕಾರಾತ್ಮಕ ಮಾತುಗಳು ಕೇಳಿಬರುತ್ತಿವೆ. ಸಂಚಾರ, ಭಾಷೆ, ಇತ್ಯಾದಿ, ಆದರೆ ಯಾವುದೂ ಸುಂದರ ನಗರವನ್ನು ನಿಜವಾಗಿಯೂ ಹಾಳುಮಾಡಲು ಸಾಧ್ಯವಿಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *