ಅರ್ಜೆಂಟೀನಾ ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಮೂರು ದಿನಗಳ ಕಾರ್ಯಕ್ರಮಕ್ಕಾಗಿ ಭಾರತಕ್ಕೆ ಆಗಮಿಸಿದ್ದಾರೆ. ಗೋಟ್ ಇಂಡಿಯಾ ಟೂರ್ನ ಕಾರ್ಯಕ್ರಮದ ಭಾಗವಾಗಿ ಇಂದು ಮೆಸ್ಸಿ ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂ ಹೊರಗೆ ತಮ್ಮ ಪ್ರತಿಮೆಯನ್ನು ಅನಾವರಣಗೊಳಿಸಿದರು. ಆ ಬಳಿಕ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಿಯೋನೆಲ್ ಮೆಸ್ಸಿ ಕಾಣಿಸಿಕೊಂಡಿದ್ದರು. ಆದರೆ ಕೇವಲ 10 ನಿಮಿಷಗಳಲ್ಲಿ ಅರ್ಜೆಂಟೀನಾ ಫುಟ್ಬಾಲ್ ತಾರೆ ಮೈದಾನದಿಂದ ತೆರಳಿದ್ದಾರೆ.
ಇತ್ತ ಟಿಕೆಟ್ ಖರೀದಿಸಿ ಮೆಸ್ಸಿಯನ್ನು ವೀಕ್ಷಿಸಲು ಸ್ಟೇಡಿಯಂನಲ್ಲಿ ಕಾದು ಕುಳಿತಿದ್ದ ಅಭಿಮಾನಿಗಳಿಗೆ ಇದರಿಂದ ನಿರಾಸೆಯಾಗಿದೆ. ಮೆಸ್ಸಿಯ ನಡೆಗೆ ಆಕ್ರೋಶ ವ್ಯಕ್ತಪಡಿಸಿ ಫ್ಯಾನ್ಸ್ ಕ್ರೀಡಾಂಗಣದೊಳಗೆ ಬಾಟಲಿಗಳನ್ನು ತೆಗೆಯಲು ಪ್ರಾರಂಭಿಸಿದರು. ಜೊತೆಗೆ ಸ್ಥಳದಲ್ಲಿದ್ದ ಬ್ಯಾರಿಕೇಡ್ಗಳನ್ನು ಮುರಿದು ಹುಚ್ಚಾಟ ಮೆರೆದಿದ್ದಾರೆ.
ಬ್ಯಾರಿಕೇಡ್ಗಳನ್ನು ಮುರಿದು ಮೈದಾನಕ್ಕೆ ನುಗಿದ್ದ ಅಭಿಮಾನಿಗಳು ದಾಂಧಲೆ ಆರಂಭಿಸಿದ್ದು, ಹೀಗಾಗಿ ಪೊಲೀಸರು ಲಾಠಿ ಶುಲ್ಕ ವಿಧಿಸಿದ್ದಾರೆ. ಇದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಇದೀಗ ಸ್ಟೇಡಿಯಂನಲ್ಲಿದ್ದ ಎಲ್ಲರನ್ನು ಹೊರಗೆ ಕಳುಹಿಸಿ ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಳ್ಳುತ್ತಿದೆ.