ಬೆಡ್ತಿ-ವರದಾ ನದಿ ಜೋಡಣೆ ಯೋಜನೆ ಮಹತ್ವ ಬಿಚ್ಚಿಟ್ಟ ಜಲತಜ್ಞ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ! | Haveri Bedthi Varada Rivers Link Project Basavaraj Bommai10 Percent Water Sat

ಬೆಡ್ತಿ-ವರದಾ ನದಿ ಜೋಡಣೆ ಯೋಜನೆ ಮಹತ್ವ ಬಿಚ್ಚಿಟ್ಟ ಜಲತಜ್ಞ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ! | Haveri Bedthi Varada Rivers Link Project Basavaraj Bommai10 Percent Water Sat



ಬೆಡ್ತಿ-ವರದಾ ನದಿ ಜೋಡಣೆ ಯೋಜನೆ ಮಹತ್ವ ಬಿಚ್ಚಿಟ್ಟ ಜಲತಜ್ಞ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ! | Haveri Bedthi Varada Rivers Link Project Basavaraj Bommai10 Percent Water Sat

ಬೆಡ್ತಿ-ವರದಾ ನದಿ ಜೋಡಣೆ ಯೋಜನೆಗೆ ತಪ್ಪು ಕಲ್ಪನೆಯಿಂದ ವಿರೋಧಿಸುವುದು ಬೇಡವೆಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಪರಿಷ್ಕೃತ ಯೋಜನೆಯಡಿ ಕೇವಲ 10% ನೀರನ್ನು ಮಾತ್ರ ಬಳಸಿಕೊಳ್ಳಲಾಗುವುದು ಮತ್ತು ಇದರಿಂದ ನದಿ ಹರಿವಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹಾವೇರಿ (ಡಿ.14): ಬೆಡ್ತಿ ವರದಾ ನದಿ ಜೋಡಣೆಗೆ ತಪ್ಪು ಕಲ್ಪನೆಯಿಂದ ವಿರೋಧ ಮಾಡಿವುದು ಬೇಡ, ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ ಪರಿಷ್ಕರಣೆ ಆಗಿದೆ. ಶೇ 10% ಮಾತ್ರ ನೀರನ್ನು ಬಳಸಿಕೊಳ್ಳಲು ಯೋಜಿಸಿದ್ದು, ಒಟ್ಟು ನೀರಿನ ಹರಿವಿಗೆ ಯಾವುದೇ ತೊಂದರೆಯಿಲ್ಲ, ದಯವಿಟ್ಟು ಯೋಜನೆಗೆ ಸಹಕಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಪರಮ ಪೂಜ್ಯ ಸ್ವರ್ಣವಲ್ಲಿ ಶ್ರೀಗಳ ನೇತೃತ್ವದಲ್ಲಿ ಬೆಡ್ತಿ – ವರದಾ ಕುರಿತು ಚರ್ಚೆ ಮಾಡಿದ್ದಾರೆ. ಬೆಡ್ತಿ ಯೋಜನೆಗೆ ಆಕ್ಷೇಪ ವ್ಯಕ್ರ ಪಡಿಸಿದ್ದಾರೆ. ನಾವು ಆ ಭಾಗದ ಜನರ ಗುರುಗಳ ಭಾವನೆ ಗೌರವಿಸುತ್ತೇವೆ. ತಪ್ಪು ಕಲ್ಪನೆ ಮೇಲೆ ವಿರೋಧ ಮಾಡುವುದು ಬೇಡ ಅನ್ನುವ ಮನವಿಯನ್ನು ಆದರ ಪೂರಕವಾಗಿ ಮಾಡುತ್ತೇನೆ ಎಂದರು.

ಈ ಯೋಜನೆ ಸುಮಾರು 30 ವರ್ಷದಿಂದ ಇದೆ. ನ್ಯಾಷನಲ್ ವಾಟರ್ ಡೆವಲಪ್ಮೆಂಟ್ ಆಥಾರಿಟಿ ಯಿಂದ ಬಂದಿರುವ ಯೋಜನೆ. ದಕ್ಷಿಣ ಭಾರತದ ಪ್ರಮುಖ 3 ಯೋಜನೆಗಳಲ್ಲಿ ಇದು ಒಂದು. ಈಗಿರುವ ರಾಜಕಾರಣಿಗಳು ಆಗ ಯಾರೂ ರಾಜಕಾರಣದಲ್ಲಿ ಇರಲೇ ಇಲ್ಲ ಎಂದು ಹೇಳಿದರು.

ಕೇವಲ 10% ರಷ್ಟು ನೀರು ಮಾತ್ರ ಬಳಕೆ

ಇದು ನೀರಿನ ಸದ್ಬಳಕೆಗೆ ಮಾಡಿರುವ ಯೋಜನೆ. ಈಗ ಯೋಜನೆ ಪರಿಷ್ಕರಿಣೆ ಆಗಿದೆ. ಸಣ್ಣ ಬ್ಯಾರೇಜ್ ಮಾಡಿ ಲಿಪ್ಟ್ ಮಾಡಲಾಗುತ್ತದೆ‌ ಯಾವುದೆ ದೊಡ್ಡ ಪ್ರಮಾಣದಲ್ಲಿ ಹಾನಿಯಾಗುವುದಿಲ್ಲ. ನದಿಯ ಕೇವಲ 10% ರಷ್ಟು ನೀರು ಮಾತ್ರ ತೆಗೆದುಕೊಳ್ಳಬೇಕು ಅನ್ನುವ ಚಿಂತನೆ ಇದೆ. ಹೀಗಾಗಿ ನದಿ ಪಾತ್ರದ ನೀರಿನ ಹರಿವಿಗೆ ಯಾವುದೇ ತೊಂದರೆ ಇಲ್ಲ. ಈ ಯೋಜನೆಗೆ ಡಿ ಪಿಆರ್ ಆಗಬೇಕು ಪರಿಸರದ ಪರಿಣಾಮಗಳ ಅಧ್ಯಯನ ಆಗಬೇಕು. ಅದರ ಸಾಧಕ ಬಾಧಕ ನೋಡುತ್ತಾರೆ. ಇದೆಲ್ಲ ಪ್ರಕ್ರಿಯೆ ಇದೆ. ದಯವಿಟ್ಟು ಸಹಕಾರ ಮಾಡಬೇಕು ಎಂದು ಮನವಿ ಮಾಡಿದರು.

ನೀರಿನ ಸಂಪತ್ತು ಸದ್ಬಳಕೆ ಆಗಬೇಕು

ಈ ನದಿ ಜೋಡಣೆ ಯೋಜನೆ ಸಂಪೂರ್ಣ ವಿವರ ಬಂದಾಗ ಪರಿಣಿತರು ತೀರ್ಮಾನ ಮಾಡುತ್ತಾರೆ. ನೀರಿನ ಸಂಪತ್ತು ಸದ್ಬಳಕೆ ಆಗಬೇಕು. ನೀರೇ ಇಲ್ಲದ ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕೂಡ ಇದೆ. ನಾವು ಮಳೆಗಾಲದಲ್ಲಿ ನೀರು ಹಿಡಿದಿಟ್ಟು ಬೇಸಿಗೆಯಲ್ಲಿ ನೀರು ಉಪಯೋಗಿಸ್ತೇವೆ‌ ಬರ ಪ್ರದೇಶಕ್ಕೆ ಈ ನೀರು ಅನುಕೂಲ ಅಗುತ್ತದೆ. ಒಬ್ಬರಿಗೊಬ್ಬರು ಸಹಕಾರ ಕೊಡಬೇಕು. ಯೋಜನೆಯಿಂದ ಯಾವುದೇ ತೊಂದರೆ ಇಲ್ಲ. ಇದರಿಂದ ಬರ ಪೀಡಿತ ಹಾವೇರಿ ಮತ್ತು ಇತರ ಜಿಲ್ಲೆಗೆ ಅನುಕೂಲ ಆಗುತ್ತದೆ ಎಂದು ಹೇಳಿದರು.



Source link

Leave a Reply

Your email address will not be published. Required fields are marked *