ಗದಗ, ಡಿಸೆಂಬರ್ 15: ಗದಗ (ಗದಗ) ಮೇ ಭವನ ಸ್ಫೋಟಿಸುವುದಾಗಿ ಇ-ಡಿಸಿ ಕಚೇರಿಗೆ ಬಾಂಬ್ ಬೆದರಿಕೆ (ಬಾಂಬ್ ಬೆದರಿಕೆ) ಹಾಕಲಾಗಿದೆ. ಪಾಕ್ನ ಐಎಸ್ ಐ ಮತ್ತು ಎಲ್ ಟಿಟಿಐ ಕಾರ್ಯಕರ್ತರ ಜೊತೆ ಸೇರಿ 5 ಬಾಂಬ್ ಗಳಿಂದ ಆಬ್ಜೆಕ್ಟ್ ಭವನ ಸ್ಫೋಟಿಸುವ ಕಿಡಿಗೇಡಿಗಳು ಧಮ್ಕಿ ಹಾಕಿದ್ದಾರೆ. ಸದ್ಯ ಗದಗ ಆಧುನಿಕ ಭವನದಲ್ಲಿ ಆತಂಕದ ವಾತಾವರಣ ಸೃಷ್ಟಿ, ಶ್ವಾನದಳ, ಬಾಂಬ್ ಪತ್ತೆದಳ ಸಿಬ್ಬಂದಿ ಇಂಚು ತಪಾಸಣೆ ನಡೆಸಲಾಗಿದೆ.
ಅರ್ನಾ ಅಶ್ವಿನ್ ಶೇಖರ್ ಎಂಬ ಇ-ಮೇಲ್ ಐಡಿಯಿಂದ ಬಾಂಬ್ ಬೆದರಿಕೆ ಹಾಕಲಾಗಿದೆ. ನಿಮ್ಮ ಜಿಲ್ಲಾಧಿಕಾರಿ ಕಚೇರಿಯಲ್ಲಿ ಐದು ಬಾಂಬ್ಗಳನ್ನು ಸ್ಫೋಟಿಸಲಾಯಿತು. ಪಾಕಿಸ್ತಾನ-ತಮಿಳುನಾಡು ಡಿಎಂಕೆ 2026 ರ ಚುನಾವಣೆಯ ಗಮನವನ್ನು ಬೇರೆಡೆ ಸೆಳೆಯಲು ಬಯಸಿದೆ ಎಂದು ಉಲ್ಲೇಖಿಸಲಾಗಿದೆ.
ಮಂಗಳೂರು ಆರ್ಟಿಒ ಕಚೇರಿಗೂ ಬಾಂಬ್ ಬೆದರಿಕೆ
ಅದೇ ರೀತಿಯಾಗಿ ಮಂಗಳೂರು ಆರ್ಟಿಒ ಕಚೇರಿಗೂ ಈ-ಮೇಲ್ಗೆ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ. ಮಂಗಳೂರು ನೆಹರು ಮೈದಾನದ ಬಳಿಯ ಆರ್ಟಿಒ ಕಚೇರಿಗೆ 5 ಕಡೆ ಬಾಂಬ್ ಸ್ಫೋಟಿಸುವುದಾಗಿ ಕಿಡಿಗೇಡಿಗಳಿಂದ ಮೇಲ್ ರವಾನಿಸಲಾಗಿದೆ. ಸದ್ಯ ಆರ್ಟಿಒ ಕಚೇರಿಗೆ ಮಂಗಳೂರು ಪೊಲೀಸ್, ಬಾಂಬ್ ನಿಷ್ಕ್ರಿಯ ದಳದಿಂದ ಇಡೀ ಕಟ್ಟಡವನ್ನು ತಪಾಸಣೆ ಮಾಡಲಾಗಿದೆ.
ಇದನ್ನೂ ಓದಿ: 13 ವರ್ಷದ ಬಾಲಕಿಯಿಂದ ಕೋಲಾರ ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ: ಕಾರಣ ಕೇಳಿ ಶಾಕ್ ಆದ ಅಧಿಕಾರಿಗಳು!
ಇತ್ತೀಚೆಗಷ್ಟೇ ಬೀದರ್ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಟ್ಟಿದ್ದೇವೆ ಅಷ್ಟೆ ಬೇಗ ಬ್ಲಾಸ್ಟ್ ಮಾಡಿದ್ದೇವೆ ಎಂದು ಬೀದರ್ ಜಿಲ್ಲಾಧಿಕಾರಿ ಕಚೇರಿ ಮೇಲ್ ಐಡಿಗೆ ಅಪರಿಚಿತರ ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿತ್ತು.
ಬೀದರ್ ಡಿಸಿ ಕಚೇರಿಗೂ ಬಾಂಬ್ ಬೆದರಿಕೆ
ಬೀದರ್ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದ ಹಿನ್ನಲೆಯಲ್ಲಿ ಪೊಲೀಸರು ಹೈಅಲರ್ಟ್ ಆಗಿ, ಡಾಗ್ ಸ್ಕ್ವಾಡ್ನಿಂದ ಪರಿಶೀಲನೆ ನಡೆಸಿದ್ದರು. ಕಚೇರಿಯ ಎಲ್ಲಾ ಸಿಬ್ಬಂದಿಗಳನ್ನು ಪರೀಕ್ಷಿಸಿ, ಪೊಲೀಸ್ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಅಗ್ನಿ ಡಾಗ್ ಸ್ಕ್ವಾಡ್, ಶಾಮಕ ಸಿಬ್ಬಂದಿ, ಪೊಲೀಸರಿಂದ ಎಲ್ಲಾ ಕಡೆ ತಪಾಸಣೆ ಮಾಡಲಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಪರಿಶೀಲನೆ ಬಳಿಕ ಸಂದೇಶ ಇದೊಂದು ಹುಸಿ ಬಾಂಬ್ ಇರಬಹುದೆಂದು ಪರಿಶೀಲನೆ ಕೈಬಿಟ್ಟಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.