ಚಾಮರಾಜನಗರ, ಡಿಸೆಂಬರ್ 16: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಸಣಗುಡಿ-ಊಟಿ ರಸ್ತೆಯಲ್ಲಿ ಬೃಹದಾಕಾರದ ಹೆಬ್ಬುಲಿಯೊಂದು ಪ್ರತ್ಯಕ್ಷವಾಗಿದೆ. ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾದ ಈ ದೃಶ್ಯ ಅರಣ್ಯ ಸಿಬ್ಬಂದಿ ಹಾಗೂ ವಾಹನ ಸವಾರರಲ್ಲಿ ಅಚ್ಚರಿ ಮೂಡಿಸಿದೆ. ದಷ್ಟ ಪುಷ್ಟವಾದ ವ್ಯಾಘ್ರನನ್ನ ಕಂಡು ಸಂತಸಗೊಂಡ ಸವಾರರು, ಅದರ ಗಾತ್ರ ಕಂಡು ಆತಂಕಕ್ಕೆ ಒಳಗಾಗಿದ್ದಾರೆ. ಜಿಲ್ಲೆಯಲ್ಲಿ ಹುಲಿಗಳ ಸಂಚಾರ ಹೆಚ್ಚುತ್ತಿರುವುದಕ್ಕೆ ಇದು ಒಂದು ಸಾಕ್ಷಿಯಾಗಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.