Headlines

ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ | Cloudy Weather For 2 Days In Karnataka Weather Department

ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ | Cloudy Weather For 2 Days In Karnataka Weather Department



ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆಯಾಗುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ | Cloudy Weather For 2 Days In Karnataka Weather Department

ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಹಾಗೂ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಕಳೆದ ಒಂದು ವಾರದಿಂದ ಮೈ ಕೊರೆಯುವ ಚಳಿಯ ವಾತಾವರಣವಿತ್ತು. ಇದೀಗ ಹಿಂಗಾರು ಮಾರುತಗಳು ಚುರುಕುಗೊಂಡಿದ್ದು, ಬಂಗಾಳ ಕೊಲ್ಲಿಯ ಕಡೆಯಿಂದ ಬೀಸುತ್ತಿವೆ. ಹೀಗಾಗಿ, ಮಳೆಯ ವಾತಾವರಣ ಸೃಷ್ಟಿಯಾಗಿದೆ. ಬೆಂಗಳೂರಿನಲ್ಲಿ ಮಂಗಳವಾರ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡು ಬಂದಿತ್ತು.

ಇನ್ನೂ ಎರಡು ದಿನ ಇದೇ ವಾತಾವರಣ

ಇನ್ನೂ ಎರಡು ದಿನ ಇದೇ ವಾತಾವರಣ ಇರಲಿದೆ. ಆ ಬಳಿಕ ಸಾಮಾನ್ಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೋಡ ಕವಿದ ವಾತಾವರಣದ ಹಿನ್ನೆಲೆಯಲ್ಲಿ ಹಗಲು ವೇಳೆ ಸ್ವಲ್ಪ ಚಳಿಯ ವಾತಾವರಣ ಇರಲಿದೆ. ಆದರೆ, ರಾತ್ರಿ ವೇಳೆ ಚಳಿ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹವಾಮಾನ ಇಲಾಖೆ ಮುನ್ಸೂಚನೆ

ಇನ್ನೂ ಉತ್ತರ ಒಳನಾಡಿನ ಬೀದರ್‌ ಹಾಗೂ ಧಾರಾವಾಡದಲ್ಲಿ ಶೀತ ಅಲೆಯ ಭೀತಿ ಮುಂದುವರೆದಿದೆ. ಉಳಿದ ಜಿಲ್ಲೆಗಳಲ್ಲಿ ಚಳಿ ಪ್ರಮಾಣ ಒಂದಿಷ್ಟು ಕಡಿಮೆಯಾಗಿದೆ. ಧಾರವಾಡದಲ್ಲಿ ಅತಿ ಕಡಿಮೆ 9.8 ಡಿಗ್ರಿ ಸೆಲ್ಶಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



Source link

Leave a Reply

Your email address will not be published. Required fields are marked *