ಬೆಂಗಳೂರು, ಡಿಸೆಂಬರ್ 17: ಬೆಂಗಳೂರು (ಬೆಂಗಳೂರು) ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸತೀಶ್ ಅವರಿಗೆ ಮಹಿಳೆಯೊಬ್ಬರ ಅತಿರೇಕದ ಪ್ರೇಮ ಕಾಟ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ”ಚಿನ್ನಿ ಲವ್ ಯು… ಯು ಮಸ್ಟ್ ಲವ್ ಮಿ” ಎಂದು ಪ್ರೀತಿ ನಿವೇದನೆ ಮಾಡುತ್ತಾ ಮಹಿಳೆ ನಿರಂತರವಾಗಿ ಇನ್ಸ್ ಪೆಕ್ಟರ್ ಹಿಂದೆ ಬಿದ್ದಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದ ಮಹಿಳೆ, ತಾನು ಕಾಂಗ್ರೆಸ್ ಕಾರ್ಯಕರ್ತೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತನಗೆ ಪರಿಚಯ ಎಂದು ಹೇಳಿಕೊಂಡಿದ್ದಾಳೆ. ಮೋಟಮ್ಮ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಇರುವ ಫೋಟೋಗಳನ್ನು ಕಳುಹಿಸಿ, ಪ್ರೀತಿಸಲೇಬೇಕು ಎಂದು ಇನ್ಸ್ನವರ ಮೇಲೆ ಒತ್ತಡ ಹೇರಿದ್ದಾಳೆ ಎಂದು ದೂರಲಾಗಿದೆ.
ಪೊಲೀಸ್ ಠಾಣೆಗೆ ಕಜ್ಜಾಯ ಡಬ್ಬಿ, ಹೂಗುಚ್ಛ!
ಮಹಿಳೆಯ ಕಾಟ ಎಷ್ಟರ ಮಟ್ಟಿಗೆ ಹೋಗಿತ್ತು ಎಂದರೆ, ಇನ್ಸ್ ಪೆಕ್ಟರ್ ಠಾಣೆಯಲ್ಲಿ ಇಲ್ಲದ ವೇಳೆ ಕಜ್ಜಾಯದ ಡಬ್ಬಿ, ಹೂಗುಚ್ಛ ತಂದು ಠಾಣೆಯಲ್ಲೇ ಇಟ್ಟಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಒಂದೇ ಅಲ್ಲ, ಬರೋಬ್ಬರಿ 11 ವಿಭಿನ್ನ ಮೊಬೈಲ್ ಸಂಖ್ಯೆಗಳ ಮೂಲಕ ಇನ್ಸ್ ಪೆಕ್ಟರ್ಗೆ ಕರೆ ಮಾಡಿ ಪ್ರೀತಿ ನಿವೇದನೆ ಮಾಡುತ್ತಿದೆ. ಈ ಕಾರಣಕ್ಕೆ ಇನ್ಸ್ ಪೆಕ್ಟರ್ ಎಲ್ಲಾ 11 ಸಂಖ್ಯೆಗಳನ್ನು ಬ್ಲಾಕ್ ಮಾಡಲಾಗಿದೆ.
ರಕ್ತದಲ್ಲಿ ಪತ್ರ, ಆತ್ಮಹತ್ಯೆಯ ಬೆದರಿಕೆ!
ಅಷ್ಟಕ್ಕೂ ನಿಲ್ಲದ ಮಹಿಳೆ, ಲವ್ ಲೆಟರ್ ಜೊತೆಗೆ ‘Nexito Plus’ ಎಂಬ ಮಾತ್ರೆಯನ್ನು ಕೂಡ ಕಳುಹಿಸಿದ್ದಳು. ‘ನನ್ನ ಪ್ರೀತಿಯನ್ನು ನೀವು ಒಪ್ಪಿಕೊಳ್ಳುತ್ತಿಲ್ಲ, ನಿಮಗೆ ತೊಂದರೆ ಕೊಡಲು ನನಗೆ ಇಷ್ಟವಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನ ಸಾವಿಗೆ ನೀವೇ ಕಾರಣ’ ಎಂದು ಬರೆದು, ಹೃದಯದ ಚಿತ್ರವನ್ನೂ ಬಿಡಿಸಿ, ”ಚಿನ್ನಿ ಲವ್ ಯೂ, ಯು ಲವ್ ಮೀ” ಎಂದು ಬರೆದ ಪತ್ರವನ್ನು ಪೋಸ್ಟ್ ಮೂಲಕ ಪೋಸ್ಟ್ ಮೂಲಕ ಪೋಸ್ಟ್ ಮಾಡಲು ಕಳುಹಿಸಿರುವುದು ಮತ್ತೊಂದು ಗಂಭೀರ ಆರೋಪವಾಗಿದೆ.
ಈ ಮಧ್ಯೆ, ಗೃಹ ಸಚಿವರ ಕಚೇರಿಯಿಂದಲೂ ಮಹಿಳೆಯ ದೂರಿನ ಕುರಿತು ಕರೆ ಬಂದಿತ್ತು, ಆದರೆ, ಮಹಿಳೆ ಯಾವುದೇ ಅಧಿಕೃತ ದೂರು ನೀಡಿಲ್ಲ ಎಂದು ಇನ್ ಸ್ಪೆಕ್ಟರ್ ಸ್ಪಷ್ಟಪಡಿಸಿದ್ದಾರೆ.
ಪ್ರೀತಿಯ ಕಾಟ ತಾಳಲಾರದೆ ‘ಕೈ’ ಕಾರ್ಯಕರ್ತೆ ವಿರುದ್ಧ ಎಫ್ಐಆರ್
ಕೊನೆಗೆ ಮಹಿಳೆಯ ನಿರಂತರ ಕಾಟದಿಂದ ಬೇಸತ್ತ ಇನ್ಸ್ ಪೆಕ್ಟರ್ ಸತೀಶ್ ಕಾನೂನು ಕ್ರಮದ ಮೊರೆ ಹೋಗಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಆತ್ಮಹತ್ಯೆ ಬೆದರಿಕೆ ಆರೋಪದಡಿ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ: ಯುವತಿ ಮೇಲೆ ಪೊಲೀಸರಿಂದ ಹಲ್ಲೆ ಆರೋಪ: ಉಡುಪಿಯಲ್ಲಿ ಸಿಡಿದೆದ್ದ ಬಿಲ್ಲವ ಸಮುದಾಯ, ಏನಿದು ಕೇಸ್?
ಪ್ರಕರಣ ಇದೀಗ ಪೊಲೀಸರು ತನಿಖೆಯಲ್ಲಿದ್ದು, ಮಹಿಳೆಯ ವರ್ತನೆಯ ಹಿಂದಿನ ನಿಜಾಂಶಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ವರದಿ: ವಿಕಾಸ್, ಟಿವಿ9 ಬೆಂಗಳೂರು
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ