ನವದೆಹಲಿ, ಡಿಸೆಂಬರ್ 17: ಸಿಟಿಜನ್ ಪಾರ್ಟಿ ನಾಯಕರಾದ ಹಸ್ನತ್ ಅಬ್ದುಲ್ಲಾ ಅವರು ಪ್ರಚೋದನಕಾರಿ ಭಾರತ ಹೇಳಿಕೆಗಳ ವಿರುದ್ಧ ಭಾರತೀಯ ವಿದೇಶಾಂಗ ಸಚಿವಾಲಯ (MEA) ಬಾಂಗ್ಲಾದೇಶದ ಹೈಕಮಿಷನರ್ಗೆ ಸಮನ್ಸ್ ನೀಡಿದೆ. ಈ ಕುರಿತು ಭಾರತವು ಬಾಂಗ್ಲಾದೇಶದ (Bangldaesh) ಹೈಕಮಿಷನರ್ ರಿಯಾಜ್ ಹಮೀದುಲ್ಲಾ ಅವರಿಗೆ ಸಮನ್ಸ್ ಜಾರಿಯಾಗಿದೆ. ನೆರೆಯ ದೇಶವಾದ ಬಾಂಗ್ಲಾದೇಶದಲ್ಲಿ ಹಡಗೆಡುತ್ತಿರುವ ಭದ್ರತಾ ವಾತಾವರಣ ಮತ್ತು ಢಾಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಭದ್ರತೆಯ ಮೇಲೆ ಪರಿಣಾಮ ಬೀರುವ ಅಂಶಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ.
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರವು ವ್ಯಾಪಕ ವಿದ್ಯಾರ್ಥಿಗಳ ನೇತೃತ್ವದ ಪ್ರತಿಭಟನೆಗಳ ನಂತರ ಪತನಗೊಂಡಿತ್ತು. ಆಗಸ್ಟ್ 2024 ರಲ್ಲಿ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ ರಚನೆಯಾದ ಬಳಿಕ ಹದಗೆಟ್ಟಿದ್ದ ದ್ವಿಪಕ್ಷೀಯ ಸಂಬಂಧಗಳಲ್ಲಿ ಈ ಬೆದರಿಕೆ ಮತ್ತೊಂದು ಕೆಳಮಟ್ಟವನ್ನು ಗುರುತಿಸಿದೆ. ಕಳೆದ ಕೆಲವು ದಿನಗಳಿಂದ ಉಗ್ರಗಾಮಿಗಳು ಢಾಕಾದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಸುತ್ತಲೂ ಪ್ರತಿಭಟನೆಗಳನ್ನು ಯೋಜಿಸಲಾಗಿದೆ. ಹೀಗಾಗಿ, ಭಾರತ ಭದ್ರತೆ ಕೋರಿದೆ.
ಭಾರತದಲ್ಲಿರುವ ಬಾಂಗ್ಲಾದೇಶದ ಹೈಕಮಿಷನರ್ ರಿಯಾಜ್ ಹಮೀದುಲ್ಲಾ ಅವರನ್ನು ಇಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಕರೆಸಿದೆ ಮತ್ತು ಬಾಂಗ್ಲಾದೇಶದಲ್ಲಿ ಹದಗೆಡುತ್ತಿರುವ ಭದ್ರತಾ ವಾತಾವರಣದ ಬಗ್ಗೆ ಭಾರತದ ಬಲವಾದ ಕಳವಳವನ್ನು ತಿಳಿಸಿತು. ಅವರ ಗಮನವನ್ನು ನಿರ್ದಿಷ್ಟವಾಗಿ, ಕೆಲವರ ಚಟುವಟಿಕೆಗಳತ್ತ ಸೆಳೆಯಲಾಯಿತು… https://t.co/6GOZHBOgsB pic.twitter.com/jNdxSK0Nc3
– ANI (@ANI) ಡಿಸೆಂಬರ್ 17, 2025
ಇದನ್ನೂ ಓದಿ: ಶೇಖ್ ಹಸೀನಾ: ಶೇಖ್ ಹಸೀನಾಗೆ ಗಲ್ಲುಶಿಕ್ಷೆ; ಭಾರತದಿಂದ ಬಾಂಗ್ಲಾದೇಶಕ್ಕೆ ಹಸ್ತಾಂತರವಾಗುತ್ತಾರಾ ಮಾಜಿ ಪ್ರಧಾನಿ?
ಏನಿದು ಪ್ರಕರಣ?:
ಸೋಮವಾರ ಹಡಕಾದ ಸೆಂಟ್ರಲ್ ಶಹೀದ್ ಮಿನಾರ್ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಹಸ್ನತ್ ಅಬ್ದುಲ್ಲಾ, ಬಾಂಗ್ಲಾದೇಶವು ಪ್ರತ್ಯೇಕತಾವಾದಿ ಗುಂಪುಗಳು ಸೇರಿದಂತೆ ಭಾರತಕ್ಕೆ ಆತಂಕ ತಂದೊಡ್ಡುವ ಪಡೆಗಳಿಗೆ ಆಶ್ರಯ ನೀಡಬಹುದು. ಭಾರತದ “7 ಸಿಸ್ಟರ್ಸ್” ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ತ್ರಿಪುರಗಳನ್ನು ಭಾರತದಿಂದ ಕಡಿತಗೊಳಿಸಲು ಸಹಾಯ ಮಾಡಬಹುದು ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಭಾರತದಿಂದ ಶೇಖ್ ಹಸೀನಾ ಗಡಿಪಾರಿಗೆ ಮೊರೆಹೋಗಲು ಬಾಂಗ್ಲಾದೇಶ ನಿರ್ಧಾರ
“ನಾವು ಪ್ರತ್ಯೇಕತಾವಾದಿ ಮತ್ತು ಭಾರತ ವಿರೋಧಿ ಪಡೆಗಳಿಗೆ ಆಶ್ರಯ ನೀಡುತ್ತೇವೆ. ನಂತರ ನಾವು 7 ಸಹೋದರಿ ರಾಜ್ಯಗಳನ್ನು ಭಾರತದಿಂದ ಬೇರ್ಪಡಿಸುತ್ತೇವೆ” ಎಂದು ಹಸ್ನತ್ ಅಬ್ದುಲ್ಲಾ ಹೇಳಿದ್ದಾರೆ. “ಬಾಂಗ್ಲಾದೇಶದ ಸಾರ್ವಭೌಮತ್ವ, ಸಾಮರ್ಥ್ಯ, ಮತದಾನದ ಹಕ್ಕುಗಳು ಮತ್ತು ಮಾನವ ಹಕ್ಕುಗಳನ್ನು ಗೌರವಿಸುವವರಿಗೆ ಭಾರತ ಆಶ್ರಯ ನೀಡಿದರೆ, ಬಾಂಗ್ಲಾದೇಶ ಕೂಡ ಅದೇ ರೀತಿಯಲ್ಲಿ ಶಕ್ತಿಯುತವಾಗಿದೆ ಎಂದು ನಾನು ಭಾರತಕ್ಕೆ ಸ್ಪಷ್ಟಪಡಿಸುತ್ತೇನೆ” ಎಂದು ಅವರು ಹೇಳಿದರು. ಇದಾದ ಬಳಿಕ ಡಾಕಾದಲ್ಲಿರುವ ಭಾರತದ ರಾಯಭಾರ ಕಚೇರಿಗೆ ಬೆದರಿಕೆ ಬಂದಿತ್ತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ