ಮೋಹನ್​ಲಾಲ್ ನಟನೆಯ ‘ವೃಷಭ’ ಚಿತ್ರದಲ್ಲಿ ಕನ್ನಡಿಗರ ದಂಡು: ಟ್ರೇಲರ್ ನೋಡಿ

ಮೋಹನ್​ಲಾಲ್ ನಟನೆಯ ‘ವೃಷಭ’ ಚಿತ್ರದಲ್ಲಿ ಕನ್ನಡಿಗರ ದಂಡು: ಟ್ರೇಲರ್ ನೋಡಿ


ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಹೆಸರು ಮಾಡಿರುವ ನಂದ ಕಿಶೋರ್ ಅವರು ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗಮನ ಸೆಳೆಯಲು ಸಜ್ಜಾಗಿದ್ದಾರೆ. ಮಲಯಾಳಂ ಸ್ಟಾರ್ ನಟ ಮೋಹನ್ ಲಾಲ್ ಅಭಿನಯದ ‘ವೃಷಭ’ (ವೃಷಭ) ಸಿನಿಮಾಗೆ ನಂದ ಕಿಶೋರ್ ಆ್ಯಕ್ಷನ್-ಕಟ್ ಹೇಳಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಕೊಚ್ಚಿಯಲ್ಲಿ ಅದ್ದೂರಿಯಾಗಿ ನಡೆಯಿತು. ಮೋಹನ್ ಲಾಲ್ (ಮೋಹನ್ ಲಾಲ್)ಸಮರ್ಜಿತ್ ಲಂಕೇಶ್, ರಾಗಿಣಿ ದ್ವಿವೇದಿ, ನಯನ್ ಸಾರಿಕಾ, ನಂದ ಕಿಶೋರ್ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು.

‘ಕನೆಕ್ಟ್ ಮೀಡಿಯಾ’, ‘ಬಾಲಾಜಿ ಟೆಲಿಫಿಲ್ಮ್ಸ್’, ‘ಅಭಿಷೇಕ್ ಎಸ್. ವ್ಯಾಸ್ ಸ್ಟುಡಿಯೋಸ್’ ಜೊತೆಗೂಡಿ ‘ವೃಷಭ’ ಸಿನಿಮಾ ನಿರ್ಮಾಣ ಮಾಡಿದೆ. ಶೋಭಾ ಕಪೂರ್, ಏಕ್ತಾ ಕಪೂರ್, ಸಿ.ಕೆ. ಪದ್ಮ ಕುಮಾರ್, ವರುಣ್ ಮಾಥುರ್, ಸೌರಭ್ ಮಿಶ್ರ, ಅಭಿಷೇಕ್ ಎಸ್. ವ್ಯಾಸ್, ಪ್ರವೀರ್ ಸಿಂಗ್, ವಿಶಾಲ್ ಗುರ್ನಾನಿ, ಜೂಹಿ ಪರೇಖ್ ಮೆಹ್ತಾ ಅವರು ಈ ಸಿನಿಮಾವನ್ನು ನಿರ್ಮಿಸಿದ್ದಾರೆ. ಡಿಸೆಂಬರ್ 25ಕ್ಕೆ ವಿಶ್ವದಾದ್ಯಂತ ‘ವೃಷಭ’ ಸಿನಿಮಾ ರಿಲೀಸ್ ಆಗಲಿದೆ.

ವಿಶೇಷ ಎಂದರೆ ‘ವೃಷಭ’ ಸಿನಿಮಾದಲ್ಲಿ ಕನ್ನಡದ ಕಲಾವಿದರು ಹೆಚ್ಚಾಗಿ ನಟಿಸಿದ್ದಾರೆ. ನಾಯಕ ಮಗನ ಪಾತ್ರದಲ್ಲಿ ಸಮರ್ಜಿತ್ ಲಂಕೇಶ್ ನಟಿಸಿದ್ದಾರೆ. ರಾಗಿಣಿ ದ್ವಿವೇದಿ, ಗರುಡ ರಾಮ್, ಕಿಶೋರ್, ಅಯ್ಯಪ್ಪ ಪಿ. ಶರ್ಮಾ ಮುಂತಾದವರು ಮೋಹನ್ ಲಾಲ್ ಜೊತೆ ನಟಿಸಿರುವುದು ವಿಶೇಷ. ಟ್ರೇಲರ್‌ನಲ್ಲಿ ಈ ಎಲ್ಲರ ಪಾತ್ರಗಳನ್ನು ತೋರಿಸಲಾಗಿದೆ.

‘ವೃಷಭ’ ಸಿನಿಮಾದ ಟ್ರೇಲರ್:

ದ್ವಿಪಾತ್ರದಲ್ಲಿ ಮೋಹನ್ ಲಾಲ್ ನಟಿಸಿದ್ದಾರೆ. ರಾಜನಾಗಿ ಮತ್ತು ಉದ್ಯಮಿಯಾಗಿ ಅವರು ಕಾಣಿಸಿಕೊಳ್ಳಲಿದ್ದಾರೆ. ಈ ಟ್ರೇಲರ್ ಆಯಕ್ಷನ್ ದೃಶ್ಯಗಳಿಂದ ಕೂಡಿದೆ. ನಿರ್ಮಾಪಕಿ ಏಕ್ತಾ ಆರ್. ಕಪೂರ್ ಮಾತನಾಡಿ, ‘ನಮಗೆ ಈ ಅವಕಾಶ ನೀಡಿದ್ದಕ್ಕಾಗಿ ಮೋಹನ್ ಸರ್ ಅವರಿಗೆ ನಾನು ತುಂಬ ಕೃತಜ್ಞನಾಗಿದ್ದೇನೆ. ನಂದ ಕಿಶೋರ್ ಅವರ ದೃಷ್ಟಿಕೋನದಿಂದ ಕೆಲಸ ಮಾಡುವುದು ನಿಜವಾಗಿಯೂ ಪ್ರತಿಫಲದಾಯಕವಾಗಿದೆ’ ಎಂದು ಹೇಳಿದರು.

ಇದನ್ನೂ ಓದಿ: ಮೋಹನ್‌ಲಾಲ್‌ಗೆ ಸನ್ಮಾನ ಮಾಡಿದ ಮಮ್ಮೂಟಿ

‘ಮೋಹನ್ ಲಾಲ್ ಸರ್ ಜೊತೆ ಕೆಲಸ ಮಾಡುವುದು ಪ್ರತಿಯೊಬ್ಬ ನಿರ್ದೇಶಕನ ಕನಸು. ಅವರು ಸಂಪೂರ್ಣವಾಗಿ ಕಥೆಗೆ ಶರಣಾಗುತ್ತಾರೆ. ಈ ಕಥೆಯನ್ನು ಜೀವಂತಗೊಳಿಸಲು ಅವಿಶ್ರಾಂತವಾಗಿ ಶ್ರಮಿಸಿದ ತಂತ್ರಜ್ಞರ ಇಡೀ ತಂಡದ ಬಗ್ಗೆ ನನಗೆ ಹೆಮ್ಮೆ ಇದೆ’ ಎಂದು ನಿರ್ದೇಶಕ ನಂದ ಕಿಶೋರ್ ಹೇಳಿದರು. ಡಿಸೆಂಬರ್ 25 ರಂದು ಈ ಸಿನಿಮಾ ಪ್ಯಾನ್ ಇಂಡಿಯಾದಲ್ಲಿ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *