16

Image Credit : colors kannada
ಕ್ಯಾಪ್ಟನ್ಸಿ ಟಾಸ್ಕ್ ಆಡೋರು ಯಾರು?
ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಕ್ಯಾಪ್ಟನ್ ಆಗಬೇಕು ಎಂದು ಎಲ್ಲ ಸ್ಪರ್ಧಿಗಳು ಬಯಸುತ್ತಾರೆ. ಈ ಬಾರಿ ಜೋಡಿಯಾಗಿ ಕ್ಯಾಪ್ಟನ್ಸಿ ಟಾಸ್ಕ್ ಆಡಬೇಕಿತ್ತು. ಯಾರು? ಯಾರು ಆಡಬೇಕು ಎಂದು ಸೀಕ್ರೆಟ್ ರೂಮ್ನಲ್ಲಿದ್ದ ರಕ್ಷಿತಾ ಶೆಟ್ಟಿ, ಧ್ರುವಂತ್ ನಿರ್ಧಾರ ಮಾಡಬೇಕಿತ್ತು.
26
Image Credit : colors kannada
ರಕ್ಷಿತಾ ಶೆಟ್ಟಿ ಫೇವರಿಸಂ
ಬಿಗ್ ಬಾಸ್ ಮನೆಯಲ್ಲಿ ರಘು, ಗಿಲ್ಲಿ ನಟ, ಸೂರಜ್ ಸಿಂಗ್, ಕಾವ್ಯ ಶೈವ ನಡುವೆ ಕ್ಯಾಪ್ಟನ್ಸಿ ಟಾಸ್ಕ್ ನಡೆಯಬೇಕಿತ್ತು. ಈ ನಾಲ್ವರಲ್ಲಿ ಇಬ್ಬರನ್ನು ಜೋಡಿ ಮಾಡಬೇಕಿತ್ತು. ರಕ್ಷಿತಾ ಶೆಟ್ಟಿಗೆ ಗಿಲ್ಲಿ ನಟ, ರಘು ಅಂದರೆ ಫೇವರಿಟ್. ರಕ್ಷಿತಾ ಶೆಟ್ಟಿ ಹೊರಗಡೆ ಬಂದಾಗ ರಘು, ಗಿಲ್ಲಿ ಸಿಕ್ಕಾಪಟ್ಟೆ ಬೇಸರ ಮಾಡಿಕೊಂಡಿದ್ದರು. ಇದನ್ನು ಸೀಕ್ರೆಟ್ ರೂಮ್ನೊಳಗಡೆ ಕೂತ್ಕೊಂಡು ನೋಡಿದ ರಕ್ಷಿತಾ ಇನ್ನಷ್ಟು ಎಮೋಶನಲ್ ಆಗಿದ್ದರು.
36
Image Credit : colors kannada
ಜೋಡಿ ಮಾಡುವಾಗ ತಾರತಮ್ಯ
ರಕ್ಷಿತಾ ಶೆಟ್ಟಿ ಪ್ರಕಾರ ಗಿಲ್ಲಿ ನಟ, ರಘು ಜೋಡಿಯಾಗಬೇಕು, ಕಾವ್ಯ ಶೈವ, ಸೂರಜ್ ಇನ್ನೊಂದು ಜೋಡಿಯಾಗಬೇಕು. ಇದಕ್ಕೆ ಧ್ರುವಂತ್ ಒಪ್ಪಿಗೆ ಇರಲಿಲ್ಲ. ಈ ಎರಡೂ ಜೋಡಿಗಳು ಸಮಾನ ಆಗೋದಿಲ್ಲ ಎನ್ನೋದು ಧ್ರುವಂತ್ ಆಲೋಚನೆ ಆಗಿತ್ತು. ಆದರೆ ರಕ್ಷಿತಾ ಪ್ರಕಾರ ರಘು, ಗಿಲ್ಲಿ ನಟ ಮಾತ್ರ ಕ್ಯಾಪ್ಟನ್ ಆಗೋಕೆ ಅರ್ಹತೆ ಇರುವವರಂತೆ. ಬಿಗ್ ಬಾಸ್ ಒಮ್ಮತದ ನಿರ್ಧಾರ ಕೇಳಿದ್ದಕ್ಕೆ ಧ್ರುವಂತ್ ಕೂಡ ರಕ್ಷಿತಾ ಮಾತನ್ನು ಒಪ್ಪಲೇಬೇಕಾಯ್ತು.
46
Image Credit : colors kannada
ರಕ್ಷಿತಾಗೆ ಬೇಸರ ಆಯ್ತು
ಅಂತೂ ಆಟ ಆಡಿಸಿದರು. ಈ ಬಾರಿ ಕ್ಯಾಪ್ಟನ್ ಆಗಿರುವ ರಾಶಿಕಾ ಶೆಟ್ಟಿ ಅವರು ಉಸ್ತುವಾರಿಯಾಗಿದ್ದರು. ಆದರೆ ಅವರು ಉಸ್ತುವಾರಿಯಾಗಿ ಸರಿಯಾಗಿ ಆಡಿಸಲಿಲ್ಲ, ಒಬ್ಬರಿಗೆ ಒಂದು, ಇನ್ನೊಬ್ಬರಿಗೆ ಇನ್ನೊಂದು ಎನ್ನೋ ಥರ ರಾಶಿಕಾ ಮಾಡಿದರು. ಗಿಲ್ಲಿ ಸೋಲಬೇಕು ಎಂದು ರಾಶಿಕಾ ಬಯಸಿದ್ದರೆ, ಗಿಲ್ಲಿ ಗೆಲ್ಲಬೇಕು ಎಂದು ರಕ್ಷಿತಾ ಅಂದುಕೊಂಡಿದ್ದರು. ಕೊನೆಗೂ ಸೂರಜ್, ಕಾವ್ಯ ಶೈವ ಅವರು ಆಟದಲ್ಲಿ ಗೆದ್ದರು. ಇದು ರಕ್ಷಿತಾಗೆ ಬಹಳ ಬೇಸರ ಆಯ್ತು.
56
Image Credit : colors kannada
ರಕ್ಷಿತಾ ಶೆಟ್ಟಿ ಈಗ ಇರಿಟೇಟ್
ರಕ್ಷಿತಾ ಬಯಸಿದ್ದು ಒಂದು, ಆಗಿದ್ದು ಇನ್ನೊಂದು ಎಂದು ಧ್ರುವಂತ್ ಕೂಡ ಹಾಡು ಹಾಡಿ ತಿವಿದರು. ಸೀಕ್ರೆಟ್ ರೂಮ್ನೊಳಗಡೆ ಹೋದಬಳಿಕ ರಕ್ಷಿತಾ ನಿಜಕ್ಕೂ ಹೇಗೆ? ಅವರ ಮನಸ್ಸಿನಲ್ಲಿ ಏನಿದೆ? ಏನಾದರೂ ಮಾತನಾಡಿದರೆ, ಎಲ್ಲದಕ್ಕೂ ಜಗಳ ಆಡುವುದು ಯಾಕೆ? ಇಷ್ಟೆಲ್ಲ ಕೂಗಾಡೋದು ಯಾಕೆ ಎಲ್ಲವೂ ವೀಕ್ಷಕರಿಗೆ ಗೊತ್ತಾಗಿದೆ. ಒಟ್ಟಿನಲ್ಲಿ ರಕ್ಷಿತಾ ಶೆಟ್ಟಿ ಈಗ ಇರಿಟೇಟ್ ಆಗಿದ್ದಾರೆ.
66
Image Credit : Colors Kannada
ಯಾರಿಗೂ ಕೆಟ್ಟದ್ದು ಬಯಸಬಾರದು
ಕಾವ್ಯ ಶೈವ, ಸೂರಜ್ ತನ್ನನ್ನು ನಾಮಿನೇಟ್ ಮಾಡಿದ್ದರು, ಇವರಲ್ಲಿ ಒಬ್ಬರೂ ಕ್ಯಾಪ್ಟನ್ ಆಗಬಾರದು ಎಂದು ರಕ್ಷಿತಾ ಬಯಸಿದ್ದಳು. ಗಿಲ್ಲಿ ನಟ, ರಘು ಅವರನ್ನು ಕೂಡ ಹಿಂದೊಮ್ಮೆ ರಕ್ಷಿತಾ ನಾಮಿನೇಟ್ ಮಾಡಿದ್ದುಂಟು. ರಘು, ಗಿಲ್ಲಿ ಗೆಲುವಿಗಿಂತ ಜಾಸ್ತಿ, ಕಾವ್ಯ, ಸೂರಜ್ ಗೆಲ್ಲಬಾರದು ಎನ್ನೋದು ರಕ್ಷಿತಾ ಮನಸ್ಸಿನಲ್ಲಿದೆ. ಹೀಗಾಗಿಯೇ ಯಾರಿಗೂ ಕೆಟ್ಟದ್ದು ಬಯಸಬಾರದು ಎಂದು ಹೇಳುವುದು.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.