
ಬಿಗ್ಬಾಸ್ನಿಂದ ಹೊರಕ್ಕೆ ಬಂದ ಮೇಲೆ, ಈ ಬಗ್ಗೆ ಹೇಳಿಕೊಂಡಿದ್ದ ಅವರು, ಸುಮಾರು ನೂರು ದಿನಗಳ ಕಾಲ ನನ್ನನ್ನು ನೀವು ಆಶೀರ್ವಾದ ಮಾಡಿದ್ದೀರಿ. ಅಲ್ಲಿ ದೀರ್ಘ ಅವಧಿಯವರೆಗೆ ಇದ್ದು ಜೀವಿಸಿ, ಅನುಭವಿಸಿ ಬಂದಿದ್ದೇನೆ. ನನ್ನ ಪ್ರಕಾರ ನನ್ನ ಜೀವನದಕ್ಕೆ ಮತ್ತು ಬಿಗ್ಬಾಸ್ ಮನೆಗೆ ಎಂಟ್ರಿ ಕೊಡುವ ನನ್ನ ಸ್ನೇಹಿತರೆಲ್ಲಾ ಇದರಿಂದ ಆಗಿರುವ ದೊಡ್ಡ ಅನುಭವ ಎಂದರೆ, ಅವರವರ ಜೀವನ, ಅವರ ವ್ಯಕ್ತಿತ್ವ, ಅವರ ಅಪ್ಸ್ ಆ್ಯಂಡ್ ಡೌನ್ಸ್, ಅವರಲ್ಲಿ ಇರುವ ಕೆಟ್ಟತನ-ಒಳ್ಳೆಯತನ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಲು ಅವಕಾಶ ಸಿಕ್ಕಿದೆ. ನಮ್ಮ ನಡವಳಿಕೆಯ ಬಗ್ಗೆ, ತಪ್ಪುಗಳು ಇದ್ದರೆ ಅದನ್ನು ಸರಿಪಡಿಸಿ ಕರೆಕ್ಷನ್ ಮಾಡುವ ಅವಕಾಶ ಸಿಕ್ಕಿದೆ ಎಂದಿದ್ದರು ವಿಜಯ ರಾಘವೇಂದ್ರ.