ಟಿ೨೦ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರು ಈ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳುವಲ್ಲಿ ರಿಂಕು ಸಿಂಗ್ ಯಶಸ್ವಿಯಾಗಿದ್ದಾರೆ. ಆದರೆ ರಿಂಕು ಸಿಂಗ್ಗೆ ದಿಶನ್ ಅದೃಷ್ಟ ಖುಲಾಯಿಸಿದ್ದು ಇಶಾನ್ ಅಬ್ಬರದಿಂದ ಎಂಬುದು ವಿಶೇಷ.
ಇತ್ತೀಚೆಗೆ ಮುಗಿದ ಸೈಯ್ಯದ್ ಮುಷ್ತಾಕ್ ಅಲಿ ಪ್ರದರ್ಶನದಲ್ಲಿ ಇಶಾನ್ ಕಿಶನ್ ಭರ್ಜರಿ ನೀಡಿದ್ದರು. ಜಾರ್ಖಂಡ್ ಪರ ಕಣಕ್ಕಿಳಿದಿದ್ದ ಕಿಶನ್ 2 ಶತಕ ಹಾಗೂ 2 ಅರ್ಧಶತಕಗಳೊಂದಿಗೆ ಬರೋಬ್ಬರಿ 51 ರನ್ ಕಲೆಹಾಕಿದ್ದರು. ಈ ಭರ್ಜರಿ ಪ್ರದರ್ಶನದೊಂದಿಗೆ ಇಶಾನ್ ಕಿಶನ್ ಟೀಮ್ ಇಂಡಿಯಾದ ಬಾಗಿಲು ಬಡಿದಿದ್ದರು.
ಅತ್ತ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಶುಭ್ಮನ್ ಗಿಲ್ ಸಂಪೂರ್ಣ ವಿಫಲವಾದ ಕಾರಣ ಆತನನ್ನು ಟಿ೨೦ ತಂಡದಿಂದ ಬಿಡುವುದು ಬಿಸಿ ಬಿಸಿ ಪಾಲಿಗೆ ಅನಿವಾರ್ಯವಾಗಿತ್ತು. ಅವರ ಬದಲಿಗೆ ಯಾರನ್ನು ಆಯ್ಕೆ ಮಾಡಬೇಕೆಂಬ ಪ್ರಶ್ನೆಗೆ ಇದ್ದದ್ದು ಒಂದೇ ಉತ್ತರ ಇಶಾನ್ ಕಿಶನ್.
ಇಶಾನ್ ಕಿಶನ್ ಭರ್ಜರಿ ಫಾರ್ಮ್ ಇರುವ ಕಾರಣ ಅವರನ್ನೇ ಟಿ20 ಗೆ ಆಯ್ಕೆ ಮಾಡಲು. ಇಶಾನ್ ಕೀಪರ್ ಆಗಿರುವ ಇಶಾನ್ ಕಿಶನ್ ಶುಭಮನ್ ಗಿಲ್ ಅವರ ಸ್ಥಾನಕ್ಕೆ ಆಯ್ಕೆಯಾದಾಗ ಮತ್ತೊಮ್ಮೆ ಕೀಪರ್ ತಂಡದಿಂದ ಕೈ ಬಿಡುವುದು ಅನಿವಾರ್ಯವಾಯಿತು. ಇದರಿಂದ ಜಿತೇಶ್ ಶರ್ಮಾ ಟೀಮ್ ಇಂಡಿಯಾದಿಂದ ಹೊರಬಿದ್ದರು.
ಏಕೆಂದರೆ ಕೀಪರ್ ಬ್ಯಾಟರ್ ಆಗಿ ಸಂಜು ಸ್ಯಾಮ್ಸನ್ ಇದ್ದು, ಜೊತೆಗೆ ಹೆಚ್ಚುವರಿ ಕೀಪರ್ ಇದೀಗ ಇಶಾನ್ ಕಿಶನ್ ಅವರನ್ನು ಆಯ್ಕೆ ಮಾಡಲಾಗಿದೆ. ಕಿಶನ್ ಆಯ್ಕೆಯಿಂದ ಹೆಚ್ಚುವರಿ ಕೀಪರ್ ಮತ್ತು ಆರಂಭಿಕ ಸ್ಥಾನ ಕೂಡ ಭರ್ತಿಯಾಗಿದೆ. ಇದರಿಂದ ಕೀಪರ್ ಆಗಿ ತಂಡದಲ್ಲಿದ್ದ ಜಿತೇಶ್ ಶರ್ಮಾ ಅವರನ್ನು ಕೈ ಬಿಡಲೇಬೇಕಾಯಿತು.
ಅತ್ತ ಕೀಪರ್ ಜಿತೇಶ್ ಶರ್ಮಾ ಅವರನ್ನು ಕೈ ಬಿಟ್ಟ ಟೀಮ್ ಇಂಡಿಯಾಗೆ ಹೆಚ್ಚುವರಿ ಫಿನಿಶರ್ನ ಅನಿವಾರ್ಯತೆ ಎದುರಾಗಿದೆ. ಈ ವೇಳೆ ಬಿಸಿ ಮುಂದಿದ್ದ ಏಕೈಕ ಆಯ್ಕೆ ರಿಂಕು ಸಿಂಗ್. ಅದರಂತೆ ಭಾರತ ಟಿ20 ತಂಡದಲ್ಲಿ ರಿಂಕು ಸಿಂಗ್ಗೆ ಅವಕಾಶ ಲಭಿಸಿತು.
ಒಂದು ವೇಳೆ ಇಶಾನ್ ಕಿಶನ್ ಆರಂಭಿಕನಾಗಿ ಆಯ್ಕೆಯಾಗದೇ ಇದ್ದಿದ್ದರೆ ರಿಂಕು ಸಿಂಗ್ ಗೆ ಚಾನ್ಸ್ ಸಿಗುವ ಸಾಧ್ಯತೆ ಇರಲಿಲ್ಲ. ಏಕೆಂದರೆ ಇಶಾನ್ ಕಿಶನ್ ಹೆಚ್ಚುವರಿ ಆರಂಭಿಕ + ಹೆಚ್ಚುವರಿ ಕೀಪರ್ ತುಂಬಿದ ಶುಭಮನ್ ಗಿಲ್ ಹಾಗೂ ಜಿತೇಶ್ ಶರ್ಮಾ ತಂಡದಿಂದ ಹೊರಗುಳಿಯಬೇಕಾಗಿದೆ.
ಇದನ್ನೂ ಓದಿ: ಟೀಮ್ ಇಂಡಿಯಾದಿಂದ 7 ಆಟಗಾರರು ಔಟ್..!
ಇತ್ತ ಜಿತೇಶ್ ಶರ್ಮಾ ಹೊರಗುಳಿದ ಪರಿಣಾಮ ರಿಂಕು ಸಿಂಗ್ ಅವರಿಗೆ ಅದೃಷ್ಟ ಖುಲಾಯಿಸಿದೆ. ಈ ಮೂಲಕ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಕಾಣಿಸಿಕೊಂಡ ರಿಂಕು ಸಿಂಗ್ ನೇರವಾಗಿ ಟಿ20 ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.