Headlines

ಸುದೀಪ್ ಎಚ್ಚರಿಕೆ ಕೊಟ್ಟಿದ್ದು ಯಾರಿಕೆ ಮತ್ತು ಏಕೆ?

ಸುದೀಪ್ ಎಚ್ಚರಿಕೆ ಕೊಟ್ಟಿದ್ದು ಯಾರಿಕೆ ಮತ್ತು ಏಕೆ?


ಸುದೀಪ್ (ಸುದೀಪ್) ನಟನೆಯ ‘ಮಾರ್ಕ್’ ಸಿನಿಮಾ ಡಿಸೆಂಬರ್ 25 ರಂದು ಬಿಡುಗಡೆಯಾಗಲಿದೆ. ಸಿನಿಮಾದ ಪ್ರಚಾರ ಜೋರಾಗಿ ನಡೆಯುತ್ತಿದೆ. ಬೆಂಗಳೂರು, ಚೆನ್ನೈ ಇನ್ನೂ ಕೆಲವೆಡೆ ಪ್ರಚಾರ ಮುಗಿಸಿರುವ ಸುದೀಪ್ ನಿನ್ನೆ ಹುಬ್ಬಳ್ಳಿಯಲ್ಲಿ ಅದ್ಧೂರಿ ಪ್ರೀ ರಿಲೀಸ್ ಕಾರ್ಯಕ್ರಮ ನಡೆಸಿದ್ದರು. ಹುಬ್ಬಳ್ಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಸುದೀಪ್ ಸಿನಿಮಾ ತಂಡವನ್ನು ಕೊಂಡಾಡುವ ಜೊತೆಗೆ ಕೆಲವರಿಗೆ ಎಚ್ಚರಿಕೆ ಸಹ ನೀಡಿದ್ದಾರೆ. ನಾವು ಸಿನಿಮಾ ಬಿಡುಗಡೆ ಮಾಡುವ ಜೊತೆಗೆ ಯುದ್ಧ ಕೂಡ ಮಾಡಬೇಕಾಗಿದೆ, ಹೊರಗೆ ಪಡೆ ಒಂದು ಯುದ್ಧಕ್ಕೆ ರೆಡಿ ಆಗುತ್ತಿದೆ. ನಾನು ಸುಮ್ಮನಿದ್ದೆ, ಆದರೆ ಕೆರಳಿಸಿದರೆ ಸುಮ್ಮನಿರಲ್ಲ’ ಎಂದು.

ಸುದೀಪ್ ಅವರ ಈ ಮಾತುಗಳು ಸಖತ್ ವೈರಲ್ ಆಗಿವೆ. ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಸುದೀಪ್ ಅವರ ಈ ಮಾತುಗಳಿಗೆ ಅರ್ಥ ಕಲ್ಪಿಸುತ್ತಿದ್ದಾರೆ. ಸುದೀಪ್ ಅವರು ’45’ ಸಿನಿಮಾದ ಕುರಿತು ಮಾತನಾಡಿದ್ದಾರೆ ಎಂದು ಸಹ ಕೆಲವರು ಹೇಳುತ್ತಿದ್ದಾರೆ. ಆದರೆ ಸಾಮಾಜಿಕ ಜಾಲತಾಣ ಗಮನಿಸಿದರೆ ಸುದೀಪ್ ಯಾರ ಬಗ್ಗೆ ಮಾತನಾಡಿದ್ದಾರೆ ಎಂಬ ಸುಳಿವು ಸಿಗುತ್ತದೆ.

‘ಮಾರ್ಕ್’ ಸಿನಿಮಾದ ಪ್ರಚಾರ ಆರಂಭವಾದಿಂದಲೂ ದರ್ಶನ್ ಅಭಿಮಾನಿಗಳು ಸಿನಿಮಾದ ವಿರುದ್ಧ ಕಿತಾಪತಿ ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ. ‘ಮಾರ್ಕ್’ ಸಿನಿಮಾ ನಿರ್ದೇಶಕ ವಿಜಯ್ ಕಾರ್ತಿಕೇಯ, ‘ಕಾವೇರಿ ತಮಿಳಿಗೆ ಸೇರಬೇಕು’ ಎಂದು ಹೇಳಿ ನಕಲಿ ಪೋಸ್ಟ್ ತಯಾರಿಸಿ ಹಂಚಿಕೊಂಡು ಸುಳ್ಳು ಸುದ್ದಿ ಹಬ್ಬಿಸುವ ಯತ್ನ ಮಾಡಿದ್ದರು. ‘ಡೆವಿಲ್’ ಸಿನಿಮಾದ ಒಂಬತ್ತು ಸಾವಿರ ಪೈರಸಿ ಲಿಂಕ್‌ಗಳನ್ನು ತೆಗೆದು ಹಾಕಿದ್ದೇವೆ, ಈಗ ನಿಮಗೂ ನಾವು ಇದೇ ರೀತಿ ಮಾಡಿದ್ದೇವೆ ಎಂಬ ಮೂಲಕ ಪೈರಸಿ ಮಾಡುವ ಬೆದರಿಕೆ ಹಾಕಿದ್ದಾರೆ. ಬುಕ್ ಮೈ ಶೋನಲ್ಲಿ ಸಹ ರೇಟಿಂಗ್ ಕಡಿಮೆ ಮಾಡುವ ಪ್ರಯತ್ನವೂ ನಡೆದಿತ್ತು.

ಇದನ್ನೂ ಓದಿ:ಸುದೀಪ್ ಎದುರೇ ಧ್ರುವಂತ್ ಗೆ ಬೆದರಿಕೆ ಹಾಕಿದ ರಕ್ಷಿತಾ ಶೆಟ್ಟಿ

ಇದೆಲ್ಲವನ್ನೂ ಗಮನಿಸಿದ ಸುದೀಪ್ ಅವರು ಬಹುಷಃ ಹುಬ್ಬಳ್ಳಿಯಲ್ಲಿ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಸುದೀಪ್ ಅವರ ಮಾತುಗಳನ್ನೇ ಇರಿಸಿಕೊಂಡು ದರ್ಶನ್ ಅಭಿಮಾನಿಗಳು ಇದೀಗ ನೆಗೆಟಿವ್ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೆ, ‘ಮಾರ್ಕ್’ ಸಿನಿಮಾಕ್ಕೆ ಹಾನಿ ಮಾಡಿಯೇ ಸಿದ್ಧ ಎಂದು ಕೆಲವು ಕಿಡಿಗೇಡಿ ದರ್ಶನ್ ಅಭಿಮಾನಿಗಳು ಪೋಸ್ಟ್‌ಗಳನ್ನು ಹಂಚಿಕೊಂಡಿದ್ದಾರೆ.

ದರ್ಶನ್

ದರ್ಶನ್

ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಇದೇ ತಿಂಗಳು 11 ರಂದು ಬಿಡುಗಡೆಯಾಗುತ್ತಿದೆ. ಮೊದಲ ದಿನ ಉತ್ತಮ ಗಳಿಕೆ ಮಾಡಿದ ‘ಡೆವಿಲ್’ ಆ ನಂತರ ತುಸು ಮಂಕಾಯ್ತು. ಇದೀಗ ಡಿಸೆಂಬರ್ 25 ರಂದು ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ಬಿಡುಗಡೆ ಆಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *